ಬೆಂಗಳೂರು, ನ.24 (ಕೆಎಂಶಿ)- ಚಿಲುಮೆ ಸಂಸ್ಥೆಯ ಅಕ್ರಮಗಳ ಹಿಂದಿನ ರೂವಾರಿಗಳ ಮೇಲೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ. ಇಷ್ಟು ದಿನವಾದರೂ ಈ ಅಕ್ರಮ ಸಂಸ್ಥೆಯ ಹಣಕಾಸಿನ ವಹಿವಾಟಿನ ಮೇಲೆ ಈ ಸಂಸ್ಥೆಗೆ ಹಣ ನೀಡಿದವರ ಮೇಲೆ ಯಾಕೆ ಸಿಬಿಐ, ಐಟಿ, ಇಡಿ ದಾಳಿ ನಡೆಸಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಖಾಸಗಿ ಸಂಸ್ಥೆ ಚಿಲುಮೆಗೆ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೆ ವಹಿಸಿದ್ದರ ಹಿಂದೆ ಬಿಬಿಎಂಪಿ ಮತ್ತು ಚುನಾವಣಾ ಆಯೋಗದ ಅಧಿಕಾರಿಗಳೂ ಇದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ….
ಆಸ್ತಿ ನೋಂದಣಿ ಆದ ಏಳು ದಿನದಲ್ಲಿ ಖಾತಾ ನೀಡಿಕೆ
November 23, 2022ಬೆಂಗಳೂರು, ನ.22 (ಕೆಎಂಶಿ)- ಆಸ್ತಿ ನೋಂದಣಿ ಮಾಡಿದ ಏಳು ದಿನಗಳ ಒಳಗೆ ಖಾತಾ ನೀಡುವ ಸರ್ಕಾರಿ ಆದೇಶ ಹೊರಬಿದ್ದಿದೆ. ಸುದ್ದಿಗಾರರಿಗೆ ಈ ವಿಷಯ ತಿಳಿ ಸಿದ ಕಂದಾಯ ಸಚಿವ ಆರ್. ಅಶೋಕ್, ಇದುವರೆಗೆ ನೋಂದಣಿ ಮಾಡಿದ ಮೂವತ್ನಾಲ್ಕು ದಿನಗಳ ನಂತರ ಖಾತಾ ನೀಡಲಾಗುತ್ತಿತ್ತು. ಹಾಗಾಗಿ ಖಾತಾ ಪಡೆಯಲು ನೋಂದಣಿ ಕಚೇರಿಗಳಿಗೆ ಸುತ್ತಾಡಬೇಕಾಗಿತ್ತು ಹಾಗೂ ಅನಗತ್ಯವಾಗಿ ಜೇಬಿನಿಂದ ಹಣ ಕಳೆದುಕೊಳ್ಳುವುದಲ್ಲದೆ, ಹಿಂಸೆಗೆ ಒಳಪಡು ತ್ತಿದ್ದರು. ಇದನ್ನು ತಪ್ಪಿಸಲು ಮತ್ತು ಸರಳ ರೀತಿಯಲ್ಲಿ ಆಸ್ತಿ ನೋಂದಣಿ ಪತ್ರ ಮತ್ತು ಖಾತಾ ದೊರೆಯುವಂತೆ…
ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ
November 23, 2022ಬೆಂಗಳೂರು, ನ.22- ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆಗೆ ಸಿದ್ಧತೆ ಪ್ರಾರಂಭವಾಗಿದ್ದು, ಅದ ಕ್ಕಾಗಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆಗೆ ಸರ್ಕಾರ ಮುಂದಾಗಿದೆ. ನಾಡಿನ ಪ್ರಮುಖ ಸ್ವಾಮೀಜಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗ ಲಿದೆ. ನೈತಿಕ ಶಿಕ್ಷಣದ ಪಠ್ಯ ಹೇಗೆ ಇರಬೇಕು ಎಂಬ ಬಗ್ಗೆ ಶ್ರೀಗಳು ಪಠ್ಯ ಸಿದ್ಧ ಮಾಡಲಿದ್ದಾರೆ. ನೈತಿಕ ಶಿಕ್ಷಣದ ಪಠ್ಯ ಸಿದ್ಧತೆಗೆ ನಾಡಿನ ಶ್ರೇಷ್ಠ ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರದ ಚಿಂತನೆ ನಡೆಸಿದೆ. ಸುತ್ತೂರು, ಆದಿಚುಂಚನಗಿರಿ, ಸಿದ್ದಗಂಗಾ ಶ್ರೀಗಳು ಸಮಿತಿಯಲ್ಲಿ ಇರಲಿದ್ದಾರೆ. ಸಮಿತಿ…
ಹೋರಾಟ ಕೈ ಬಿಡಲು ಸಿದ್ದರಾಮಯ್ಯ ಬ್ರಾಹ್ಮಣರಲ್ಲಿ ಮನವಿ
November 23, 2022ಬೆಂಗಳೂರು,ನ.22(ಜಿಎ)- ಚಿಂತಕ ಪ.ಮಲ್ಲೇಶ್ ವಿರುದ್ಧ ಬ್ರಾಹ್ಮಣ ಮಹಾ ಸಭಾ ರಾಜ್ಯಾದ್ಯಂತ ನಡೆಸುತ್ತಿರುವ ಹೋರಾಟವನ್ನು ಕೈ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಇಂದು ಬೆಂಗ ಳೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷÀ ಹಾಗೂ ಖ್ಯಾತ ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಳ್ಳಿ ಅವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಈ ಮನವಿ ಮಾಡಿ ದ್ದಾರೆ. ನ.15ರಂದು ಮೈಸೂರಿನಲ್ಲಿ ನಡೆದ `ಸಿದ್ದರಾಮಯ್ಯ-75′ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಚಿಂತಕ ಪ.ಮಲ್ಲೇಶ್ ಬ್ರಾಹ್ಮಣ ಸಮುದಾಯ ನಿಂದಿಸಿರುವ ಪ್ರಕರಣ…
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಶಾರೀಕ್ಗೆ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಸಂಪರ್ಕ
November 22, 2022ಮಂಗಳೂರು, ನ. 21- ಮಂಗಳೂರಿನಲ್ಲಿ ಶನಿವಾರ ಆಟೋದಲ್ಲಿ ಕುಕ್ಕರ್ ಸ್ಫೋಟಗೊಂಡ ಪ್ರಕರಣದ ಶಂಕಿತ ಆರೋಪಿ ಅಂತರರಾಷ್ಟ್ರೀಯ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ್ದ ಎಂದು ಕಾನೂನು-ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಕ್ಕರ್ ಸ್ಫೋಟದ ಆರೋಪಿಯನ್ನು ತೀರ್ಥಹಳ್ಳಿಯ ಶಾರೀಕ್ ಎಂದು ಗುರುತಿಸಲಾಗಿದೆ ಎಂದು ಖಚಿತಪಡಿಸಿದರು. ಆತನ ಮಲತಾಯಿ ಶಬಾನ ಸೋದರಿಯರಾದ ಆತಿಯಾ, ಯಾಸ್ಮಿನ್ ಅವರುಗಳು ಆತನನ್ನು ಗುರು ತಿಸಿದ್ದಾರೆ ಎಂದು ಅವರು ಹೇಳಿದರು. ಮೈಸೂರಿನಲ್ಲಿ ತಾನೇ ತಯಾರಿಸಿದ್ದ ಕುಕ್ಕರ್…
ಕಾಡಾನೆ ಹಾವಳಿ ತಡೆಗೆ ಮೈಸೂರು-ಕೊಡಗು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಟಾಸ್ಕ್ಫೋರ್ಸ್ ರಚನೆ
November 22, 2022ಬೆಂಗಳೂರು, ನ.21(ಕೆಎಂಶಿ)- ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೆÇೀರ್ಸ್ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆ ಯಲ್ಲಿ ಇಂದು ನಡೆದ ಸಭೆಯಲ್ಲಿ ನಿರ್ಧ ರಿಸಿ, ಸರ್ಕಾರಿ ಆದೇಶ ಹೊರಬಿದ್ದಿದೆ. ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿ ಗಳ ಅಧ್ಯಕ್ಷತೆಯಲ್ಲಿ ಎಲಿಫೆಂಟ್ ಟಾಸ್ಕ್ಫೆÇೀರ್ಸ್ ರಚಿಸಲಾಗುವುದು. ಟಾಸ್ಕ್ಫೆÇೀರ್ಸ್ಗಳನ್ನು ತಕ್ಷಣ ದಿಂದಲೇ ರಚಿಸಿ ಕಾರ್ಯಪ್ರವೃತ್ತರಾಗಬೇಕಿದ್ದು, ಆಯಾ ಅರಣ್ಯ ವೃತ್ತದ ಮುಖ್ಯ…
ಕಾಂಗ್ರೆಸ್ ಗಂಭೀರ ಆರೋಪ;ಜಾಗೃತಿ ಮೂಡಿಸುವ ನೆಪದಲ್ಲಿ ಮತದಾರರ ಡಾಟಾಗೆ ಕನ್ನ
November 18, 2022ಬೆಂಗಳೂರು, ನ.17(ಕೆಎಂಶಿ)- ರಾಜ್ಯದಲ್ಲಿ ಮತ್ತೆ ಪಕ್ಷ ವನ್ನು ಅಧಿಕಾರಕ್ಕೆ ತರಲು ಮತದಾರರನ್ನೇ ಆಪರೇಷನ್ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಇಂದಿಲ್ಲಿ ಗಂಭೀರವಾಗಿ ಆರೋಪಿಸಿದೆ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಇದೀಗ ಮುಂದಿನ ಚುನಾವಣೆಯಲ್ಲಿ ಮತದಾರ ರನ್ನೇ ಆಪರೇಷನ್ ಕಾರ್ಯಾಚರಣೆಗೆ ಒಳಪಡಿಸಿ, ಅಧಿಕಾರಕ್ಕೆ ಬರಲು ಹೊರಟಿದೆ ಎಂದು ದಾಖಲೆ ಸಮೇತ ದೂರಿದ್ದಾರೆ. ಮತದಾರರ ಜಾಗೃತಿ ಹೆಸರಲ್ಲಿ ಮತದಾರರ ಡಾಟಾ ಕಳ್ಳತನಕ್ಕೆ ಇಳಿದಿರುವ ಬಿಜೆಪಿ ಸರ್ಕಾರ ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನೇ ಹೈಜಾಕ್ ಮಾಡಲು ಮುಂದಾ…
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ವರ್ಚುಯಲ್ ಮೂಲಕ ಪ್ರಧಾನಿ ಚಾಲನೆ
November 17, 2022ಬೆಂಗಳೂರು, ನ.16(ಕೆಎಂಶಿ)- ಮೂಲಸೌಲಭ್ಯ ಅಭಿವೃದ್ಧಿಗೆ ಮುಂಬ ರುವ ದಿನಗಳಲ್ಲಿ 100 ಟ್ರಿಲಿಯನ್ ಡಾಲರ್ನಷ್ಟು ಅಗಾಧ ಮೊತ್ತವನ್ನು ವಿನಿಯೋಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 25ನೇ ವರ್ಷದ ಪ್ರತಿಷ್ಠಿತ ಬೆಂಗ ಳೂರು ತಂತ್ರಜ್ಞಾನ ಶೃಂಗಸಭೆಯನ್ನು ಉದ್ದೇಶಿಸಿ ವರ್ಚುಯಲ್ ಆಗಿ ಮಾತ ನಾಡಿದ ಅವರು, ದೇಶದಲ್ಲಿ ಬಂಡ ವಾಳ ಹೂಡಿಕೆದಾರರ ಪಾಲಿಗೆ ಹಿಂದಿನ ಕೆಂಪುಪಟ್ಟಿಯ ಸಮಸ್ಯೆ ಕೊನೆಗೊಂಡಿದ್ದು, ಈಗ ರತ್ನಗಂಬಳಿಯ ಸ್ವಾಗತವಿದೆ ಎಂದರು. ಅದರಲ್ಲೂ ಕರ್ನಾಟಕ ತಂತ್ರಜ್ಞಾನ, ನಾವೀನ್ಯತೆ ಮತ್ತು ಸಮರ್ಥ ನಾಯಕತ್ವದ ತವರಾಗಿದೆ ಎಂದು ಬಣ್ಣಿಸಿದ ಪ್ರಧಾನಿ…
ಮೈಸೂರು ಬಳಿ ಹೊಸ ನಗರ ನಿರ್ಮಾಣ
November 17, 2022ಬೆಂಗಳೂರು, ನ.16(ಕೆಎಂಶಿ)-ಮೈಸೂರು ಸೇರಿದಂತೆ ಆರು ನಗರಗಳ ಸುತ್ತಮುತ್ತ ಹೊಸ ನಗರಗಳ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಮೈಸೂರು ಅಲ್ಲದೆ ಕಲ ಬುರಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಂಗಳೂರು ಸುತ್ತಮುತ್ತ ನಿರ್ಮಾಣವಾಗಲಿರುವ ಹೊಸ ನಗರಗಳು ವಿಭಿನ್ನ ಮಾದರಿಯವುಗಳಾಗಿರುತ್ತವೆ. ಇವುಗಳ ರೂಪು-ರೇಷೆಯನ್ನು ಮುಂದಿನ ಆರು ತಿಂಗಳಲ್ಲಿ ನಿರ್ಧರಿಸಲಾಗು ವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವರ್ಚು ಯಲ್ ಆಗಿ ಉದ್ಘಾಟಿಸಿದ ಬೆಂಗಳೂರು ಟೆಕ್ ಸಮ್ಮಿಟ್ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಂಗಳೂ…
ನಮಸ್ಕಾರ ಬೆಂಗಳೂರು ನಾಡಪ್ರಭು ಕೆಂಪೇಗೌಡರ ಕಲ್ಪನೆಯಂತೆ ಅಭಿವೃದ್ಧಿ
November 12, 2022ಬೆಂಗಳೂರು ನ.11(ಕೆಎಂಶಿ)-ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇರುವುದರಿಂದ ಕರ್ನಾಟಕ ಶಕ್ತಿಯುತವಾಗಿ ಎಲ್ಲಾ ರಂಗಗಳಲ್ಲಿ ಅಭಿವೃದ್ಧಿಯತ್ತ ಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಮುಂಬ ರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಕೊಂಡೆ ಮಾತನಾಡಿದ ಪ್ರಧಾನಿ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಮ್ಮಿಕೊಂಡಿರುವ ಅಭಿವೃದ್ಧಿ ಕಾರ್ಯ ಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟರು. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಇಂತಹ ಅಭಿವೃದ್ಧಿ ಕಾರ್ಯ ಗಳು ಸಾಧ್ಯ ಎಂದು ತಿಳಿಸುವುದರ ಮೂಲಕ ಮುಂಬರುವ ವಿಧಾನಸಭಾ ಚುನಾವಣೆ…