News

ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆಯಲ್ಲಿ ಶೇ.100ರ ಸಾಧನೆ
News

ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆಯಲ್ಲಿ ಶೇ.100ರ ಸಾಧನೆ

January 24, 2022

ಬೆಂಗಳೂರು, ಜ.23-ರಾಜ್ಯದಲ್ಲಿ ಕೋವಿಡ್ ಲಸಿಕೆ ಮೊದಲ ಡೋಸ್ ಶೇ.100 ರಷ್ಟು ನೀಡಲಾಗಿದ್ದು, ಇದೊಂದು ಸಾಧನೆಯಾಗಿದೆ ಎಂದಿರುವ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಈ ಸಾಧನೆಗೆ ಕಾರಣಕರ್ತರಾದ ಆರೋಗ್ಯ ಕಾರ್ಯಕರ್ತರಿಗೆ ಅಭಿ ನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ಸಚಿವರು ನೀಡಿದ ಸಹಕಾರದಿಂದಾಗಿ ಶೇ.100ರ ಗುರಿ ತಲುಪಲಾಗಿದೆ. 2ನೇ ಡೋಸ್ ಕೂಡ ಶೇ.85ರಷ್ಟು ನೀಡಲಾಗಿದ್ದು, ಒಟ್ಟಾರೆ ಕೊರೊನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಕಳೆದ 2-3…

ದೇಶದ ಮತ್ತೊಂದು ಮೈಲುಗಲ್ಲು:  162 ಕೋಟಿ ಡೋಸ್ ನೀಡಿಕೆ
News

ದೇಶದ ಮತ್ತೊಂದು ಮೈಲುಗಲ್ಲು: 162 ಕೋಟಿ ಡೋಸ್ ನೀಡಿಕೆ

January 24, 2022

ನವದೆಹಲಿ, ಜ.23- ಕೋವಿಡ್-19 ಸಾಂಕ್ರಾಮಿಕ ವಿರುದ್ಧದ ಲಸಿಕಾ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಭಾನುವಾರ ದವರೆಗೂ ದೇಶಾದ್ಯಂತ 162 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಬಳಕೆ ಯಾಗದ ಸುಮಾರು 13,32, 44,836 ಡೋಸ್ ಲಸಿಕೆ ಲಭ್ಯವಿರುವುದಾಗಿ ಹೇಳಿದೆ. ಇಲ್ಲಿಯವರೆಗೂ 1,61,47,69,885 ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ದರದ ಮಾರ್ಗಗಳು…

ಎನ್‍ಸಿಸಿಯಲ್ಲಿ 7500 ಹೊಸ ಕೆಡೆಟ್‍ಗಳಿಗೆ ಅವಕಾಶ
News

ಎನ್‍ಸಿಸಿಯಲ್ಲಿ 7500 ಹೊಸ ಕೆಡೆಟ್‍ಗಳಿಗೆ ಅವಕಾಶ

January 24, 2022

ಬೆಂಗಳೂರು: ಸ್ವಾತಂತ್ರೋತ್ಸವದ 75ನೇ ವರ್ಷಾ ಚರಣೆಯ ಸಂದರ್ಭದಲ್ಲಿ 75 ಯುನಿಟ್‍ಗಳನ್ನು ಶಾಲಾ ಕಾಲೇಜುಗಳಲ್ಲಿ ಪ್ರಾರಂಭಿಸಿ, 7500 ಹೊಸ ಕೆಡೆಟ್ ಗಳಿಗೆ ಈ ಬಾರಿ ಎನ್‍ಸಿಸಿಯಲ್ಲಿ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ಹೊಸ 75 ನೇತಾಜಿ ಅಮೃತ ಎನ್‍ಸಿಸಿ ಶಾಲೆಗಳ ಘೋಷಣೆ, ನವೀಕೃತ ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ ಚಾಲನೆ, 75 ಪೈಲಟ್‍ಗಳ ತರಬೇತಿಗೆ ಚಾಲನೆ ನೀಡಿ ಮಾತನಾಡು…

ವಿಧಾನಸೌಧ ಮುಂಭಾಗಕ್ಕೆ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸ್ಥಳಾಂತರ
News

ವಿಧಾನಸೌಧ ಮುಂಭಾಗಕ್ಕೆ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸ್ಥಳಾಂತರ

January 24, 2022

Éಂಗಳೂರು, ಜ.23- ವಿಧಾನಸೌಧದಲ್ಲಿ ಈಗಾಗಲೇ ನೇತಾಜಿ ಅವರ ಪ್ರತಿಮೆ ಇದ್ದು, ಅದನ್ನು ಕಟ್ಟಡದ ಮುಂಭಾಗಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ವಿಧಾನಸೌಧ ಆವರಣದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಭಾರತಕ್ಕೆ ಇಂದು ಹೆಮ್ಮೆಯ ದಿನ, ನೇತಾಜಿ ಬ್ರಿಟಿಷರ ವಿರುದ್ಧ ಸೈನ್ಯವನ್ನು ಕಟ್ಟಿದ ಅಪ್ರತಿಮ ನಾಯಕ ಸ್ವಾತಂತ್ರ್ಯ ಹೋರಾಟದಲ್ಲಿ…

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ
News

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ

January 24, 2022

ನವದೆಹಲಿ, ಜ.23- ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92 ವರ್ಷ) ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಲತಾ ಮಂಗೇಶ್ಕರ್ ಅವರ ಆರೋಗ್ಯ ಕುರಿತಾದ ವದಂತಿಗಳಿಗೆ ಕಿವಿಗೊಡದಂತೆ ಅವರ ವಕ್ತಾರರು ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಆರೋಗ್ಯ ಕುರಿತು ಗಾಳಿ ಸುದ್ದಿಗಳು ಹರಡಿದ್ದವು. ಈ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್ ವಕ್ತಾರರು ಮನವಿ ಮಾಡಿದ್ದಾರೆ. ಇದೇ ವಿಚಾರವಾಗಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಕೂಡ ಟ್ವೀಟ್ ಮಾಡಿದ್ದು, ಲತಾ ಅವರ…

ಹಾಲು, ನೀರು, ವಿದ್ಯುತ್ ದರ ಹೆಚ್ಚಳದ ಚಿಂತನೆಯಿಲ್ಲ
News

ಹಾಲು, ನೀರು, ವಿದ್ಯುತ್ ದರ ಹೆಚ್ಚಳದ ಚಿಂತನೆಯಿಲ್ಲ

January 23, 2022

ಬೆಂಗಳೂರು, ಜ.22(ಕೆಎಂಶಿ)-ಅಗತ್ಯ ವಸ್ತುವಾದ ಹಾಲು, ನೀರು ಹಾಗೂ ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಚಿಂತನೆ ಇಲ್ಲ. ಯಾವುದೇ ಕಾರಣಕ್ಕೂ ಈ ಬಗ್ಗೆ ಅವಸರದ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಶುಭ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಹಾಲಿನ ದರವನ್ನು ಪ್ರತಿ ಲೀಟರ್‍ಗೆ 3ರೂ., ವಿದ್ಯುತ್ ಶುಲ್ಕವನ್ನು ಯೂನಿಟ್‍ಗೆ 2 ರೂ. ಹಾಗೂ ನೀರಿನ ಶುಲ್ಕವನ್ನು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಈ ಆತಂಕಕ್ಕೆ ತೆರೆ ಎಳೆದಿರುವ…

ರಾಜ್ಯದಲ್ಲಿ ಆರು ಕೋಟಿ ಕೋವಿಡ್ ಪರೀಕ್ಷೆ;  ಕರ್ನಾಟಕಕ್ಕೆ 3ನೇ ಸ್ಥಾನ: ಸಚಿವ ಡಾ.ಸುಧಾಕರ್
News

ರಾಜ್ಯದಲ್ಲಿ ಆರು ಕೋಟಿ ಕೋವಿಡ್ ಪರೀಕ್ಷೆ; ಕರ್ನಾಟಕಕ್ಕೆ 3ನೇ ಸ್ಥಾನ: ಸಚಿವ ಡಾ.ಸುಧಾಕರ್

January 23, 2022

ಬೆಂಗಳೂರು,ಜ.22-ಕೋವಿಡ್ ಪರೀಕ್ಷೆ ವ್ಯವಸ್ಥೆಯನ್ನು ಆರಂಭ ದಿಂದಲೂ ಸಮರ್ಥವಾಗಿ ಅನುಷ್ಠಾನ ಮಾಡಿದ್ದ ಕರ್ನಾಟಕ, ಇಂದಿಗೆ 6 ಕೋಟಿ ಪರೀಕ್ಷೆಯ ಮೈಲುಗಲ್ಲು ತಲುಪಿದೆ. ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಇದು ದೊಡ್ಡ ಯಶಸ್ಸು. ಕೋವಿಡ್ ಆರಂಭವಾದಾಗ ರಾಜ್ಯದಲ್ಲಿ ಎನ್‍ಐವಿ ಘಟಕದಲ್ಲಿ ಪರೀಕ್ಷೆ ನಡೆಸ ಲಾಗುತ್ತಿತ್ತು. ಆಗ ಖಚಿತತೆಗಾಗಿ ಪುಣೆಯ ಎನ್‍ಐವಿ ಘಟಕಕ್ಕೆ ಮಾದರಿಗಳನ್ನು ಕಳುಹಿಸಲಾಗುತ್ತಿತ್ತು. ನಂತರ ಹಂತಹಂತವಾಗಿ ಹೊಸ ಸರ್ಕಾರಿ ಹಾಗೂ ಖಾಸಗಿ ಪ್ರಯೋಗಾಲಯಗಳನ್ನು ಆರಂಭಿಸಲಾಯಿತು. ಸದ್ಯ ರಾಜ್ಯದಲ್ಲಿ, 99 ಸರ್ಕಾರಿ ಹಾಗೂ 169 ಖಾಸಗಿ ಸೇರಿ ಒಟ್ಟು 268 ಲ್ಯಾಬ್…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವರಿಷ್ಠರ ಬುಲಾವ್
News

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವರಿಷ್ಠರ ಬುಲಾವ್

January 20, 2022

ಬೆಂಗಳೂರು, ಜ.19(ಕೆಎಂಶಿ)-ಕೋವಿಡ್ ಸೋಂಕಿ ನಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರಿಗೆ ದೆಹಲಿಗೆ ಬರುವಂತೆ ವರಿಷ್ಠರು ಬುಲಾವ್ ಮಾಡಿದ್ದಾರೆ. ವರಿಷ್ಠರ ಸಂದೇಶ ಬರುತ್ತಿದ್ದಂತೆ sಸಿಎಂ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ಸುಮಾರು 30 ನಿಮಿಷಗಳ ಕಾಲ ಮುಖಾಮುಖಿ ಚರ್ಚೆ ಮಾಡಿದರು. ಇದಾದ ನಂತರ ಸಂಪುಟದ ಹಿರಿಯ ಸಹೋದ್ಯೋಗಿ ಹಾಗೂ ಆತ್ಮೀಯ ಸ್ನೇಹಿತ ಆರ್.ಅಶೋಕ್ ಅವರನ್ನು ತಮ್ಮ ಗೃಹ ಕಚೇರಿಗೆ ಕರೆಸಿಕೊಂಡು ಸುದೀರ್ಘ ಚರ್ಚೆ ಮಾಡಿದರು. ಈ ಭೇಟಿಯ…

ನೈಟ್ ಕಫ್ರ್ಯೂ, ವಾರಾಂತ್ಯ ಕಫ್ರ್ಯೂ ಮುಂದುವರೆಸಬೇಕೆ…? ಬೇಡವೇ…?
News

ನೈಟ್ ಕಫ್ರ್ಯೂ, ವಾರಾಂತ್ಯ ಕಫ್ರ್ಯೂ ಮುಂದುವರೆಸಬೇಕೆ…? ಬೇಡವೇ…?

January 20, 2022

ಬೆಂಗಳೂರು, ಜ.19(ಕೆಎಂಶಿ)- ಕೋವಿಡ್-19 ಸೋಂಕಿನ ಮೇಲೆ ಹತೋಟಿ ಸಾಧಿಸಲು ಜಾರಿಯಲ್ಲಿರುವ ನೈಟ್ ಕಫ್ರ್ಯೂ ಹಾಗೂ ವಾರಾಂತ್ಯ ಕಫ್ರ್ಯೂವನ್ನು ಮುಂದುವರೆಸಬೇಕೇ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬೆಳಿಗ್ಗೆ ಮಹತ್ವದ ಸಭೆ ಕರೆದಿದ್ದಾರೆ. ಕಫ್ರ್ಯೂ ರದ್ದುಗೊಳಿಸುವಂತೆ ಉದ್ಯಮಿಗಳು ಹಾಗೂ ರಾಜ ಕಾರಣಿಗಳಿಂದ ಭಾರೀ ಒತ್ತಡ ಬರುತ್ತಿರುವ ಹಿನ್ನೆಲೆಯಲ್ಲಿ ಹಾಲಿ ನಿಯಮಾವಳಿಗಳನ್ನು ಸಡಿಲಿಸುವ ಸಂಬಂಧ ಸಭೆ ನಡೆಯಲಿದೆ. ಸಭೆಗೂ ಮುನ್ನ ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ನಾಳೆ ವರದಿ ನೀಡಲಿದೆ. ಉನ್ನತ ಮೂಲಗಳ ಪ್ರಕಾರ…

ಮಕ್ಕಳ ಆರೋಗ್ಯ ಕಾಪಾಡಿ
News

ಮಕ್ಕಳ ಆರೋಗ್ಯ ಕಾಪಾಡಿ

January 19, 2022

ಬೆಂಗಳೂರು, ಜ. 18- ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. 18 ಜಿಲ್ಲೆಗಳ ಡಿಸಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಇಂದು ಕೊರೊನಾ ಲಸಿಕಾ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ತಾಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆ ಬಗ್ಗೆ ಪರಿಶೀಲಿಸಬೇಕು, ಪರಿ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಮೇಲ್ವಿ ಚಾರಣೆ…

1 42 43 44 45 46 73
Translate »