Áಮಾನ್ಯವಾಗಿ ರೋಗ ಬಂದ ಬಳಿಕ ಚಿಕಿತ್ಸೆ ಪಡೆಯಲಾಗುತ್ತದೆ. ಇದರ ಬದಲು ಲಕ್ಷಣಗಳು ಕಂಡು ಬಂದ ಕೂಡಲೇ ಚಿಕಿತ್ಸೆ ಪಡೆಯಲು ಆರಂ ಭಿಸಬೇಕು. 2 ವಾರಕ್ಕೂ ಹೆಚ್ಚು ಕಾಲ ಕೆಮ್ಮು, ಸಂಜೆ ಜ್ವರ, ತೂಕ ಇಳಿಕೆಯಾಗುವುದು ಮೊದಲಾದ ಲಕ್ಷಣ ಕಂಡು ಬಂದರೆ ಕಡ್ಡಾಯವಾಗಿ ಪರೀಕ್ಷೆ ಮಾಡಿಸಬೇಕು. ಈಗ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯ ರೋಗ ಪರೀಕ್ಷೆ ಸೌಲಭ್ಯವಿದೆ. ಜನರು ಈ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಬೇಕು. ಬೇಗ ಪರೀಕ್ಷೆ ಮಾಡಿಸಿದರೆ ಉತ್ತಮ ಚಿಕಿತ್ಸೆ ಪಡೆಯಬಹುದು. ಗ್ರಾಮೀಣ ಭಾಗ…
ಯೋಜನೆ ಜಾರಿ ಶತಸಿದ್ಧ: ಮುಖ್ಯಮಂತ್ರಿ
March 23, 2022ಬೆಂಗಳೂರು,ಮಾ.22(ಕೆಎಂಶಿ)-ತಮಿಳುನಾಡು ವಿಧಾನ ಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ಕೈಗೊಂಡಿ ರುವ ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಯೋಜನೆ ಯನ್ನು ಕೈಗೆತ್ತಿಕೊಂಡು ಅನುಷ್ಠಾನಗೊಳಿಸುವುದು ಶತಸಿದ್ಧ ಎಂದು ವಿಧಾನಸಭೆಯಲ್ಲಿ ತಿಳಿಸಿದರು. ಶೂನ್ಯವೇಳೆಯಲ್ಲಿ ಎಚ್.ಕೆ.ಪಾಟೀಲ್, ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಮಾಡಿದ ಪ್ರಸ್ತಾ ವಕ್ಕೆ ಇಡೀ ಸದನ ಪಕ್ಷಭೇದ ಮರೆತು ಒಕ್ಕೊರಲಿನಿಂದ ಆ ರಾಜ್ಯದ ನಿರ್ಣಯವನ್ನು ಖಂಡಿಸಿತು. ತಮಿಳುನಾಡು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿರ್ಣಯವನ್ನು ಕಾನೂನುಬಾಹಿರ ವಾಗಿ ಕೈಗೊಂಡಿದೆ ಎಂದ ಮುಖ್ಯಮಂತ್ರಿ ಅವರು, ನಮ್ಮ ಹಕ್ಕಿನ…
ಏಪ್ರಿಲ್ 1ಕ್ಕೆ ರಾಜ್ಯಕ್ಕೆ ಅಮಿತ್ ಶಾ ಭೇಟಿ
March 23, 2022ಬೆಂಗಳೂರು,ಮಾ.22-ಕೇಂದ್ರ ಗೃಹ ಸಚಿವ ಅಮಿತ್ ಷಾ ಏ.1ರಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಖಚಿತ ಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ಮುಖಂಡರಲ್ಲಿ ತಳಮಳ ಸೃಷ್ಟಿಯಾಗಿದೆ. ಮುಂಬರುವ ವಿಧಾನಸಭಾ ಚುನಾವಣೆ ಗಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿ ಸುವುದು ಹಾಗೂ ರಾಜ್ಯ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ಹಿರಿಯ ಮುಖಂಡರ ಜೊತೆ ಮಾತುಕತೆ ನಡೆ ಯುವ ಸಾಧ್ಯತೆ ಇದೆ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಶಾ ಅವರನ್ನು ಭೇಟಿ ಮಾಡಿ…
ಬಿಡಿಎ ಬ್ರೋಕರ್ಗಳ ಮನೆ ಮೇಲೆ ಎಸಿಬಿ ದಾಳಿ
March 23, 2022ಬೆಂಗಳೂರು, ಮಾ.22- ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಗ್ಗೆ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಒಂಭತ್ತು ಮಧ್ಯವರ್ತಿ(ಬ್ರೋಕರ್)ಗಳ ನಿವಾಸದ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಸೇರಿದಂತೆ ಅಪಾರ ಮೌಲ್ಯದ ಆಸ್ತಿ ದಾಖಲೆಗಳ ವಶಪಡಿಸಿಕೊಂಡಿದ್ದಾರೆ. ಎಸಿಬಿ ಉಮಾ ಪ್ರಶಾಂತ್ ನೇತೃತ್ವದ 100 ಅಧಿಕಾರಿ ಗಳ ತಂಡ ಬಿಡಿಎ ಕಚೇರಿಗಳಲ್ಲಿ ಬ್ರೋಕರ್ ಕೆಲಸ ಮಾಡುತ್ತಿರುವ ಚಾಮರಾಜಪೇಟೆಯ ಬಿ.ಎನ್.ರಘು, ಆರ್.ಟಿ.ನಗರದ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಮಾಲ್ತಳ್ಳಿಯ ಕೆನಗುಂಟೆ ಮುನಿರತ್ನ (ರತ್ನವೇಲು),…
ಆಗಸ್ಟ್ನಲ್ಲಿ ಕೊರೊನಾ 4ನೇ ಅಲೆ ಭೀತಿ
March 22, 2022ಬೆಂಗಳೂರು, ಮಾ.21(ಕೆಎಂಶಿ)-ಇನ್ನೇನು ಕೊರೊನಾ ಭಯ ನಿವಾರಣೆಯಾಯಿತು ಎಂದು ನೆಮ್ಮದಿಯಲ್ಲಿರು ವಾಗಲೇ ಕೋವಿಡ್ 4ನೇ ಅಲೆ ಆಗಸ್ಟ್ ವೇಳೆಗೆ ಭಾರತದಲ್ಲೂ ಕಾಣಿಸಿಕೊಳ್ಳುವ ಭೀತಿ ಎದುರಾಗಿದೆ. ಕೋವಿಡ್ನ ರೂಪಾಂ ತರ ಉಪತಳಿ ಬಿ.ಎ.2 ಫಿಲಿ ಪೈನ್ಸ್ನಲ್ಲಿ ಕಾಣಿಸಿಕೊಂಡು, ವಿಶ್ವದ 40 ರಾಷ್ಟ್ರಗಳಿಗೆ ಈಗಾ ಗಲೇ ಹರಡಿದೆ. ಈ ರೂಪಾಂತರ ಆಗಸ್ಟ್ ವೇಳೆಗೆ ಭಾರತದಲ್ಲೂ ಕಾಣಿಸಿಕೊಳ್ಳಬಹುದೆಂದು ವಿಶ್ವ ಆರೋಗ್ಯ ಸಂಸ್ಥೆ ಮುನ್ನೆಚ್ಚರಿಕೆ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಪರಿಷತ್ ನಲ್ಲಿಂದು ಶೂನ್ಯವೇಳೆಯಲ್ಲಿ ಶಿಶಿಲ್ ನಮೋಶಿ ಅವರ ಪ್ರಸ್ತಾವಕ್ಕೆ…
ಉಕ್ರೇನ್ನಿಂದ ಬಂದ ನವೀನ್ ಪಾರ್ಥಿವ ಶರೀರಕ್ಕೆ ಕುಟುಂಬದ ಅಂತಿಮ ಧಾರ್ಮಿಕ ವಿಧಿ ವಿಧಾನ: ದಾವಣಗೆರೆ ಮೆಡಿಕಲ್ ಕಾಲೇಜಿಗೆ ದೇಹದಾನ
March 22, 2022ಉಕ್ರೇನ್ನಿಂದ ನವೀನ್ ಗ್ಯಾನಗೌಡರ್ ಪಾರ್ಥಿವ ಶರೀರವನ್ನು ಸೋಮವಾರ ಚಳಗೇರಿಗೆ ತರಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗಣ್ಯರು ಅಂತಿಮ ದರ್ಶನ ಪಡೆದರು. ಹಾವೇರಿ, ಮಾ.21- ಉಕ್ರೇನ್ ಮೇಲೆ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಪಾರ್ಥಿವ ಶರೀರವನ್ನು ಸೋಮವಾರ ಬೆಳಗ್ಗೆ ಸ್ವಗ್ರಾಮ ಚಳಗೇರಿಗೆ ತರಲಾಯಿತು. ಮಾ.1 ರಂದು ಕೀವ್ ನಗರದಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟ ನವೀನ್ ಗ್ಯಾನಗೌಡರ್ ಪಾರ್ಥಿವ ಶರೀರÀ ಸೋಮವಾರ ಮುಂಜಾನೆ…
ರಾಜ್ಯದಲ್ಲಿ ಕೊರೊನಾಗೆ ಖರ್ಚಾಗಿದ್ದು 15,645 ಕೋಟಿ!
March 19, 2022ಬೆಂಗಳೂರು,ಮಾ.18(ಕೆಎಂಶಿ)-ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ನಿರ್ವಹಣೆಗೆ ಇದೂವರೆಗೆ ಒಟ್ಟು 15,645 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿಂದು ಬಜೆಟ್ ಮೇಲಿನ ಚರ್ಚೆಗೆ ಸುದೀರ್ಘ ಉತ್ತರ ನೀಡಿದ ಮುಖ್ಯಮಂತ್ರಿ, ಕೋವಿಡ್ ವೇಳೆ ಮೊದಲ ಪ್ಯಾಕೇಜ್ಗೆ 4,640 ಕೋಟಿ ರೂ. ಖರ್ಚು ಮಾಡಲಾಗಿದೆ. 2ನೇ ಪ್ಯಾಕೇಜ್ ಅಡಿ 2,658 ಕೋಟಿ ರೂ. ಖರ್ಚು ಮಾಡಲಾಗಿದೆ. ಸೋಂಕು ನಿಯಂತ್ರಣಕ್ಕೆ 2,525 ಕೋಟಿ ರೂ., ನಗರಾಭಿವೃದ್ಧಿü ಇಲಾಖೆಗೆ 360 ಅನುದಾನ ಸೇರಿ 15,000 ಕೋಟಿ…
ಕಂದಾಯ ಸಚಿವ ಅಶೋಕ್-ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ವಿಧಾನಸೌಧದಲ್ಲೇ ಕಚ್ಚಾಟ
March 19, 2022ಬೆಂಗಳೂರು,ಮಾ.18(ಕೆಎಂಶಿ)-ತಹಸೀಲ್ದಾರ್ ನಿಯೋಜನೆ ವಿಚಾರದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಇಬ್ಬರು ಹಿರಿಯ ಪ್ರಭಾವಿ ಸಚಿವರು ಪರಸ್ಪರ ಕಚ್ಚಾಡಿಕೊಂಡಿದ್ದಾರೆ. ವಿಧಾನಸಭೆಯ ಮೊಗಸಾಲೆ ಯಲ್ಲೇ ನಡೆದ ಸಚಿವರ ಈ ರಂಪಾಟ, ಅಧಿ ಕಾರಿಗಳು ಮತ್ತು ಪತ್ರಕರ್ತರಿಗೆ ಮನರಂಜನೆ ನೀಡಿದರೆ, ಇನ್ನಿತರೆ ಸಚಿವರು-ಶಾಸಕರಿಗೆ ಇರುಸು-ಮುರಿಸು ಉಂಟು ಮಾಡಿದೆ. ಮಾಗಡಿ ತಾಲೂಕು ತಹಸೀಲ್ದಾರ್ ನೇಮಕಾತಿ ಬಗ್ಗೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.ಅಶೋಕ್ ನಡುವೆ ಈ ರಂಪಾಟ ನಡೆದಿದೆ. ಈಗ ನೇಮಕಗೊಂಡಿರುವ ಅಧಿಕಾರಿ ಭ್ರಷ್ಟನಿದ್ದಾನೆ, ಆತನನ್ನು ತಕ್ಷಣವೇ…
ಸೋಮವಾರ ಮುಂಜಾನೆ ಬೆಂಗಳೂರಿಗೆ ನವೀನ್ ಪಾರ್ಥಿವ ಶರೀರ
March 19, 2022ಬೆಂಗಳೂರು,ಮಾ.18-ಉಕ್ರೇನ್ನಲ್ಲಿ ರಷ್ಯಾ ಶೆಲ್ ದಾಳಿಗೆ ಸಾವನ್ನಪ್ಪಿದ್ದ ಹಾವೇರಿ ಮೂಲದ ನವೀನ್ ಗ್ಯಾನ ಗೌಡರ್ ಪಾರ್ಥಿವ ಶರೀರ ಸೋಮವಾರ (ಮಾ.21) ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುವ ವೇಳೆ ಈ ವಿಷಯ ತಿಳಿಸಿದ ಅವರು, ನವೀನ್ ಮೃತದೇಹ ಈಗಾಗಲೇ ಪತ್ತೆ ಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದೆ. ಸೋಮವಾರ ಪಾರ್ಥಿವ ಶರೀರ ಬೆಂಗ ಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗುವುದು ಎಂದರು. ನವೀನ್ ಮೃತದೇಹ…
ಪ್ರಾಥಮಿಕ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಚಿಂತನೆ
March 19, 2022ಬೆಂಗಳೂರು, ಮಾ.18(ಕೆಎಂಶಿ)-ಬಿಜೆಪಿ ಆಡಳಿತ ದಲ್ಲಿರುವ ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸಿ ರುವ ಯೋಜನೆಗಳನ್ನು ಹಂತ-ಹಂತವಾಗಿ ಜಾರಿ ಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಅದರಂತೆ ಪ್ರಾಥಮಿಕ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿ ಸಲು ಮುಂದಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗಾರರೊಂದಿಗೆ ಪ್ರತ್ಯೇಕ ವಾಗಿ ಮಾತನಾಡಿದ ವೇಳೆ ಇದರ ಸುಳಿವು ನೀಡಿದ್ದಾರೆ. ಗುಜರಾತ್ ಮಾದರಿಯಲ್ಲಿ ಬರುವ ಶೈಕ್ಷಣಿಕ ವರ್ಷ ದಿಂದಲೇ ರಾಜ್ಯದ ಪ್ರಾಥಮಿಕ ಶಿಕ್ಷಣದ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸುವ…