ಬೆಂಗಳೂರು, ಮಾ.31(ಕೆಎಂಶಿ)-ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ವರದಿ ಪಡೆಯಲು ಆಯೋಗವೊಂದನ್ನು ರಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸುವ ಕುರಿತು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕರು ಹಾಗೂ ಕಾನೂನು ತಜ್ಞರೊಟ್ಟಿಗೆ ಸಮಾಲೋಚನೆ ನಡೆಸಿದ ನಂತರ ಸಚಿವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕಾಲ ಮಿತಿಯೊಳಗೆ ವರದಿ ತರಿಸಿ, ವರದಿ ಬಂದ ನಂತರ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿ, ನಗರ ಸ್ಥಳೀಯ ಸಂಸ್ಥೆ…
ಕಟ್ಟಡ, ರಸ್ತೆ ನಿರ್ಮಾಣಕ್ಕೆ ರಾಜ್ಯದಲ್ಲಿ ಏಕರೂಪ ದರಪಟ್ಟಿ
March 29, 2022ಬೆಂಗಳೂರು, ಮಾ. 28(ಕೆಎಂಶಿ)- ಕಟ್ಟಡ ಮತ್ತು ರಸ್ತೆ ನಿರ್ಮಾಣಕ್ಕೆ ರಾಜ್ಯಾದ್ಯಂತ ಏಕರೂಪ ದರಪಟ್ಟಿ ಜಾರಿ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ವಿಧಾನಸಭೆಗೆ ಇಂದು ತಿಳಿಸಿದರು. 2022-23ನೇ ಸಾಲಿನ ಲೋಕೋ ಪಯೋಗಿ ಇಲಾಖೆ ಅನುದಾನ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತ ರಿಸಿದ ಅವರು, ವಿವಿಧ ಇಂಜಿನಿ ಯರ್ ವಿಭಾಗಗಳಲ್ಲಿ ಒಂದೊಂದು ರೀತಿಯ ದರಪಟ್ಟಿ ಇತ್ತು, ರಾಜ್ಯದಲ್ಲಿ 32 ದರಪಟ್ಟಿಗಳಿದ್ದವು, ಎಲ್ಲ ಎಂಜಿನಿ ಯರಿಂಗ್ ವಿಭಾಗದ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ದರ ಪಟ್ಟಿಗೆ ಬದಲಾಗಿ ಏಕರೂಪ ದರಪಟ್ಟಿ ಜಾರಿಗೆ ತರಲಾ…
ದಸರಾಗೆ ಬೆಂಗಳೂರು-ಮೈಸೂರು ದಶಪಥ ರಸ್ತೆ ಸಂಚಾರಕ್ಕೆ ಮುಕ್ತ
March 29, 2022ಬೆಂಗಳೂರು, ಮಾ. 28(ಕೆಎಂಶಿ)- ಪ್ರವಾಸೋ ದ್ಯಮ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಒತ್ತು ಕೊಡುವ ವಿಶ್ವ ದರ್ಜೆಯ ಬೆಂಗಳೂರು-ಮೈಸೂರು ದಶಪಥ ರಸ್ತೆ ದಸರಾ ವೇಳೆಗೆ ಲೋಕಾರ್ಪಣೆಯಾಗಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಮೊದಲ ಹಂತ ದಲ್ಲಿ ಬೆಂಗಳೂರು-ನಿಡಘಟ್ಟ ರಸ್ತೆ ಪೂರ್ಣಗೊಳ್ಳಲಿದೆ, ಎರಡನೇ ಹಂತ ದಲ್ಲಿ ನಿಡಘಟ್ಟ-ಮೈಸೂರು ಮಾರ್ಗದ ರಸ್ತೆ ನಿರ್ಮಾಣಗೊಳ್ಳುತ್ತಿದೆ ಎಂದಿದ್ದಾರೆ. ಒಟ್ಟು 8,350 ಕೋಟಿ ರೂ. ವೆಚ್ಚದ ದಶಪಥ ರಸ್ತೆಯ…
ಅತಿರಥರ ರಂಗ ಪ್ರವೇಶ
March 27, 2022ಬೆಂಗಳೂರು,ಮಾ.26(ಕೆಎಂಶಿ)-ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ದೆಹಲಿ ಬಿಜೆಪಿ ನಾಯಕರೇ ಅಖಾಡಕ್ಕೆ ಇಳಿಯುತ್ತಿ ದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿ ಗಣ್ಯರು ಏಪ್ರಿಲ್ ತಿಂಗಳಲ್ಲಿ ರಾಜ್ಯ ಪ್ರವಾಸ ಕೈಗೊಂಡು ಚುನಾವಣಾ ಬಾವುಟ ಹಾರಿಸುತ್ತಿದ್ದಾರೆ. ಕರ್ನಾಟಕದ ಬಿಜೆಪಿ ನಾಯಕರನ್ನು ನಂಬಿಕೊಂಡರೆ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲವೆಂದು ಮನಗಂಡು ವರಿಷ್ಠರೇ ರಾಜ್ಯದ ನಾಯಕತ್ವ ಕೈಗೆತ್ತಿಕೊಂಡಿದ್ದಾರೆ. ಪ್ರಧಾನಿಯವರು ಏ.5ರಂದು ಒಂದು ದಿನದ ರಾಜ್ಯ ಪ್ರವಾಸ ಕೈಗೊಂಡರೆ, ಕೇಂದ್ರ ಗೃಹ…
ಮತ್ತೆ ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ
March 26, 2022ಲಖನೌ, ಮಾ.25- ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿ ಯಾಗಿ ಶುಕ್ರವಾರ ಪದಗ್ರಹಣ ಮಾಡಿದರು. ಅಟಲ್ ಬಿಹಾರ ವಾಜಪೇಯಿ ಎಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿ ಗಳ ಸಮ್ಮುಖದಲ್ಲಿ ಯೋಗಿ…
ಇಂದಿನಿಂದ ಐಪಿಎಲ್ ಹಂಗಾಮ
March 26, 2022ಮುಂಬೈ, ಮಾ.25- ಬಹುನಿರೀಕ್ಷಿತ 15ನೇ ಆವೃತ್ತಿಯ ಐಪಿಎಲ್ ಚುಟುಕು ಮಹಾಸಮರಕ್ಕೆ ಕ್ಷಣಗಣನೆ ಆರಂಭ ವಾಗಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ದೇಸಿ ಕ್ರಿಕೆಟ್ ಸಂಭ್ರಮಕ್ಕೆ ಶನಿವಾರ(ಮಾ.26) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಶನಿವಾರ ಸಂಜೆ 7.30ಕ್ಕೆ ಆರಂಭ ವಾಗುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಳೆದ ಬಾರಿ ರನ್ನರ್-ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುವ ಮೂಲಕ ಟಿ20 ಜಾತ್ರೆ ಆರಂಭವಾಗಲಿದ್ದು, ಮೇ29ಕ್ಕೆ ಮುಕ್ತಾಯವಾಗಲಿದೆ. 65 ದಿನ, 74 ಪಂದ್ಯಗಳು: ಈ…
ರೈತರಿಗೆ ಅಧಿಕ ಪರಿಹಾರ
March 26, 2022ಬೆಂಗಳೂರು, ಮಾ.25(ಕೆಎಂಶಿ)-ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎ ಡಿಬಿ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಇನ್ನು ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ನೀಡಲು ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಎನ್.ಎ.ಹ್ಯಾರಿಸ್ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಈ ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕಾಯ್ದೆಗಳು ಪ್ರತ್ಯೇಕವಾಗಿದ್ದವು, ಇತ್ತೀಚೆಗೆ ಹಾಲಿ ಇದ್ದ ಕೆಐಎ ಡಿಬಿ ಕಾಯ್ದೆಗೆ ಉಭಯ ಸದನಗಳಲ್ಲಿ…
ಮೇಕೆದಾಟು: ತಮಿಳುನಾಡಿಗೆ ಕರ್ನಾಟಕ ತಿರುಗೇಟು
March 25, 2022ತಮಿಳುನಾಡು ರಾಜ್ಯಕ್ಕೆ ಯಾವುದೇ ಹಾನಿಯಾಗದ ಯೋಜನೆಯನ್ನು ವಿರೋ ಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಖಂಡಿಸುತ್ತದೆ. ಮೇಕೆದಾಟು ಯೋಜನೆಗೆ ಈ ಕೂಡಲೇ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗ ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯವನ್ನು ಒತ್ತಾಯಿಸುತ್ತದೆ. ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ಗೋದಾವರಿ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೆ-ಗುಂಡಾರ್ ಜೋಡಣೆ ಯೋಜನೆಯ ಅನ್ನು ಅಂತಿಮಗೊಳಿಸದಂತೆ ಹಾಗೂ ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳಿಗೆ ಅನುಮೋದನೆ ನೀಡದಂತೆ ಮತ್ತು ಯೋಜನೆಗಳನ್ನು ಮುಂದುವರೆಸದಂತೆ ನಿರ್ದೇಶಿಸಲು ಸಂಬಂಧಪಟ್ಟ ಕೇಂದ್ರದ ಸಂಸ್ಥೆಗಳನ್ನು ಒತ್ತಾಯಿಸುತ್ತದೆ. ಬಜೆಟ್ನಲ್ಲಿ 1000 ಕೋಟಿ…
ನಾನು ಹೇಳುವವರೆಗೆ ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ oಞ ಮಾಡಬೇಡಿ…
March 25, 2022ಬೆಂಗಳೂರು, ಮಾ.24(ಕೆಎಂಶಿ)- ಕ್ರಿಮಿನಲ್ ಹಿನ್ನೆಲೆ ಉಳ್ಳ ವರು, ಸಮಾಜದಲ್ಲಿ ಒಳ್ಳೆ ಹೆಸರು ಪಡೆಯದವರೇ ಇರುವ ಪ್ರದೇಶ ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿಗೆ ಅನುಮತಿ ನೀಡಬಾರ ದೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಐಸಿಸಿ ವರಿಷ್ಠರಿಗೆ ಮನವಿ ಮಾಡಿಕೊಂಡಿರುವ ಪ್ರಸಂಗ ಬೆಳಕಿಗೆ ಬಂದಿದೆ. ಪ್ರಸಕ್ತ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ಮಾ.30ರಂದು ತಾವು ದೆಹಲಿಗೆ ಬರಲಿದ್ದು, ಅಂದು ಪಟ್ಟಿಗೆ ಸಂಬಂಧಿಸಿದಂತೆ ತಮ್ಮೊಂದಿಗೆ ಸಮಾಲೋಚನೆ ನಡೆಸಿದ ನಂತರ ತೀರ್ಮಾನ ಕೈಗೊಳ್ಳಿ ಎಂದು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ರಾಜ್ಯ ವಿಧಾನಸಭಾ…
ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ಅಪ್ಪ-ಮಗಳು ಸಾವು
March 25, 2022ಬೆಂಗಳೂರು, ಮಾ.24- ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು 52 ವರ್ಷದ ವ್ಯಕ್ತಿ ಮತ್ತು ಅವರ ಮಗಳು ಸಾವ ನ್ನಪ್ಪಿದ ಪ್ರಕರಣಕ್ಕೆ ಸಂಬಂ ಧಿಸಿದಂತೆ ಜ್ಞಾನಭಾರತಿ ಪೆÇಲೀಸರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್(ಬೆಸ್ಕಾಂ) ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಗುರುವಾರ ಪ್ರಕರಣ ದಾಖಲಿಸಿದ್ದಾರೆ. ಜ್ಞಾನಭಾರತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಮಂಗನಹಳ್ಳಿ ನಿವಾಸಿ ಶಿವಕುಮಾರ್(52) ಅವರು ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಶಿವಕುಮಾರ್ ಅವರು ತಮ್ಮ ಮಗಳು ಚೈತನ್ಯಾ ಅವರ ಮದುವೆಗೆ ಕಲ್ಯಾಣ ಮಂಟಪಕ್ಕೆ ಕಾಯ್ದಿರಿಸಲು ಹೋಗಿದ್ದರು. ಅಲ್ಲಿಂದ…