ಬೆಂಗಳೂರು, ಮೇ ೫(ಕೆಎಂಶಿ)- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ರಾಜ್ಯಸರ್ಕಾರದ ಭವಿಷ್ಯವನ್ನು ಪ್ರಧಾನಿ ನರೇಂದ್ರ ಮೋದಿ ಒಂದೆರಡು ದಿನದಲ್ಲೇ ನಿರ್ಧರಿಸಲಿದ್ದಾರೆ. ಯುರೋಪ್ ಪ್ರವಾಸದಿಂದ ಪ್ರಧಾನಿ ಮೋದಿ ದೆಹಲಿಗೆ ಆಗಮಿಸಿದ್ದಾರೆ. ಶುಕ್ರವಾರ ಇಲ್ಲವೆ ಶನಿವಾರ ಕರ್ನಾಟಕದ ಪರಿಸ್ಥಿತಿ ಬಗ್ಗೆ ಗೃಹ ಸಚಿವ ಅಮಿತ್ ಷಾ ಅವರೊಟ್ಟಿಗೆ ಒಂದು ಸುತ್ತಿನ ಮಾತುಕತೆ ನಡೆಸಿ, ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪ್ರಧಾನಿ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಸ್ವತಃ ಮುಖ್ಯಮಂತ್ರಿ ಸೇರಿದಂತೆ ಅವರ ಸಂಪುಟದ ಸಚಿವರು, ಬಿಜೆಪಿ…
ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಆನಂದ್ ಮೇತ್ರೆ ಬಂಧನ
May 6, 2022ಕಲಬುರಗಿ, ಮೇ ೫- ಪಿಎಸ್ಐ ನೇಮ ಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ರಾಯಚೂರು ಜಿಲ್ಲೆಯ ಲಿಂಗಸೂಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ್ ಮೇತ್ರೆ ಅವರನ್ನು ಗುರುವಾರ ಬಂಧಿಸಿದೆ. ಪ್ರಕರಣಕ್ಕೆ ಸಂಬAಧಿಸಿ ದಂತೆ ಈ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ನಿನ್ನೆಯಿಂದ ಸುಮಾರು ೧೦ ಗಂಟೆಗಳ ಸುದೀರ್ಘ ವಿಚಾ ರಣೆ ನಡೆಸಿದ ಸಿಐಡಿ ತಂಡ, ಇಂದು ಇಬ್ಬರೂ ಅಧಿಕಾರಿಗಳನ್ನು ಬಂಧಿಸಿದೆ. ವೈದ್ಯಕೀಯ ತಪಾಸಣೆ ನಂತರ ಆರೋಪಿ ಅಧಿಕಾರಿಗಳನ್ನು ಸಿಐಡಿ…
ನಾಯಕತ್ವ ಬದಲಾವಣೆ ಬದಲು ಸಂಪುಟ ಸರ್ಜರಿಗೆ ನಿರ್ಧಾರ
May 4, 2022ಬೆಂಗಳೂರು,ಮೇ3-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವ ಬದಲಾವಣೆಯ ಪ್ರಸ್ತಾಪ ವನ್ನು ಕೈಬಿಟ್ಟಿರುವ ಕೇಂದ್ರದ ಬಿಜೆಪಿ ವರಿಷ್ಠರು, ಸಂಪುಟ ಪುನರ್ರಚನೆ ಮೂಲಕ ಇನ್ನುಳಿದ ಒಂದು ವರ್ಷ ಉತ್ತಮ ಆಡಳಿತ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪು ಟಕ್ಕೆ ಯುವ ಪಡೆ ಸೇರ್ಪಡೆ ಮೂಲಕ ಆಡಳಿತಕ್ಕೆ ಚುರುಕು ಮುಟ್ಟಿಸುವ ಉದ್ದೇಶವನ್ನು ವರಿಷ್ಠರು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾರಾಂತ್ಯಕ್ಕೆ ಮುಖ್ಯಮಂತ್ರಿ ದೆಹಲಿಗೆ ತೆರಳುವ ಸಾಧ್ಯತೆ ಇದೆ. ರಾಜ್ಯ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಅಮಿತ್ ಷಾ, ಇಂದು…
ದೇಶದ ಜಲ ಸಂರಕ್ಷಣೆಗೆ ಸಂಕಲ್ಪ ಮಾಡೋಣ
April 25, 2022ನವದೆಹಲಿ, ಏ.24-ಸ್ವಾತಂತ್ರ್ಯದ ಅಮೃತ ಮಹೋ ತ್ಸವ ಸಮಯದಲ್ಲಿ ದೇಶದ ಜಲ ಸಂರಕ್ಷಣೆಗೆ ಸಂಕಲ್ಪ ಮಾಡೋಣ ಎಂದು ರಾಷ್ಟ್ರದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮಾಸಿಕ ರೇಡಿಯೋ ಕಾರ್ಯಕ್ರಮ `ಮನ್ ಕೀ ಬಾತ್’ ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಸಂಕಲ್ಪಗಳಲ್ಲಿ ಜಲ ಸಂರಕ್ಷಣೆಯೂ ಒಂದಾಗಿದೆ. ನೀರು ಪ್ರತಿಯೊಂದು ಜೀವಿಗಳ ಮೂಲಭೂತ ಅಗತ್ಯ ಎಂದು ನಮ್ಮ ಧರ್ಮ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಇದು ನೈಸರ್ಗಿಕ ಸಂಪನ್ಮೂಲ. ವಾಲ್ಮೀಕಿ ರಾಮಾಯಣದಲ್ಲಿ ಜಲ ಸಂರಕ್ಷಣೆಗೆ ಒತ್ತು ನೀಡಲಾಗಿದೆ. ಹರಪ್ಪ ನಾಗರಿ…
ಆಪರೇಷನ್ ಕಮಲ ಸುಳಿವು ಕೊಟ್ಟ ಕಟೀಲ್
April 25, 2022ಬೆಂಗಳೂರು, ಏ.24- ಚುನಾವಣೆವರೆಗೆ ಕಾದು ನೋಡಿ, ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಬಿಜೆಪಿಯಲ್ಲಿ ಬಹಳ ಜನ ಗೆಲ್ಲುವ ಅಭ್ಯರ್ಥಿ ಗಳಿದ್ದಾರೆ. ಹೀಗಾಗಿ ಹೆಚ್ಚು ಅವಶ್ಯಕತೆ ಬರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಹೇಳಿದರು. ಮುಂಬರುವ ಚುನಾವಣೆಗೆ ಬಿಜೆಪಿ ನಾಯಕರ ಪ್ರವಾಸ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯಲ್ಲಿ ನಿನ್ನೆಯಿಂದ ಕಟೀಲ್ ನೇತೃತ್ವದ ತಂಡ ಪ್ರವಾಸ ಶುರುಮಾಡಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಹಳೇ ಮೈಸೂರು ಭಾಗದಲ್ಲಿ ತುಂಬಾ ಜನ ನಮ್ಮ ಪಕ್ಷ ಹಾಗೂ ಸಿಎಂ ಸಂಪರ್ಕದಲ್ಲಿ ಇದ್ದಾರೆ….
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆ; ಕೇಸು ದಾಖಲು ಸಚಿವ ಶ್ವರಪ್ಪ-ಂ1 ಆಪ್ತರಾದ ಬಸವರಾಜು-ಂ2, ರಮೇಶ್-ಂ3
April 14, 2022ಮೈಸೂರು, ಏ.13- ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಅವರ ಆಪ್ತರಾದ ಬಸವರಾಜು ಮತ್ತು ರಮೇಶ್ ವಿರುದ್ಧ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇರೆಗೆ ಇಂದು ಎಫ್ಐಆರ್ ದಾಖಲಾಗಿದೆ. ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಇಂದು ಮುಂಜಾನೆ 3.25ರಲ್ಲಿ ಎಫ್ಐಆರ್ ದಾಖ ಲಿಸಿದ್ದಾರೆ. ಸಂತೋಷ್ ಪಾಟೀಲ್ 4 ಕೋಟಿ ರೂ.ಗಳಿಗೂ ಹೆಚ್ಚು ಕಾಮಗಾರಿ ನಡೆಸಿದ್ದು,…
ಸಂತೋಷ್ ಪಾರ್ಥಿವ ಶರೀರ ಕುಟುಂಬದ ವಶಕ್ಕೆ
April 14, 2022ಉಡುಪಿ,ಏ.13-ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಮರಣೋತ್ತರ ಪರೀಕ್ಷೆ ನಡೆಸಿ, ದೇಹವನ್ನು ಕುಟುಂಬ ದವರಿಗೆ ಬುಧವಾರ ರಾತ್ರಿ ಹಸ್ತಾಂತರಿಸಲಾಯಿತು. ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಬೆಳಗಾವಿಯ ಅವರ ನಿವಾಸಕ್ಕೆ ದೇಹವನ್ನು ಕೊಂಡೊಯ್ಯಲಾಗುತ್ತಿದ್ದು, ನಾಳೆ ಮುಂಜಾನೆ ಬೆಳಗಾವಿ ತಲುಪುವ ನಿರೀಕ್ಷೆಯಿದೆ. ನಿನ್ನೆ ಬೆಳಗ್ಗೆಯಿಂದ ಬುಧವಾರ ಸಂಜೆಯವರೆಗೂ ಇಲ್ಲಿನ ಬಸ್ ನಿಲ್ದಾಣದ ಸಮೀಪವಿರುವ ಶಾಂಭವಿ ಲಾಡ್ಜ್ನ ಕೊಠಡಿಯಲ್ಲಿದ್ದ ಮೃತದೇಹವನ್ನು ಅವರ ಕುಟುಂಬ ಸದಸ್ಯರ ಹೇಳಿಕೆ ದಾಖಲಿಸಿದ ನಂತರ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದರು. ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ…
ಭ್ರಷ್ಟಾಚಾರ ನಿಯಂತ್ರಿಸದಿದ್ದರೆ ಕಾಮಗಾರಿ ಸ್ಥಗಿತ
April 14, 2022ಬೆಂಗಳೂರು, ಏ. 13- ಭ್ರಷ್ಟಾಚಾರ ನಿಯಂತ್ರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ರಾಜ್ಯದಾ ದ್ಯಂತ ಒಂದು ತಿಂಗಳ ಕಾಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕ ರಣದ ಕುರಿತು ಬುಧವಾರ ನಡೆದ ಸಂಘದ ಆಡಳಿತ ಮಂಡಳಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಈ ವಿಷಯ ತಿಳಿಸಿದರು. ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರಿಗೆ ದೂರು ನೀಡಿದರೂ ಭ್ರಷ್ಟಾಚಾರ…
ಗುತ್ತಿಗೆದಾರ ಆತ್ಮಹತ್ಯೆ
April 13, 2022ಬೆಂಗಳೂರು, ಏ.12 (ಕೆಎಂಶಿ)- ಆಡಳಿತ ನಡೆಸುವವರ ಕಮಿಷನ್ ದಾಹಕ್ಕೆ ಗುತ್ತಿಗೆದಾರ ಬಲಿಯಾಗಿದ್ದಾನೆ. ಪಂಚಾಯತ್ರಾಜ್ ಇಲಾಖೆಯಲ್ಲಿ ತಾನು ಮಾಡಿದ ಕಾಮಗಾರಿಗೆ ಶೇ.40ರಷ್ಟು ಕಮಿ ಷನ್ ನೀಡಲು ಸಾಧ್ಯವಾಗದೇ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮಾಧ್ಯಮಗಳಿಗೆ ಸಂದೇಶ ರವಾನೆ ಮಾಡಿ, ನನ್ನ ಸಾವಿಗೆ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ನೇರ ಹೊಣೆ ಎಂದು ದೂರಿದ್ದಾನೆ. ರಾಜ್ಯದಲ್ಲಿ ಯಾವುದೇ ಕಾಮಗಾರಿ ಕೈಗೊಂಡರೆ ಆಡಳಿತ ನಡೆಸುವವರಿಗೆ ಶೇ.40ರಷ್ಟು ಕಮಿಷನ್ ನೀಡಬೇಕೆಂದು ರಾಜ್ಯ ಗುತ್ತಿಗೆದಾರರ ಸಂಘ,…
ನಾಲ್ಕನೇ ಅಲೆ ತಡೆಗೆ ಒಂದೇ ಉಪಾಯ: ಲಸಿಕೆ ತಪ್ಪದೇ ಪಡೆಯಿರಿ
April 13, 2022ಬೆಂಗಳೂರು, ಏ.12 (ಕೆಎಂಶಿ)-ಸಂಭಾವ್ಯ ನಾಲ್ಕನೇ ಅಲೆ ತಡೆಗೂ ಲಸಿಕೆ ಒಂದೇ ಉಪಾಯ. ಅದನ್ನು ವಿಳಂಬ ಮಾಡದೇ ಪಡೆಯಿರಿ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ|| ಕೆ. ಸುಧಾಕರ್ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್-ಜುಲೈ ಪ್ರಾರಂಭವಾಗಿ ಸೆಪ್ಟೆಂಬರ್ವರೆಗೆ ನಾಲ್ಕನೇ ಅಲೆ ಇರ ಬಹುದು ಎಂದು ತಜ್ಞರು ತಿಳಿಸಿದ್ದಾರೆ. ಅದರೆ, ಅದನ್ನು ಎದುರಿಸಿ ನಿಯಂತ್ರಿಸಲು ಕರ್ನಾಟಕ ಸಿದ್ಧವಾಗಿದೆ ಎಂದು ಅವರು ತಿಳಿಸಿದರು. ನಾಲ್ಕನೇ ಅಲೆಗೆ ಆತಂಕ ಪಡುವ ಅಗತ್ಯವಿಲ್ಲ. ವಿಶ್ವದ…










