ಬೆಂಗಳೂರು, ನ.4(ಕೆಎಂಶಿ)-ಜಾಗತಿಕ ಹೂಡಿಕೆದಾರರ ಸಮಾವೇಶ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ವಿಶ್ವದಲ್ಲೇ ಮುಂಚೂ ಣಿಯಲ್ಲಿರುವ ಉದ್ಯಮಿಗಳು ಹತ್ತು ಲಕ್ಷ ಕೋಟಿ ರೂ.ಗೂ ಅಧಿಕ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದ್ದಾರೆ. ಕರ್ನಾಟಕದ ಕೈಗಾರಿಕಾ ಸ್ನೇಹಿಗೆ ಮನಸೋತ ಅದಾನಿ, ಅಂಬಾನಿ, ಬಜಾಜ್, ಮಿತ್ತಲ್, ಜಿಂದಾಲ್ ಸೇರಿದಂತೆ ವಿಶ್ವಮಟ್ಟದ ಅಗ್ರಗಣ್ಯ ಉದ್ಯಮಿಗಳು ಲಕ್ಷಾಂತರ ಕೋಟಿ ರೂ. ಬಂಡವಾಳ ಹೂಡಿಕೆಗೆ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಸಮಾವೇಶದ ಆರಂಭಕ್ಕೂ ಮುನ್ನ ಐದು ಲಕ್ಷ ಕೋಟಿ ಬಂಡ ವಾಳ ಹಾಗೂ ಐದು ಲಕ್ಷ ಉದ್ಯೋಗ ಗುರಿ…
ವರಿಷ್ಠರಿಂದಲೇ ಅಭ್ಯರ್ಥಿಗಳ ಆಯ್ಕೆ
November 4, 2022ಬೆಂಗಳೂರು,ನ.3(ಕೆಎಂಶಿ)-ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನು ವರಿಷ್ಠರೇ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಇಂದಿಲ್ಲಿ ಪ್ರಕಟಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಹಾಗೂ ಮಾಜಿ ಸಂಸದ ಮುದ್ದಹನುಮೇಗೌಡ, ಚಿತ್ರನಟ ಶಶಿಕುಮಾರ್, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಸೇರಿದಂತೆ ಹಲವು ಮುಖಂಡರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಚುನಾವಣೆಯಲ್ಲಿ ನಾನು ಕಣಕ್ಕಿಳಿಯಬೇಕೇ ಬೇಡವೇ ಎಂಬ ನಿರ್ಧಾರವನ್ನು ವರಿಷ್ಠರೇ ಮಾಡಲಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಈಗಾಗಲೇ ವರಿಷ್ಠರು ಚಾಲನೆ ನೀಡಿದ್ದಾರೆ. ಪಕ್ಷದ…
5 ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಶವವಾಗಿ ಪತ್ತೆ!
November 4, 2022ದಾವಣಗೆರೆ, ನ.3- ಕಳೆದ ಐದು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರ ಶೇಖರ್(24) ಶವ ಕಾರಿನ ಸಮೇತ ತುಂಗಭದ್ರಾ ಮೇಲ್ದಂಡೆ ನಾಲೆಯಲ್ಲಿ ಗುರುವಾರ ಪತ್ತೆಯಾಗಿದೆ. ನ್ಯಾಮತಿ ಮತ್ತು ಹೊನ್ನಾಳಿ ನಡುವೆ ರೇಣುಕಾಚಾರ್ಯ ಅವರ ಮನೆ ಇರುವ ಹೊನ್ನಾಳಿಗೆ ಕೇವಲ 5 ಕಿ.ಮೀ. ಅಂತರದಲ್ಲಿ ಅವರ ಶವ ಪತ್ತೆಯಾಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ರೇಣುಕಾಚಾರ್ಯ ಅವರ ಸಹೋದರ ಎಂ.ಪಿ.ರಮೇಶ್ ಪುತ್ರ…
ಬಂಡವಾಳ ಹೂಡಿಕೆಗೆ ಪೂರಕವಾಗಿ ಕಾನೂನುಗಳಲ್ಲಿ ಸಾಕಷ್ಟು ಮಾರ್ಪಾಡು
November 3, 2022ಬೆಂಗಳೂರು, ನ. 2(ಕೆಎಂಶಿ)-ರಾಷ್ಟ್ರದಲ್ಲಿ ಬಂಡವಾಳ ಹೂಡಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಾನೂನುಗಳನ್ನು ಸಡಿಲಗೊಳಿಸಲಾಗಿದೆ. ಇದನ್ನು ರಾಜ್ಯ ಸರ್ಕಾರಗಳು ಬಳಕೆ ಮಾಡಿಕೊಂಡು ನಿರುದ್ಯೋಗ ಸಮಸ್ಯೆ ಬಗೆಹರಿಸಿ, ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ವರ್ಚು ವಲ್ ಮಾದರಿಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಹೂಡಿಕೆದಾರರಿಗೆ ರೆಡ್ ಟೇಪಿಸಂನಿಂದ ವಿಮುಕ್ತಿ ನೀಡಿ ಮುಕ್ತ ಅವಕಾಶಗಳನ್ನು ಕಲ್ಪಿಸಲಾಗಿದೆ. ರಕ್ಷಣೆ, ಬಾಹ್ಯಾಕಾಶ, ಭೌಗೋಳಿಕ ನಕ್ಷೆ, ಡ್ರೋಣ್ ಸೇರಿ ದಂತೆ ಹಲವು ಕ್ಷೇತ್ರಗಳಲ್ಲಿ ಖಾಸಗಿ…
ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ ಇಂದು ಅಪ್ಪುಗೆ `ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ
November 1, 2022ಬೆಂಗಳೂರು, ಅ. 31 (ಕೆಎಂಶಿ)-ಅರವತ್ತೇಳನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥ ಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯೋತ್ಸವ, ಕರ್ನಾ ಟಕ ರತ್ನ ಪ್ರಶಸ್ತಿ ಹಾಗೂ ಜಾಗತಿಕ ಹೂಡಿಕೆದಾರರ ಸಮಾ ವೇಶಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಿದರು. ನಾಳೆ ನಾಡಿನಾ ದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ ಶಾಲೆ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ರಾಜ್ಯೋತ್ಸವ ಆಚರಿಸಬೇಕು, ಕನ್ನಡದ ಧ್ವಜಗಳನ್ನು ಹಾರಿಸಬೇಕು ಎಂದು…
ಭೂ ವಿವಾದಗಳ ಇತ್ಯರ್ಥಕ್ಕೆ ಇಲಾಖಾ ನ್ಯಾಯಾಲಯಗಳ ಅಧಿಕಾರ ವಿಕೇಂದ್ರೀಕರಣÀಂ
November 1, 2022ುಬೆಂಗಳೂರು, ಅ. 31 (ಕೆಎಂಶಿ)- ಭೂ ವಿವಾದಗಳು ಸೇರಿದಂತೆ ರಾಜ್ಯಾದ್ಯಂತ ಬಗೆಹರಿಯದೆ ಉಳಿದಿರುವ ಕಂದಾಯ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸರ್ಕಾರ ಮುಂದಾಗಿದ್ದು, ಇಲಾಖಾ ನ್ಯಾಯಾಲಯಗಳ ಅಧಿಕಾರ ವನ್ನು ವಿಕೇಂದ್ರೀಕರಣಗೊಳಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯ ತಿಳಿಸಿದರಲ್ಲದೆ, ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷ ಗಳ ಕಾಲ ಕಂದಾಯ ನ್ಯಾಯಾಲಯಗಳ ಕಲಾಪ ಸ್ಥಗಿತ ವಾಗಿತ್ತು. ಇದರಿಂದಾಗಿ ಒಂದು ಲಕ್ಷ ಸಮೀಪ ಪ್ರಕರಣ ಗಳು ವಿಲೇವಾರಿಯಾಗದೇ ಹಾಗೆಯೇ ಉಳಿದಿವೆ….
ಇಂದಿನಿಂದ ಜೆಡಿಎಸ್ `ಪಂಚರತ್ನ ರಥಯಾತ್ರೆ’
November 1, 2022ಬೆಂಗಳೂರು, ಅ. 31(ಕೆಎಂಶಿ)-ಮುಂಬರುವ ವಿಧಾನಸಭಾ ಚುನಾ ವಣೆಯಲ್ಲಿ ಅಧಿಕಾರದ ಚುಕ್ಕಾಣೆ ಹಿಡಿ ಯಲು ರಾಜಕೀಯ ಪಕ್ಷಗಳು ಯಾತ್ರೆ ಗಳ ಮೊರೆ ಹೋಗಿವೆ. ಆಡಳಿತಾರೂಢ ಬಿಜೆಪಿ ಸಂಕಲ್ಪ ಯಾತ್ರೆ ನಡೆಸುತ್ತಿದ್ದರೆ, ಕಾಂಗ್ರೆಸ್ ರಾಹುಲ್ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಮುಗಿಸಿ, ಮತ್ತೊಂದು ಬೇರೆ ಯಾತ್ರೆಗೆ ರೂಪರೇಷೆ ಸಿದ್ಧಪಡಿಸಿದೆ. ಇದರ ನಡುವೆ ರಾಷ್ಟ್ರೀಯ ಪಕ್ಷಗಳಿಗಿಂತ ತಾವೇನು ಕಡಿಮೆ ಇಲ್ಲ ವೆಂಬಂತೆ ಜಾತ್ಯತೀತ ಜನತಾದಳ ನಾಳೆ ಯಿಂದ ಪಂಚರತ್ನ ಯಾತ್ರೆ ಆರಂಭಿ ಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ…
ಗುಜರಾತ್ ತೂಗು ಸೇತುವೆ ದುರಂತ: ಮೃತರ ಸಂಖ್ಯೆ 141ಕ್ಕೆ ಏರಿಕೆ
November 1, 2022ಮೊರ್ಬಿ(ಗುಜರಾತ್): ಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಬಿದ್ದ ದುರಂತದಲ್ಲಿ ಮೃತಪಟ್ಟ ವರ ಸಂಖ್ಯೆ 141ಕ್ಕೆ ಏರಿಕೆಯಾಗಿದ್ದು, ಈವರೆಗೂ 177ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೇನೆ, ನೌಕಾಪಡೆ, ವಾಯುಪಡೆ, ಎನ್ಡಿಆರ್ಎಫ್, ಅಗ್ನಿಶಾಮಕ ದಳಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ದುರಂತ ಕುರಿತು ಗುಜರಾತ್ ರಾಜ್ಯದ ಗೃಹ ಸಚಿವ ಹರ್ಷ್ ಸಂಘ್ವಿ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸ ಲಾಗಿದೆ. ಐಜಿಪಿ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ ನೌಕಾಪಡೆ,…
ಕಾವೇರಿ, ಕೃಷ್ಣಾ ಕೊಳ್ಳದ ಕೈಗಾರಿಕೆಗಳಲ್ಲಿ ಶುದ್ಧೀಕರಣ ಘಟಕ ಸ್ಥಾಪನೆಗೆ ಕಟ್ಟಾದೇಶ
October 29, 2022ಬೆಂಗಳೂರು, ಅ.28(ಕೆಎಂಶಿ)-ಕಾವೇರಿ ಕೃಷ್ಣ ಕೊಳ್ಳ ಕಲುಷಿತಗೊಳ್ಳಲು ಅಧಿಕಾರಿಗಳೇ ಹೊಣೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಿದ್ದರೆ, ನದಿ ಗಳಿಗೆ ಕಲುಷಿತ ನೀರು ಹರಿಯು ತ್ತಿರಲಿಲ್ಲ. ಕೆಲವು ಕೈಗಾರಿಕೆಗಳು ತಮ್ಮ ಜವಾಬ್ದಾರಿ ಮರೆತು ರಾಸಾಯನಿಕ ಮಿಶ್ರಿತ ನೀರನ್ನು ನದಿ ಪಾತ್ರಗಳಿಗೆ ಹರಿಯಬಿಟ್ಟು ಜನರ ಜೀವದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ಇದರ ಜೊತೆಗೆ ನಗರ ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ…
ರಾಜ್ಯದ ದಶ ದಿಕ್ಕುಗಳಲ್ಲೂ ಮೊಳಗಿದ ನಾಡು-ನುಡಿ, ಹಿರಿಮೆ-ಗರಿಮೆ ಬಿಂಬಿಸುವ ಕನ್ನಡಿಗನ ಕೋಟಿ ಕಂಠ ಗಾಯನ…
October 29, 2022ಬೆಂಗಳೂರು, ಅ.28(ಕೆಎಂಶಿ)-ಕನ್ನಡ ನಾಡು-ನುಡಿಯ ಹಿರಿಮೆ-ಗರಿಮೆಯನ್ನು ಸಾರುವ ಕನ್ನಡದ ಹಾಡುಗಳು ರಾಜ್ಯದ ದಶದಿಕ್ಕುಗಳಲ್ಲೂ ಮೊಳಗಿತು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಜ್ಯದ ವಿವಿಧ ಭಾಗಗಳಲ್ಲಿ ಸರ್ಕಾರ ಆಯೋಜಿಸಿದ್ದ, ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ಜನ ಏಕ ಕಂಠದಲ್ಲಿ ಆಯ್ದ ಆರು ಕನ್ನಡ ಗೀತೆಗಳನ್ನು ಹಾಡುವ ಮೂಲಕ ನಾಡು ನುಡಿಯ ಕಂಪು ಎಲ್ಲೆಡೆ ಪಸರಿಸಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಸಂಸ್ಕøತಿ ಸಚಿವ ಸುನೀಲ್ ಕುಮಾರ್ ರಾಜಧಾನಿ ಯಲ್ಲೂ ಅವರ ಸಂಪುಟದ ಸಹೋದ್ಯೋಗಿಗಳು ಜಿಲ್ಲಾ ಕೇಂದ್ರಗಳಲ್ಲಿ ಕೋಟಿ…