ಬೆಂಗಳೂರು, ಜೂ. 3-ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಜೂ.10ರಂದು ನಡೆಯ ಲಿ ರುವ ಚುನಾವಣೆಗೆ 6 ಅಭ್ಯರ್ಥಿ ಗಳು ಅಂತಿಮ ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವೊಬ್ಬ ಅಭ್ಯರ್ಥಿಯು ನಾಮಪತ್ರ ಹಿಂಪಡೆ ಯದ ಕಾರಣ 4ನೇ ಸ್ಥಾನಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು, ಕುತೂಹಲಕ್ಕೆ ಎಡೆಮಾಡಿದೆ. ವಿಧಾನಸಭಾ ಸದಸ್ಯರ ಸಂಖ್ಯಾ ಬಲದ ಆಧಾರದ ಮೇರೆಗೆ ಬಿಜೆಪಿ 2 ಹಾಗೂ ಕಾಂಗ್ರೆಸ್ 1 ಸ್ಥಾನವನ್ನು ಪ್ರಥಮ ಪ್ರಾಶಸ್ತ್ಯ ಮತದಲ್ಲೇ…
ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ 47.83 ಲಕ್ಷ ರೈತರಿಗೆ 956.71 ಕೋಟಿ ಸಹಾಯಧನ
June 3, 2022ಬೆಂಗಳೂರು, ಜೂ.2(ಕೆಎಂಶಿ)- ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರಿಂದು ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾ ಯಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರೈತರ ಖಾತೆಗಳಿಗೆ ಸಹಾಯಧನ ವರ್ಗಾ ಯಿಸಿದ್ದು, 2018-19ರಿಂದ 2021-22 ರವರೆಗೆ ಭಾರತ ಸರ್ಕಾರದಿಂದ ಅನು ಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂ. ರಾಜ್ಯದ ರೈತರಿಗೆ ಪಾವತಿಯಾದಂತಾಗಿದೆ. 2021-22ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975.12 ಕೋಟಿ ರೂ.ಗಳ…
ಮಠಾಧೀಶರು, ಸಾಹಿತಿಗಳು, ಕನ್ನಡಪರ ಸಂಘಟನೆಗಳ ಅಪಸ್ವರಕ್ಕೆ ಮಣಿದ ಸರ್ಕಾರ ಪಠ್ಯ ಪರಿಷ್ಕರಣೆ ಮಾರ್ಪಾಡಿಗೆ ಚಿಂತನೆ
June 2, 2022ಬೆಂಗಳೂರು, ಜೂ.1 (ಕೆಎಂಶಿ)- ಮಠಾಧೀಶರು, ಕನ್ನಡಪರ ಸಂಘಟನೆಗಳು, ಸಾಹಿತಿಗಳು ಪಠ್ಯಪುಸ್ತಕ ಪರಿಷ್ಕರಣೆಗೆ ಅಪಸ್ವರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಕೆಲವು ಪಠ್ಯ ಪರಿಷ್ಕರಣೆಯಲ್ಲಿ ಮಾರ್ಪಾಡಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಷ್ಕ ರಣೆಗೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು ನಾಳೆ (ಗುರು ವಾರ) ತಮಗೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವ ರಿಗೆ ಸೂಚಿಸಿದ್ದಾರೆ. ಕುವೆಂಪು ಹಾಗೂ ಬಸವಣ್ಣನವರ ಬಗ್ಗೆ ಪರಿಷ್ಕರಣೆ ಸಂಬಂಧ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿಯವರು ವರದಿ ಕೇಳಿದ್ದಾರೆ….
ನ್ಯಾಷನಲ್ ಹೆರಾಲ್ಡ್ ಪ್ರಕರಣ ಸೋನಿಯಾ ಗಾಂಧಿ, ರಾಹುಲ್ಗೆ ಇಡಿ ಸಮನ್ಸ್
June 2, 2022ನವದೆಹಲಿ: ನ್ಯಾಷನಲ್ ಹೆರಾಲ್ಡ್ಗೆ ಸಂಬಂ ಧಿಸಿದ ಅಕ್ರಮ ಹಣ ವರ್ಗಾ ವಣೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗು ವಂತೆ ಸೂಚಿಸಿ ಜಾರಿ ನಿರ್ದೇ ಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. 2015ರಲ್ಲಿ ತನಿಖಾ ಸಂಸ್ಥೆ ಯಿಂದ ಮುಕ್ತಾಯವಾಗಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕ ರಣದೊಂದಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ. ಈ ಬಗ್ಗೆ ಕಾಂಗ್ರೆಸ್…
ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ
June 2, 2022ಲಖನೌ,ಜೂ.1-ಹಿಂದೂಗಳ ದಶಕಗಳ ಕನಸಾದ ಅಯೋಧ್ಯೆ ರಾಮಮಂದಿರ ನಿರ್ಮಾಣ ಮಹತ್ವದ ಘಟ್ಟ ತಲುಪಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಗರ್ಭಗುಡಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಅಯೋಧ್ಯೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮಮಂದಿರದ ಗರ್ಭಗುಡಿಯ ಮೊದಲ ಶಿಲೆಗೆ ಪೂಜೆ ಸಲ್ಲಿಸಿದರು. ಮಂದಿರ ನಿರ್ಮಾಣದ ಹೊಣೆ ಹೊತ್ತ ರಾಮ ಜನ್ಮಭೂಮಿ ಟ್ರಸ್ಟ್, ದೇವಾಲಯದ ಗರ್ಭಗುಡಿಯನ್ನು ರಾಜಸ್ಥಾನದ ಮಖ್ರಾನಾ ಬೆಟ್ಟದಿಂದ ತರಿಸಲಾದ ಬಿಳಿ ಅಮೃತ ಶಿಲೆಯಿಂದ ನಿರ್ಮಾಣ ಮಾಡಲಾಗುವುದು. ಸುಮಾರು 13,300 ಕ್ಯೂಬಿಕ್ ಅಡಿ ಅಮೃತ ಶಿಲೆಯನ್ನು ಬಳಸಲಾಗುವುದು…
ಲೆಕ್ಕಕ್ಕೆ ಸಿಗದಷ್ಟು ಹಣ ಬೆಂಗಳೂರಿಂದ ದೆಹಲಿಗೆ ಅಕ್ರಮವಾಗಿ ವರ್ಗಾವಣೆ
June 2, 2022ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಈ ಹಿಂದೆ ಸಚಿವರಾಗಿದ್ದ ವೇಳೆ ಅಧಿ ಕಾರದ ಪ್ರಭಾವ ಬಳಸಿ ಲೆಕ್ಕಕ್ಕೆ ಸಿಗದಷ್ಟು ಹಣವನ್ನು ಬೆಂಗಳೂರಿನಿಂದ ದೆಹ ಲಿಗೆ ವರ್ಗಾವಣೆ ಮಾಡಿ ದ್ದಾರೆ ಎಂದು ಇಡಿ ಇತ್ತೀಚೆಗೆ ಕೋರ್ಟ್ಗೆ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ. ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ದೆಹಲಿಯಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಅಕ್ರಮ ಹಣ ವರ್ಗಾ ವಣೆಗೆ ಡಿ.ಕೆ.ಶಿವಕುಮಾರ್ ಅಧಿಕಾರ ದುರ್ಬ ಳಕೆ ಮಾಡಿಕೊಂಡಿದ್ದಾರೆ. ಕ್ಯಾಬಿನೆಟ್ ಸಚಿವ…
ರಾಜ್ಯಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರ?
June 1, 2022ಬೆಂಗಳೂರು,ಮೇ 31 (ಕೆಎಂಶಿ)-ರಾಜ್ಯಸಭೆಯ ನಾಲ್ಕನೇ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿರುವ ಮೂರು ರಾಜಕೀಯ ಪಕ್ಷಗಳು ಉದ್ದಿಮೆ ದಾರರನ್ನು ಕಣಕ್ಕಿಳಿಸಿ, ಕುದುರೆ ವ್ಯಾಪಾರಕ್ಕೆ ರಹದಾರಿ ಮಾಡಿಕೊಟ್ಟಿವೆ. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದ್ದು, ಹಾಲಿ ವಿಧಾನಸಭೆಯ ಬಲಾಬಲದ ಆಧಾರದ ಮೇಲೆ ಬಿಜೆಪಿ ಎರಡು, ಕಾಂಗ್ರೆಸ್ ಒಂದು ಸ್ಥಾನಗಳನ್ನು ಮೊದಲ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಜಯಗಳಿಸಲಿವೆ. ಉಳಿದ ಒಂದು ಸ್ಥಾನಕ್ಕೆ ಯಾರ ಬಳಿಯೂ ಮೊದಲ ಪ್ರಾಶಸ್ತ್ಯ 46 ಮತಗಳಿಲ್ಲ. ಮೊದಲ ಪ್ರಾಶಸ್ತ್ಯದ ಮೇಲೆ ಗೆಲ್ಲಬಹು…
ಜೆಡಿಎಸ್ ಸತ್ವಪರೀಕ್ಷೆಗೀಡುಮಾಡಿದ ಸಿದ್ದರಾಮಯ್ಯ
May 31, 2022ಬೆಂಗಳೂರು, ಮೇ 30 (ಕೆಎಂಶಿ)- ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ ಹತ್ತರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಜೆಡಿಎಸ್ ಪಕ್ಷ ಬಿಜೆಪಿಯ ಬಿ-ಟೀಮ್ ಎಂದು ಸಾಬೀತು ಮಾಡಲು ಹೊರಟಿದೆ. ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಡರಾತ್ರಿ ನಡೆಸಿದ ರಾಜಕೀಯ ಚಾಣಕ್ಯತನಕ್ಕೆ ತಮ್ಮ ಪಕ್ಷದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒಂದೇ ಕಲ್ಲಿನಲ್ಲಿ ಹೊಡೆದುರುಳಿಸುವ ತಂತ್ರ ರೂಪಿಸಿದ್ದಾರೆ. ಖರ್ಗೆ ಅವರ ಆಪ್ತ ಹಾಗೂ ಕಾಂಗ್ರೆಸ್ನ ಮಾಜಿ ಮುಖಂಡ, ಉದ್ಯಮಿ ಕುಪೇಂದ್ರ…
ಕೋಡಿಹಳ್ಳಿ ಬೆಂಬಲಿಗರಿಂದ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ
May 31, 2022ಬೆಂಗಳೂರು, ಮೇ 30 (ಕೆಎಂಶಿ)-ಕಾರ್ಯ ಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗ ಮಿಸಿದ್ದ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧುವೀರ್ ಸಿಂಗ್ ಮೇಲೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬೆಂಬ ಲಿಗರು ಮಸಿ ಎರಚಿದ ಘಟನೆ ನಡೆದಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲೇ ಈ ಘಟನೆ ನಡೆದಿದೆ. ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡುತ್ತಿದ್ದ ರಾಕೇಶ್ ಟಿಕಾಯತ್ ಮತ್ತು ಯುಧುವೀರ್, ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್…
ಮೈಸೂರು, ತುಮಕೂರು ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಬೆಂಗಳೂರು ಹೊರತುಪಡಿಸಿಇನ್ನಿತರೆ ಪಾಲಿಕೆ, ನಗರಸಭೆ, ಪುರಸಭೆ, ಪಪಂ ವ್ಯಾಪ್ತಿಯಅಕ್ರಮ ನಿರ್ಮಾಣಸಕ್ರಮ
May 6, 2022ಬೆಂಗಳೂರು, ಮೇ ೫(ಕೆಎಂಶಿ)- ನಗರ ಪಾಲಿಕೆಗಳೂ ಸೇರಿದಂತೆ ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಮನೆಗಳನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಮೈಸೂರು, ತುಮಕೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬೆಂಗಳೂರು ಹೊರತುಪಡಿಸಿ, ಉಳಿದ ಹತ್ತು ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಅನಧಿಕೃತ ಆರೂವರೆ ಲಕ್ಷ ಅಕ್ರಮ ಮನೆಗಳನ್ನು ಸಕ್ರಮಗೊಳಿಸಲಾಗುವುದು ಎಂದರು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಖಾಸಗಿ…