ಬೆಂಗಳೂರು, ಫೆ.6(ಕೆಎಂಶಿ)- ಮರಾಠಿ ಪೇಶ್ವೆಗಳ ಡಿಎನ್ಎ ಇರುವ ವ್ಯಕ್ತಿಯನ್ನು ಕರ್ನಾ ಟಕಕ್ಕೆ ಮುಖ್ಯಮಂತ್ರಿ ಮಾಡಲು ಬಿಜೆಪಿ ಮತ್ತು ಆರ್ಎಸ್ಎಸ್ ಹೊರಟಿವೆ. ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಯಶವಂತಪುರ ವಿಧಾನಸಭೆ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆಯೇ ಹೊರತು ನಾನು ಎತ್ತಿದ ವಿಷಯದ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಪೇಶ್ವೆಗಳ ಡಿಎನ್ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು…
ಜನರ ಜೀವನ ಮಟ್ಟ ಸುಧಾರಣೆಗೆ ಸ್ಥಿರ ಸರ್ಕಾರ ಅಧಿಕಾರಕ್ಕೆ ತನ್ನಿ
February 7, 2023ತುಮಕೂರು: ಡಬಲ್ ಇಂಜಿನ್ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಹೆಲಿಕಾಪ್ಟರ್ ಉತ್ಪಾದನಾ ಘಟಕವೂ ಒಂದು ನಿದರ್ಶನ. 15 ವರ್ಷ ಏರೋಸ್ಪೇಸ್ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಗ್ರಿಗಳ ಐದು ಪಟ್ಟು ಸಾಮಗ್ರಿಗಳು ಕಳೆದ ಎಂಟು ವರ್ಷಗಳಲ್ಲಿ ತಯಾರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಬ್ಬಿ ತಾಲೂಕಿನ ಬಿದರಹಳ್ಳ ಕಾವಲ್ ನಲ್ಲಿ ತಲೆ ಎತ್ತಿರುವ ಏಷ್ಯಾ ಅತೀ ದೊಡ್ಡ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಹೆಲಿಕಾಪ್ಟರ್ ನಿರ್ಮಾಣ ಘಟಕವನ್ನು ಲೋಕಾರ್ಪಣೆ ಮಾಡಿ ಮೋದಿ ಮಾತ ನಾಡಿದರು. 2014ಕ್ಕೂ ಮೊದಲು ಹೇಗಿತ್ತು…
ಇಂದು ಬೆಂಗಳೂರಿಗೆ ಮೋದಿ
February 6, 2023ಬೆಂಗಳೂರು,ಫೆ.5-ಪ್ರಧಾನಿ ನರೇಂದ್ರ ಮೋದಿ ಅವರು ಫೆ.6ರಂದು ಕರ್ನಾ ಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್ಮೊಬಿಲಿಟಿ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರ್ಯಾಲಿ ಹಿನ್ನೆಲೆಯಲ್ಲಿ 1000-1,500 ವಿದ್ಯಾರ್ಥಿಗಳ ರವಾನಿ ಸುವಂತೆ ನಗರದ 6 ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ನಾಳೆ ಬೆಂಗಳೂರಿಗೆ ಆಗಮಿಸಿರುವ ಮೋದಿಯವರು ಗ್ರೀನ್ ಮೊಬಿಲಿಟಿ ರ್ಯಾಲಿಗೆ ಚಾಲನೆ ನೀಡಲಿದ್ದಾರೆ. ಈ ರ್ಯಾಲಿಯು ಹಸಿರು…
ಅಭ್ಯರ್ಥಿಗಳ ಆಯ್ಕೆಗೆ ದಿನವಿಡೀ ಕಾಂಗ್ರೆಸ್ ವ್ಯರ್ಥ ಕಸರತ್ತು
February 3, 2023ಬೆಂಗಳೂರು, ಫೆ.2(ಕೆಎಂಶಿ)- ದಿನ ವಿಡೀ ಕಸರತ್ತು ನಡೆಸಿದರೂ ಒಂದೇ ಒಂದು ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮ ಗೊಳಿಸಲು ಪ್ರದೇಶ ಕಾಂಗ್ರೆಸ್ಗೆ ಸಾಧ್ಯವಾಗಿಲ್ಲ. ನಗರದ ಹೊರವಲಯದ ರೆಸಾರ್ಟ್ ನಲ್ಲಿ ರಾಜ್ಯ ನಾಯಕರು ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಿದರೇ ಹೊರತು ಅಭ್ಯರ್ಥಿ ಗಳ ಪಟ್ಟಿ ಅಂತಿಮವಾಗಿಲ್ಲ. ಯಾವಾಗ ಬಿಡುಗಡೆ ಮಾಡಬೇಕೆಂಬುದು ಇತ್ಯರ್ಥ ವಾಗಲಿಲ್ಲ. ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್,…
ಸಿದ್ದರಾಮಯ್ಯ, ಕೆ.ಜೆ.ಜಾರ್ಜ್, ರಾಬರ್ಟ್ ವಾದ್ರಾ ಸೇರಿ `ಕೈ’ ನಾಯಕರ ವಿರುದ್ಧ ಲೋಕಾಯುಕ್ತದಲ್ಲಿ 10 ದೂರು ದಾಖಲು
February 3, 2023ಬೆಂಗಳೂರು, ಫೆ.2- ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಬರ್ಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರು ಸಲ್ಲಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್, 10 ಬೃಹತ್ ಹಗರಣಗಳಿಗೆ ಸಂಬಂಧಿ ಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಬರ್ಟ್ ವಾದ್ರಾ, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಯು.ಟಿ.ಖಾದರ್, ಎಂ.ಬಿ.ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್. ಎಂ.ಕೃಷ್ಣಪ್ಪ, ಎನ್.ಎ. ಹ್ಯಾರೀಸ್ ಹಾಗೂ ಪ್ರಿಯಾ ಕೃಷ್ಣ…
ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷಕ್ಕೆ ಏರಿಕೆ ಸರ್ಕಾರಕ್ಕೆ ಆದಾಯದ ಮೂಲಗಳು…
February 2, 2023ನವದೆಹಲಿ, ಫೆ.1-ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ಆದಾಯ ತೆರಿಗೆ ಸ್ಲಾಬ್ಗಳನ್ನು ವಿವರಿಸಿದ್ದು, ಇದೇ ವೇಳೆ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ಹೆಚ್ಚಳ ಮಾಡಿದ್ದಾರೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾ ರಾಮನ್ ಬುಧವಾರ ಲೋಕಸಭೆ ಯಲ್ಲಿ ಬಜೆಟ್ ಮಂಡಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ ವಾರ್ಷಿಕ 7 ಲಕ್ಷ ರೂ. ವರೆಗೆ ತೆರಿಗೆ ವಿನಾಯ್ತಿ ಘೋಷಿಸಲಾಗಿದೆ. ಇದು ಮಧ್ಯಮ ವರ್ಗದಲ್ಲಿ ಹರ್ಷ ತಂದಿದೆ. ಆದಾಯ ತೆರಿಗೆಗೆ ಸಂಬಂಧಿಸಿದಂತೆ ನಿರ್ಮಲಾ ಸೀತಾರಾಮನ್ 5…
ರೈಲ್ವೆಗೆ 2.4 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ
February 2, 2023ನವದೆಹಲಿ, ಫೆ.1- 2023-24ರ ಕೇಂದ್ರ ಬಜೆಟ್ ನಲ್ಲಿ ರೈಲ್ವೆಯ ಬಂಡವಾಳದ ವೆಚ್ಚವನ್ನು 2.40 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ಸೀತಾ ರಾಮನ್, ರೈಲ್ವೆಗೆ 2013-2014ರಲ್ಲಿ ಒದಗಿಸಿದ ಮೊತ್ತ ಕ್ಕಿಂತ ಒಂಬತ್ತು ಪಟ್ಟು ಬಂಡವಾಳ ತೊಡಗಿಸಲಾಗಿದೆ ಎಂದು ಹೇಳಿದರು. ಕಲ್ಲಿದ್ದಲು, ರಸಗೊಬ್ಬರ ಮತ್ತು ಆಹಾರ ಧಾನ್ಯ ಕ್ಷೇತ್ರಗಳಿಗೆ ಕೊನೆಯ ಮತ್ತು ಮೊದಲ ಮೈಲಿ ಸಂಪರ್ಕಕ್ಕಾಗಿ 100 ನಿರ್ಣಾಯಕ ಸಾರಿಗೆ ಮೂಲ ಸೌಕರ್ಯ ಯೋಜನೆಗಳನ್ನು ಗುರುತಿಸಲಾಗಿದೆ ಮತ್ತು ಖಾಸಗಿ…
ವಿಧಾನಸೌಧದ ಪ್ರತಿ ಗೋಡೆಯೂ ಲಂಚ… ಲಂಚ… ಪಿಸುಗುಡುತ್ತಿವೆ
January 24, 2023ಕೋಲಾರ: ವಿಧಾನಸೌಧದ ಪ್ರತಿ ಗೋಡೆಗೂ ಕಿವಿಕೊಡಿ ಅವು ಲಂಚ ಲಂಚ ಎಂದು ಪಿಸು ಗುಡುತ್ತವೆ. ಲಂಚವಿಲ್ಲದೆ ಬಿಜೆಪಿ ಸರ್ಕಾರದಲ್ಲಿ ಯಾವುದೇ ಕೆಲಸ ನಡೆಯಲ್ಲ. ಹೋಟೆಲ್ ಮೆನು ರೀತಿ ವಿಧಾನಸೌಧದಲ್ಲಿ ಇಂಥ ಹುದ್ದೆಗೆ ಇಷ್ಟು ಹಣ ಎಂಬ ಬೋರ್ಡ್ ಹಾಕಿ ಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದ ರಾಮಯ್ಯ ಟೀಕಾ ಪ್ರಹಾರ ನಡೆಸಿದರು. ಆರ್.ಎಲ್.ಜಾಲಪ್ಪ ಅತಿಥಿ ಗೃಹ ಪಕ್ಕದ ಮೈದಾನ ದಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ‘ಪ್ರಜಾಧ್ವನಿ’ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ನಾನು…
ಕಾಂಗ್ರೆಸ್ನಲ್ಲಿ ಬಂಡಾಯದ ಬಿಸಿ: ಮೊದಲ ಪಟ್ಟಿ ಬಿಡುಗಡೆಗೆ ಬ್ರೇಕ್
January 19, 2023ಬೆಂಗಳೂರು, ಜ.18(ಕೆಎಂಶಿ)- ನಾಯಕರ ಮುಸುಕಿನ ಗುದ್ದಾಟದಿಂದ ಕಂಗೆಟ್ಟಿರುವ ಕಾಂಗ್ರೆಸ್ಗೆ ಬಂಡಾಯದ ಬಿಸಿ ಮುಟ್ಟಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಗಳ ಪೈಪೆÇೀಟಿ ಹೆಚ್ಚಿರುವ ಕಾರಣ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಅಡ್ಡಿಯಾಗಿದೆ. ಪಟ್ಟಿ ಬಿಡುಗಡೆಗೆ ಮುನ್ನವೇ ಕೆಲವು ಆಕಾಂಕ್ಷಿಗಳು ತಮಗೆ ಟಿಕೆಟ್ ದೊರೆಯುವುದಿಲ್ಲ ಎಂದು ಜೆಡಿಎಸ್, ಬಿಜೆಪಿ ಇಲ್ಲವೆ ಗಣಿಧಣಿ ಜನಾರ್ದನ ರೆಡ್ಡಿ ಪಕ್ಷದ ಬಾಗಿಲು ಬಡಿಯಲು ಮುಂದಾಗಿದ್ದರು. ಇದರ ಸುಳಿವು ಅರಿತ ದೆಹಲಿ ವರಿಷ್ಠರು ಜನವರಿ 3ನೇ ವಾರದಲ್ಲಿ 100 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…
ಮೇಕೆದಾಟು ಯೋಜನೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲನೆ: ಕಾವೇರಿ ಪ್ರಾಧಿಕಾರ
January 13, 2023ಕಾರೈಕಲ್, ಜ.11-ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯು ಎಂಎ) ಮಂಗಳವಾರ ಹೇಳಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿ ಕಾರದ ತಂಡವು ನಿನ್ನೆಯಷ್ಟೇ ಪುದುಚೇರಿ ಮತ್ತು ತಮಿಳುನಾಡಿನ ಪಿಡಬ್ಲ್ಯೂಡಿ ಅಧಿಕಾರಿಗಳ ಜೊತೆಯಲ್ಲಿ ಕಾರೈಕಲ್ ಮತ್ತು ತಮಿಳುನಾಡು ನಡುವಿನ ಗಡಿಯಲ್ಲಿರುವ ನದಿಗಳ ಕೇಂದ್ರ ಜಲ ಆಯೋಗದ ಗೇಜಿಂಗ್ ಸ್ಟೇಷನ್ ಮತ್ತು ಇತರೆ ಪ್ರದೇಶ ಗಳನ್ನು ಪರಿಶೀಲನೆ ನಡೆಸಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಸೌಮಿತ್ರ ಕುಮಾರ್…