ಬೆಂಗಳೂರು, ಫೆ. 14(ಕೆಎಂಶಿ)-ಬಿಜೆಪಿ ನೇತೃತ್ವದ ಸರ್ಕಾರ ಸುಳ್ಳು ಹೇಳಿಕೊಂಡೇ ಕಾಲ ಕಳೆದಿದೆಯೇ ಹೊರತು ಅಭಿವೃದ್ಧಿ ಕಡೆಗೆ ಗಮನ ಹರಿಸಿಲ್ಲ. ಇಲ್ಲಿಯವರೆಗೂ ತೌಡು ಕುಟ್ಟುವ ಕೆಲಸ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ವಾಗ್ದಾಳಿ ನಡೆಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣ ಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿ ಸಿಲ್ಲ ಎಂದು ದಾಖಲೆ ಸಹಿತ ಎಳೆಎಳೆಯಾಗಿ ಸದನದಲ್ಲಿ ಬಿಡಿಸಿಟ್ಟರು. ದಿನನಿತ್ಯ…
ಭವ್ಯ ಕರ್ನಾಟಕ ನಿರ್ಮಾಣಕ್ಕೆ ಆದಿಚುಂಚನಗಿರಿ ಮಠದ ಪಾತ್ರ ಹಿರಿದು
February 15, 2023ಬೆಂಗಳೂರು, ಫೆ. 14(ಕೆಎಂಶಿ)- ಆದಿಚುಂಚನ ಗಿರಿ ಮಠ ತನ್ನದೇ ಇತಿಹಾಸ ಹೊಂದಿದ್ದು, ಭವ್ಯ ಕರ್ನಾಟಕ ಕಟ್ಟಲು ದೊಡ್ಡ ಸಾಧನೆ ಮಠದಿಂದ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾ ನಂದನಾಥ ಸ್ವಾಮೀಜಿಗಳ ಪಟ್ಟಾಭಿಷೇಕದ ದಶಮಾನೋತ್ಸವ ಸಮಾರಂಭ, ಬಿಜಿಎಸ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಜ್ಯೋತಿರ್ದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಿರ್ಮಲಾನಂದನಾಥ ಸ್ವಾಮೀಜಿಗಳ ಪಟ್ಟಾಭಿಷೇಕ ವಾಗಿ ಒಂದು ದಶಕ ಕಳೆದಿದ್ದು, ಇದು ಆತ್ಮಾವ ಲೋಕನ ಹಾಗೂ ಸಿಂಹಾವಲೋಕನ ಮಾಡಿಕೊಳ್ಳುವ ಘಟ್ಟ. ಹತ್ತು…
ನಮ್ಮ ಅಧಿಕಾರಿಗಳು ಇನ್ನೂ ಬ್ರಿಟಿಷ್ ಆಡಳಿತ ವ್ಯವಸ್ಥೆಯ ಮನಸ್ಥಿತಿವುಳ್ಳವರು!
February 15, 2023ಬೆಂಗಳೂರು, ಫೆ. 14(ಕೆಎಂಶಿ)-ರಾಜ್ಯದಲ್ಲಿ ಕುಡಿಯುವ ನೀರು ಯೋಜನೆಯ ವಿಚಾರದಲ್ಲಿ ನಿರ್ಲಕ್ಷ್ಯ ಮನೋಭಾವ ತಳೆದಿರುವ ಅಧಿಕಾರಿಗಳು ಇನ್ನೂ ಬ್ರಿಟಿಷ್ ಆಡಳಿತ ವ್ಯವಸ್ಥೆಯ ಮನಸ್ಥಿತಿಯಲ್ಲಿದ್ದಾರೆ ಎಂದು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆಯ ಲ್ಲಿಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಶ್ರೀರಂಗ ಪಟ್ಟಣ ವಿಧಾನಸಭಾ ಕ್ಷೇತ್ರದ ಗಾಮನ ಹಳ್ಳಿ ಸೇರಿದಂತೆ 16 ಗ್ರಾಮಗಳಿಗೆ ಕುಡಿ ಯುವ ನೀರಿನ ಯೋಜನೆ ಮಂಜೂರಾ ಗಿದ್ದರೂ ಯೋಜನೆ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಧ್ಯೆ ಪ್ರವೇಶಿಸಿದ…
ಬೆಂಗಳೂರಲ್ಲಿ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ-2023
February 14, 2023ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ. 5 ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶ ನವನ್ನು ಮೋದಿಯವರು 2ನೇ ಬಾರಿ ಉದ್ಘಾಟಿಸಿದ್ದಾರೆ. ಮುಂದಿನ 5 ದಿನಗಳ ಕಾಲ ಸಿಲಿಕಾನ್ ಸಿಟಿಯ ನಭದಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿರಲಿದೆ. 2015ರಲ್ಲೂ ಮೋದಿಯ ವರು ಏರೋ ಇಂಡಿಯಾವನ್ನು ಉದ್ಘಾಟಿಸಿದ್ದರು. ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಏರೋ ಇಂಡಿಯಾಗೆ ಚಾಲನೆ ನೀಡಿದ…
ಕನ್ನಡ ನಾಡಿನ ಸಂಸ್ಕøತಿಗೆ ಮಾರು ಹೋದ ಪ್ರಧಾನಿ ಮೋದಿ
February 14, 2023ಬೆಂಗಳೂರು: ಏರೋ ಇಂಡಿಯಾ-2023ರ ಉದ್ಘಾಟನೆ ಗಾಗಿ ಭಾನುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ ಭವನದಲ್ಲಿ ನಟರಾದ ಯಶ್ಹಾಗೂ ರಿಷಬ್ಶೆಟ್ಟಿ ಅವರನ್ನು ಭೇಟಿಯಾಗಿದ್ದರು. ಈ ಭೇಟಿ ಬಳಿಕ ಇಬ್ಬರೂ ನಟರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. 10-12 ನಿಮಿಷಗಳ ಕಾಲ ರಿಷಬ್, ಯಶ್, ನಟಿ ಶ್ರದ್ಧಾ ಜೈನ್, ನಿರ್ಮಾಪಕ ವಿಜ0iÀiï ಕಿರಗಂದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವ ರೊಂದಿಗೆ ಮೋದಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಅವರು ಹಂಚಿಕೊಂಡ ಅನುಭವವನ್ನು ಮೋದಿ ಅವರ…
ಬೆಂಗಳೂರಲ್ಲಿ ಪ್ರಧಾನಿ ಮೋದಿ
February 13, 2023ಬೆಂಗಳೂರು,ಫೆ.12-ನಾಳೆ (ಸೋಮವಾರ) ಏರೋ ಇಂಡಿಯಾ ಶೋ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಸೇರಿ ಹಲವರು ಸ್ವಾಗತಿಸಿದರು. ಪ್ರಧಾನಮಂತ್ರಿಗಳು ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದು, ಅಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಪ್ರಧಾನಿ ಮೋದಿ ಉಪಾಹಾರ ಸೇವಿಸಿ, ಸಂವಾದ ನಡೆಸಿದ್ದಾರೆ. ಮೋದಿ ಜೊತೆ ಡಿನ್ನರ್ ಸಂವಾದದಲ್ಲಿ ಸಿನಿಮಾ, ಉದ್ಯಮ ಹಾಗೂ ಕ್ರೀಡಾ ವಲಯದ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ನಟ ಯಶ್,…
ಬುದ್ಧ, ಬಸವೇಶ್ವರ, ಶಿವಾಜಿ, ಗಾಂಧೀಜಿ, ಡಾ.ಅಂಬೇಡ್ಕರ್ ಅವರನ್ನೇ ಬಿಡದವರು ನನ್ನನ್ನು ಬಿಡುತ್ತಾರೆಯೇ…!
February 10, 2023ಬೆಂಗಳೂರು: ಪೇಶ್ವೆ ವಂಶಾವಳಿಯ ನಾಯಕರೊಬ್ಬರನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹೊರಟಿದೆ ಎಂಬ ತಮ್ಮ ಹೇಳಿಕೆಯ ಬಗ್ಗೆ ನಡೆದಿರುವ ಅಪಪ್ರಚಾರದ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ಇಂಥ ಅಪಪ್ರಚಾರ, ವಿಕೃತಿಗಳಿಗೆ ನಾನು ಜಗ್ಗುವುದಿಲ್ಲ. ಪೇಶ್ವೆಗಳ ವಂಶಾವಳಿಗೆ ಸಂಬಂಧ ಪಟ್ಟ ವ್ಯಕ್ತಿಯನ್ನು ರಾಜ್ಯ ಬಿಜೆಪಿ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ಇದರಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು….
ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ ಸಂವಿಧಾನದ ಒಂಭತ್ತನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಶಿಫಾರಸು
February 10, 2023ಬೆಂಗಳೂರು, ಫೆ.9(ಕೆಎಂಶಿ)- ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನದ 9ನೇ ಪರಿಚ್ಛೇದಕ್ಕೆ ಅಳವಡಿಸುವಂತೆ ಕೇಂದ್ರಕ್ಕೆ ಶಿಫಾ ರಸು ಮಾಡಲು ಇಂದಿಲ್ಲಿ ಸೇರಿದ್ದ ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಕೇಂದ್ರಕ್ಕೆ ಶಿಫಾರಸು ಮಾಡುವ ಮುನ್ನ ನಾಳೆಯಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಸಂಬಂಧ ವಿಸ್ತೃತ ಚರ್ಚೆ ನಡೆಸಿ, ಮೀಸಲಾತಿ ಪ್ರಮಾಣ ಹೆಚ್ಚಳವಾಗಿರುವುದನ್ನು ಸದನದ ಗಮನಕ್ಕೆ ತಂದು ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿ, ಕೇಂದ್ರಕ್ಕೆ ಕಳುಹಿಸಲು ಸಭೆ ನಿರ್ಧರಿಸಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು…
ಮೈಸೂರಿಂದ ಕುಶಾಲನಗರದವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಹಣ ಬಿಡುಗಡೆ
February 9, 2023ಬೆಂಗಳೂರು, ಫೆ.8 (ಕೆಎಂಶಿ)- ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ವಿಶ್ವಮಟ್ಟದ ದರ್ಜೆಗೆ ಪರಿವರ್ತಿಸುತ್ತಿದ್ದಂತೆ ಮೈಸೂರಿನಿಂದ ಕುಶಾಲ ನಗರದವರೆಗಿನ ಹೆದ್ದಾರಿ ಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಅನು ದಾನ ಬಿಡುಗಡೆ ಮಾಡಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆಗಳ ಮಹಾಪೂರ ವನ್ನೇ ಹರಿಸುತ್ತಿದ್ದು, ಇಂದು ಮೂರು ಸಾವಿರ ಕೋಟಿ ರೂ. ಮೊತ್ತದ ಹೆದ್ದಾರಿ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮಾಡಿದೆ. ಚುನಾವಣೆಗೂ ಮುನ್ನವೇ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲು ಸಿದ್ಧತೆ ನಡೆದಿದೆ. ಬಹುತೇಕ…
ಬಿಜೆಪಿಯಲ್ಲಿ ವೀರಶೈವ ಮುಖಂಡರು ಮೂಲೆಗುಂಪು
February 8, 2023ಬೆಂಗಳೂರು,ಫೆ.7(ಕೆಎಂಶಿ)-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶ ದಿಂದ ವೀರಶೈವ ಮುಖಂಡರನ್ನು ಬಿಜೆಪಿ ಮೂಲೆಗುಂಪು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಜೋಶಿ ಅವರ ಬಗ್ಗೆ ನೀಡಿರುವ ಹೇಳಿಕೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಇವರು ಅಧಿಕಾರಕ್ಕೆ ಬಂದರೆ, ಕರ್ನಾಟಕ ಶೋಚನೀಯ ಸ್ಥಿತಿ ತಲುಪುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆಯೇ ಹೊರತು, ಯಾವುದೇ ಜಾತಿ, ಸಮಾಜಕ್ಕೆ ಅಗೌರವ ತೋರಿಲ್ಲ. ಕ್ಷಮೆ ಕೇಳುವ ಪ್ರಮೇಯವೇ ಇಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಎಂದು…