ಚೆನ್ನೈ: ಜನರ ಸಾವಿಗೆ ಕಾರಣವಾದ ತಮಿಳುನಾಡಿನ ಸ್ಟೆರ್ಲೈಟ್ ಕಾಪರ್ ಸಂಸ್ಥೆಯ ವಿರುದ್ಧದ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥೆಯನ್ನು ಮುಚ್ಚುವಂತೆ ಆದೇಶ ನೀಡಿದೆ. ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ವೇದಾಂತ ಸ್ಟೆರ್ಲೈಟ್ ಕಾಪರ್ ಸ್ಮೆಲ್ಟರ್ ಘಟಕವನ್ನು ಮುಚ್ಚುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದ್ದು, ಅಲ್ಲದೆ ಕಂಪನಿಗೆ ನೀಡಲಾಗುತ್ತಿರುವ ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸುವಂತೆ ಆದೇಶಿಸಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ನಸೀಮುದ್ದೀನ್ ಅವರು ಈ ಆದೇಶ ಹೊರಡಿಸಿದ್ದು, ನಿನ್ನೆ ಸಂಜೆಯಿಂದಲೇ ಸಂಸ್ಥೆಯ ವಿದ್ಯುತ್ ಸಂಪರ್ಕವನ್ನೂ…
ಉತ್ತರ ಕೊರಿಯಾದ ಶೃಂಗಸಭೆಯನ್ನು ರದ್ದುಗೊಳಿಸಿದ ಡೊನಾಲ್ಡ್ ಟ್ರಂಪ್
May 25, 2018ವಾಷಿಂಗ್ಟನ್: ಜೂ.12ಕ್ಕೆ ನಿಗದಿಯಾಗಿದ್ದ ಉತ್ತರ ಕೊರಿಯಾದ ಶೃಂಗಸಭೆಯಲ್ಲಿ ಭಾಗವಹಿಸುವುದರಿಂದ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದಾರೆ. ಉತ್ತರ ಕೊರಿಯಾ ಇತ್ತೀಚೆಗೆ ನೀಡಿದ್ದ ಹೇಳಿಕೆಯಲ್ಲಿ ಹಗೆತನ ಹಾಗೂ ಕೋಪವನ್ನು ಕಾರಣವನ್ನಾಗಿ ನೀಡಿರುವ ಡೊನಾಲ್ಡ್ ಟ್ರಂಪ್ ಶೃಂಗಸಭೆಯನ್ನು ರದ್ದುಗೊಳಿ ಸಿದ್ದಾರೆ. ಶ್ವೇತ ಭವನದಿಂದ ಬಿಡುಗಡೆಯಾಗಿರುವ ಅಧಿಕೃತ ಪತ್ರದಲ್ಲಿ ಡೊನಾಲ್ಡ್ ಟ್ರಂಪ್ ಶೃಂಗಸಭೆಗೆ ಭಾಗಿಯಾಗದೇ ಇರುವುದನ್ನು ಸ್ಪಷ್ಟಪಡಿಸಲಾಗಿದೆ. ಉತ್ತರ ಕೊರಿಯಾ ಅವರ ಅಣ್ವಸ್ತ್ರ ಸಾಮರ್ಥ್ಯದ ಬಗ್ಗೆ ಮಾತನಾಡುತ್ತದೆ. ನಮ್ಮ ಬಳಿಯೂ ಅಣ್ವಸ್ತ್ರಗಳಿವೆ, ಆದರೆ ಅವುಗಳು ಬಳಕೆಯಾಗದಂತೆ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ರಂಪ್…
ರಾಷ್ಟ್ರೀಯ ಚಲನಚಿತ್ರ ಅವಾರ್ಡ್: ಶ್ರೀದೇವಿಗೆ ಮರಣೋತ್ತರ ಅತ್ಯುತ್ತಮ ನಟಿ ಪ್ರಶಸ್ತಿ
May 4, 2018ನವದೆಹಲಿ: ಇತ್ತೀಚೆಗೆ ಇಹಲೋಕ ತ್ಯಜಿಸಿದ ತ್ರಿಲೋಕ ಸುಂದರಿ ಬಾಲಿವುಡ್ ನಟಿ ಶ್ರೀದೇವಿ ಗೆ ಮರಣೋತ್ತರವಾಗಿ ನೀಡಲಾದ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿ ಯನ್ನು ಅವರ ಪತ್ನಿ ಬೋನಿ ಕಪೂರ್ ಹಾಗೂ ಮಕ್ಕಳಾದ ಜಾನವಿ ಮತ್ತು ಖುಷಿ ಸ್ವೀಕರಿಸಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀದೇವಿ ಫೆಬ್ರವರಿ 24 ರಂದು ದುಬೈನಲ್ಲಿ ಮರಣ ಹೊಂದಿದ್ದರು. ಹಿಂದಿ ಚಿತ್ರ ಮಾಮ್ನಲ್ಲಿನ ಅಮೋಘ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ನಟ ವಿನೋದ್…
ಮೊದಲ ಬಾರಿಗೆ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸದಲ್ಲಿ ಭಾರತ-ಪಾಕಿಸ್ತಾನ!
April 30, 2018ನವದೆಹಲಿ: ರಾಷ್ಟ್ರೀಯವಾಗಿ, ಧಾರ್ಮಿಕ ವಾಗಿ, ಸಾಂಪ್ರದಾಯಿಕವಾಗಿ ಬದ್ಧ ವೈರಿ ರಾಷ್ಟ್ರಗಳಾಗಿರುವ ಪಾಕಿಸ್ತಾನ ಮತ್ತು ಭಾರತ ಜತೆ ಇದೇ ಮೊದಲ ಬಾರಿಗೆ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸ ದಲ್ಲಿ ಪಾಲ್ಗೊಳ್ಳಲಿವೆ. ರಷ್ಯಾ ದಲ್ಲಿ ಸೆಪ್ಟೆಂಬರ್ನಲ್ಲಿ ವಿವಿಧ ರಾಷ್ಟ್ರಗಳ ಸೇನಾ ಸಮರಾಭ್ಯಾಸ ನಡೆಯಲಿದೆ. ಶಾಂಘೈ ಕಾಪೆರ್Çೀರೇಷನ್ ಈ ಸಮರಾಭ್ಯಾಸವನ್ನು ಆಯೋಜಿಸುತ್ತಿದೆ. ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ಈ ಸಮರಾಭ್ಯಾಸದಲ್ಲಿ ಪಾಲ್ಗೊಳ್ಳಲಿವೆ. ರಷ್ಯಾದ ಕಣ ವೆ ಪ್ರದೇಶ ಉರಾಲ್ ಬೆಟ್ಟ ಶ್ರೇಣ ಯಲ್ಲಿ ಸೆಪ್ಟೆಂಬರ್ನಲ್ಲಿ ಭಯೋತ್ಪಾದನ ವಿರೋಧಿ ಸಮರಭ್ಯಾಸ ನಡೆಯಲಿದ್ದು ಭಾರತ,…
ಎನ್ಆರ್ಐ ಮಹಿಳೆ ನಿಗೂಢ ಸಾವು, ಬಾತ್ಟಬ್ನಲ್ಲಿ ಶವ ಪತ್ತೆ
April 30, 2018ಸೂರಜ್ಕುಂಡ್: ಬಾಲಿವುಡ್ ನಟಿ ಶ್ರೀದೇವಿ ಅವರ ನಿಗೂಢ ಸಾವಿನ ನೆನಪು ಮಾಸುವ ಮುನ್ನವೇ ಅದೇ ಘಟನೆ ಹೋಲುವ ಇನ್ನೊಂದು ದುರಂತ ಸಂಭವಿಸಿದೆ. ಹರಿಯಾಣ ಸೂರಜ್ಕುಂಡ್ನ ಹೋಟೆಲ್ ತಾಜ್ ವಿವಾಂತಾದಲ್ಲಿ ಅನಿವಾಸಿ ಭಾರತೀಯ ಮಹಿಳೆಯ ದೇಹವೊಂದು ಸ್ನಾನದ ಟಬ್ನಲ್ಲಿ ಪತ್ತೆಯಾಗಿದೆ. ಅಮೆರಿಕದ ನ್ಯೂಜೆರ್ಸಿಯಲ್ಲಿ ಉದ್ಯಮಿಯಾಗಿರುವ ಅರುಣ್ ಅವರ ಪತ್ನಿ ಋತು ಕುಮಾರ್ ತಾವು ತಂಗಿದ್ದ ಐಷಾರಾಮಿ ಹೋಟೆಲ್ನ ಸ್ನಾನದ ಟಬ್ನಲ್ಲಿ ಬಿದ್ದು ಶವವಾಗಿದ್ದಾರೆ. ಗ್ರೇಟರ್ ಕೈಲಾಸ್ನ ನಿವಾಸಿಯಾದ ಅರುಣ್ ಅವರ ಪತ್ನಿ ತಾಜ್ ವಿವಾಂತಾದ ಕೊಠಡಿ ಸಂಖ್ಯೆ 631ರಲ್ಲಿ…
ಸುಪ್ರೀಂ ನ್ಯಾಯಾಧೀಶೆಯಾಗಿ ಇಂದು ಮಲ್ಹೋತ್ರಾ ನೇಮಕ
April 27, 2018ನವದೆಹಲಿ: ಹಿರಿಯ ವಕೀಲರಾದ ಇಂದು ಮಲ್ಹೋತ್ರಾ ಅವರನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹುದ್ದೆಗಾಗಿ ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಕೇಂದ್ರ ಸರ್ಕಾರ ಬುಧವಾರ ಅಂಗೀಕರಿಸಿದೆ. ಇದರೊಂದಿಗೆ ಸುಪ್ರೀಂಕೋರ್ಟ್ ನ್ಯಾಯಾಧೀಶೆಯಾಗಿ ನೇರವಾಗಿ ನೇಮಕವಾಗುತ್ತಿರುವ ದೇಶದ ಮೊದಲ ಮಹಿಳಾ ವಕೀಲೆ ಎಂಬ ಗೌರವಕ್ಕೆ ಇಂದು ಮಲ್ಹೋತ್ರಾ ಪಾತ್ರರಾಗಿದ್ದಾರೆ. ಇಂದು ಮಲ್ಹೋತ್ರಾ ಅವರು ಶುಕ್ರವಾರ ಸುಪ್ರೀಂಕೋರ್ಟ್ ನ್ಯಾಯಾಧೀಶೆಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನ್ಯಾಯ ವಾದಿಗಳ ಕುಟುಂಬದಿಂದಲೇ ಬಂದಿರುವ ಇಂದು ಮಲ್ಹೋತ್ರಾ ಅವರ ತಂದೆ ಒ.ಪಿ. ಮಲ್ಹೋತ್ರಾ ಸಹ ಹಿರಿಯ ನ್ಯಾಯವಾದಿಗಳಾಗಿದ್ದು, ಅವರ ಹಿರಿಯ ಸೋದರ…
ಸಿಎಸ್ಕೆ ವಿರುದ್ಧ ನಿಧಾನಗತಿ ಬೌಲಿಂಗ್: ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ
April 27, 2018ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬೆಂಗಳೂರಿನಲ್ಲಿ ಕಳೆದ ರಾತ್ರಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿಗೆ 12 ಲಕ್ಷ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಗೆ ಸಂಬಂಧಪಟ್ಟಂತೆ ಕನಿಷ್ಠ ನಿಧಾನಗತಿಯ ದಂಡಗಳಲ್ಲಿ ಇದು ರಾಯಲ್ ಚಾಲೆಂಜರ್ಸ್ ದಂಡದ ವಿರುದ್ಧ ಹಾಕಲಾಗಿರುವ ಮೊದಲ ದಂಡವಾಗಿದ್ದು, ವಿರಾಟ್ ಕೊಹ್ಲಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್ನ ಪತ್ರಿಕಾ ಹೇಳಿಕೆ ತಿಳಿಸಿದೆ.
ಮಮತಾ ಬ್ಯಾನರ್ಜಿಯನ್ನು ‘ಶೂರ್ಪನಖಿ’ ಎಂದು ಕರೆದ ಉತ್ತರ ಪ್ರದೇಶ ಬಿಜೆಪಿ ಶಾಸಕ
April 26, 2018ಉತ್ತರ ಪ್ರದೇಶ: ವಿವಾದಾತ್ಮಕ ಹೇಳಿಕೆ ಗಳನ್ನು ತಡೆಗಟ್ಟಿ ಎಂದು ಪ್ರಧಾನಿ ನರೇಂದ್ರಮೋದಿ ತನ್ನ ಪಕ್ಷದ ನಾಯಕರಿಗೆ ಹೇಳಿದ ಮಾರನೇ ದಿನವೇ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರಸಿಂಗ್ ಮಮತಾ ಬ್ಯಾನರ್ಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುರೇಂದ್ರಸಿಂಗ್, ಕಾಂಗ್ರೆಸ್ ಪಕ್ಷವನ್ನು ರಾವಣನಿಗೆ ಹೋಲಿಕೆ ಮಾಡಿದ್ದು, ಮಮತಾ ಬ್ಯಾನರ್ಜಿಯನ್ನು ಶೂರ್ಪನಖಿ ಎಂದು ಕರೆದಿದ್ದಾರೆ. ಹಿಂದೂ ಮಹಾಗ್ರಂಥ ರಾಮಾಯಣದಲ್ಲಿ ರಾವಣನ ತಂಗಿ ಶೂರ್ಪನಖಿ ಆಗಿದ್ದಾಳೆ. ಬೈರಿಯಾದಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿರುವ ಸುರೇಂದ್ರಸಿಂಗ್ ಮಮತಾ ಬ್ಯಾನರ್ಜಿ ಟೀಕಿಸುವ ಭರದಲ್ಲಿ ವಿವಾದಾತ್ಮಕ…
ನಾಯಕತ್ವ ತ್ಯಜಿಸಿದ ಗಂಭೀರ್, ಶ್ರೇಯಸ್ಗೆ ಪಟ್ಟ
April 26, 2018ನವದೆಹಲಿ: ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕಳಪೆ ಪ್ರದರ್ಶನ ನೀಡುತ್ತಿರು ವುದರಿಂದ ಬೇಸತ್ತು ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದಾರೆ. ಗಂಭೀರ್ ನಾಯಕತ್ವದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಆರು ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇನ್ನು ರನ್ ರೇಟ್ನಲ್ಲೂ ತಂಡ ಹೇಳಿಕೊಳ್ಳುವಂತಾ ಸಾಧನೆ ಮಾಡಿಲ್ಲ. ಈ ಎಲ್ಲಾ ಅಂಶಗಳನ್ನು ಪರಿಗಣ ಸಿ ಗೌತಮ್ ಗಂಭೀರ್ ನಾಯಕತ್ವದಿಂದ ಕೆಳಗಿಳಿದಿದ್ದು ಯುವ ಆಟಗಾರ ಶ್ರೇಯಸ್ ಅಯ್ಯರ್ ನಾಯಕತ್ವ…
ಗಂಡು ಮಕ್ಕಳನ್ನು ಜವಾಬ್ದಾರಿಯುತರನ್ನಾಗಿ ಮಾಡಬೇಕು
April 25, 2018ಮಂಡ್ಲ: ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಪೂರಕವಾದ ಸುಗ್ರೀವಾಜ್ಞೆಗೆ ಅನುಮೋದನೆ ಪಡೆಯ ಲಾಗಿದೆ. ಆದರೆ, ಕುಟುಂಬಗಳು ತಮ್ಮ ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಮಂಡ್ಲದಲ್ಲಿಂದು ರಾಷ್ಟ್ರೀಯ ಪಂಚಾಯತ್ ರಾಜ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರು ಮತ್ತು ಬಾಲಕಿಯರಿಗೆ ಸುರಕ್ಷತೆ ಹೆಚ್ಚಿಸುವುದು ಸಾಮಾಜಿಕ ಆಂದೋಲನವಾಗಿ ರೂಪುಗೊಳ್ಳಬೇಕಾಗಿದೆ ಎಂದು ಕರೆ ನೀಡಿದರು. ನಿಮ್ಮ ಧ್ವನಿಯನ್ನು ಆಲಿಸಿ ಕೇಂದ್ರ ಸರ್ಕಾರ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲಿ ಗೇರಿಸುವ…