ನಾಗ್ಪುರ, ಏ.28- `ನನಗೀಗ 85 ವರ್ಷ. ಜೀವನವನ್ನು ಪೂರ್ತಿ ನೋಡಿ ಅನುಭವಿಸಿದ್ದೇನೆ. ಅಷ್ಟು ಸಾಕು. ಆದರೆ, ಆ ಮಹಿಳೆಯ ಪತಿ ಸತ್ತರೆ ಅವರ ಮಕ್ಕಳು ಅನಾಥರಾಗುತ್ತಾರೆ. ಅವರ ಜೀವ ಉಳಿ ಸುವುದು ನನ್ನ ಕರ್ತವ್ಯ’… ಹೀಗೆಂದ 85ರ ವೃದ್ಧ, ಅದೇ ಆಸ್ಪತ್ರೆಯಲ್ಲಿ ಆಮ್ಲಜನಕ ಸೌಲಭ್ಯದ ಹಾಸಿಗೆಗಾಗಿ ಕಾಯುತ್ತಾ ನರಳುತ್ತಿದ್ದ ಮಧ್ಯವಯಸ್ಕ, ಕೊರೊನಾ ಸೋಂಕಿತನಿಗೆ ತಮ್ಮ ಹಾಸಿಗೆ ಬಿಟ್ಟುಕೊಟ್ಟಿದ್ದಾರೆ. ಬಳಿಕ ಮನೆಗೆ ಮರಳಿದ್ದಾರೆ. ಅದಾದ ಮೂರು ದಿನಗಳ ಬಳಿಕ ಆ ಹಿರಿಯ ಜೀವ ಜೀವಬಿಟ್ಟಿದೆ. ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ….
18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ ನೋಂದಣಿ ಆರಂಭ
April 29, 2021ನವದೆಹಲಿ, ಏ. 28- 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡುವ ಅಭಿಯಾನ ಮೇ 1ರಿಂದ ಆರಂಭವಾಗಲಿದ್ದು, ಅದಕ್ಕೆ ಅರ್ಹರು ಹೆಸರು ನೋಂದಾ ಯಿಸುವ ಪ್ರಕ್ರಿ0iÉುಗೆ ಬುಧವಾರ ಸಂಜೆ 4 ಗಂಟೆಗೆ ಚಾಲನೆ ದೊರೆಯಲಿದೆ. 18-45 ವರ್ಷ ವಯೋ ಮಿತಿಯ ಎಲ್ಲಾ ಅರ್ಹ ಭಾರತೀಯ ಪ್ರಜೆಗಳು ಕೇಂದ್ರ ಸರ್ಕಾರ ಆರಂಭಿಸಿರುವ ಕೋವಿನ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ಹೆಸರು ನೋಂದಾಯಿಸಿ, ಲಸಿಕೆ ಪಡೆಯುವ ಸಮಯವನ್ನು ನಿಗದಿ ಮಾಡ ಬಹುದು. ಈ ವಯೋಮಿತಿಯವರು ನೇರವಾಗಿ ಆಸ್ಪತ್ರೆಗೆ ಬಂದು…
ರಾಜ್ಯ 14 ದಿನ ಬಂದ್
April 28, 2021ಬೆಂಗಳೂರು, ಏ. 27(ಕೆಎಂಶಿ)- ಕೋವಿಡ್ ಸೋಂಕು ನಿಯಂತ್ರಿಸಲು ಜಾರಿಗೆ ತಂದಿರುವ ಕೊರೊನಾ ಕಫ್ರ್ಯೂ ಸಂದರ್ಭ ದಲ್ಲಿ ಅನಗತ್ಯವಾಗಿ ಬೀದಿಗಿಳಿದರೆ, ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಸೋಂಕು ನಿವಾರಣೆಗಾಗಿ ಇಂದು ರಾತ್ರಿಯಿಂದಲೇ 14 ದಿನಗಳ ಕಾಲ ಕೊರೊನಾ ಕಫ್ರ್ಯೂ ಜಾರಿಯಲ್ಲಿದ್ದು, ಅಗತ್ಯ ಸೇವೆಯಲ್ಲಿ ತೊಡಗಿಸಿಕೊಳ್ಳುವವರು ಮಾತ್ರ ಮನೆಯಿಂದ ಹೊರಗೆ ಬರಬೇಕು. ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದರೆ, ಅಂತಹವರಿಗೆ ಪೊಲೀಸರು ರುಚಿ ತೋರಿಸಲಿದ್ದಾರೆ. ಹಾಲು, ಹಣ್ಣು, ತರಕಾರಿ, ಆಹಾರ ಪದಾರ್ಥ ಸೇರಿದಂತೆ ಅವಶ್ಯಕ ಸಾಮಗ್ರಿ ಖರೀದಿಸಲು ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ…
ಕೊರೊನಾ ಸೋಂಕಿನ ಸೊಕ್ಕಡಗಿಸಲು ರಾಜ್ಯ ಸರ್ಕಾರ ಕಠಿಣ ನಿರ್ಧಾರ ಇಂದು ರಾತ್ರಿಯಿಂದ 14 ದಿನ ಕೋವಿಡ್ ಕಫ್ರ್ಯೂ ಜಾರಿ
April 27, 2021ಬೆಂಗಳೂರು, ಏ. 26(ಕೆಎಂಶಿ)- ಕೋವಿಡ್ ಸೋಂಕಿನ ಸೊಕ್ಕಡಗಿಸಲು ರಾಜ್ಯದಲ್ಲಿ 14 ದಿನ ಕೋವಿಡ್ ಕಫ್ರ್ಯೂ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ಲಾಕ್ಡೌನ್ ಅನುಷ್ಠಾನ ಬೇಡ ಎಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜನತಾ ಲಾಕ್ಡೌನ್ ಅನ್ನು ಕಫ್ರ್ಯೂ ಮೂಲಕ ಅನುಷ್ಠಾನಗೊಳಿಸುತ್ತಿದೆ. ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಫ್ರ್ಯೂ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ನಾಳೆ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಗ್ಗೆ 6 ಗಂಟೆಯವರೆಗೂ ಕಫ್ರ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಬೆಳಗ್ಗೆ…
ಮೇ ಮಧ್ಯದ ವೇಳೆಗೆ ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38ರಿಂದ 48 ಲಕ್ಷಕ್ಕೇರುವ ಸಾಧ್ಯತೆ
April 27, 2021ನವದೆಹಲಿ, ಏ. 26- ಭಾರತದಲ್ಲಿ ಕೊರೊನಾ ವೈರಸ್ನ 2ನೇ ಅಬ್ಬರ ಮುಂದುವರೆದಿರುವಂತೆಯೇ ಮೇ ತಿಂಗಳಲ್ಲಿ ಸೋಂಕು ಉತ್ತುಂಗಕ್ಕೇ ರುವ ಸಾಧ್ಯತೆ ಇದ್ದು, ಮೇ 15ರ ಹೊತ್ತಿಗೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 38ರಿಂದ 48 ಲಕ್ಷಕ್ಕೇರುವ ಸಾಧ್ಯತೆ ಇದೆ ಎಂದು ಐಐಟಿ ವಿಜ್ಞಾನಿ ಗಳು ಹೇಳಿದ್ದಾರೆ. ಐಐಟಿ ವಿಜ್ಞಾನಿಗಳು ರೂಪಿಸಿದ ಗಣಿತದ ಮಾದರಿ ಪ್ರಕಾರ ಹಾಲಿ ದೈನಂದಿನ ಹೊಸ ಪ್ರಕರಣಗಳನ್ನು ಲೆಕ್ಕಾಚಾರ ಮಾಡಿದರೆ, ಕಳೆದ ಸೆಪ್ಟೆಂಬರ್ ನಲ್ಲಿ ಸುಮಾರು 10 ಲಕ್ಷ ಸಕ್ರಿಯ ಪ್ರಕರಣಗಳು ದಾಖಲಾಗಿತ್ತು. ಮೇ…
ರಾಜ್ಯದಲ್ಲಿ ಅಗತ್ಯಬಿದ್ದರೆ ವೀಕೆಂಡ್ ಕಫ್ರ್ಯೂ ಮುಂದುವರಿಕೆ
April 26, 2021ಬೆಂಗಳೂರು,ಏ.25-ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗಿರುವುದರಿಂದ ಅದರ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ಕೂಡ ಜಾರಿಗೊಳಿಸ ಲಾಗಿದೆ. ಆದರೂ ನಿನ್ನೆ ಒಂದೇ ದಿನ ಸುಮಾರು 30 ಸಾವಿರ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ, ಭಾನುವಾರ ವಿಧಾನಸೌಧದಲ್ಲಿ ಕೊರೊನಾ ನಿರ್ವ ಹಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ…
ಕೊರೊನಾ 2ನೇ ಅಲೆ ನಮ್ಮ ತಾಳ್ಮೆ ಪರೀಕ್ಷಿಸುತ್ತಿದೆ ಮನ್ ಕೀ ಬಾತ್ನಲ್ಲಿ ಪ್ರಧಾನಿ ಮೋದಿ ಕಳವಳ
April 26, 2021ನವದೆಹಲಿ,ಏ.25- ಈ ಎರಡನೇ ಕೊರೊನಾ ಅಲೆ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿದೆ. ಧೈರ್ಯಗುಂದ ಬೇಡಿ. ವದಂತಿ, ಊಹಾಪೆÇೀಹಗಳನ್ನು ನಂಬಬೇಡಿ. ಇಂತಹ ಸಂದರ್ಭದಲ್ಲಿ ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಪಡೆಯುವುದು ಬಹಳ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿದ್ದಾರೆ. ಪ್ರಧಾನಿ ಮೋದಿ ಭಾನುವಾರ ತಮ್ಮ ಮಾಸಿಕ ರೇಡಿಯೋ ಭಾಷಣ ‘ಮನ್ ಕೀ ಬಾತ್’ನ 76ನೇ ಸಂಚಿಕೆಯಲ್ಲಿ ಕೋವಿಡ್ ಕುರಿತಾಗಿ ಮಾತನಾಡಿದರು. ದೇಶಾದ್ಯಂತ ಪ್ರಸ್ತುತ ಇರುವ ಪರಿಸ್ಥಿತಿಯ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಆರೋಗ್ಯ ಮತ್ತು…
ಕೋವಿಡ್: ಭಾರತಕ್ಕೆ ಅಮೆರಿಕದಿಂದ ನೆರವಿನ ಹಸ್ತ
April 26, 2021ಚೆನ್ನೈ,ಏ.25-ದೇಶದಲ್ಲಿ 2ನೇ ಅಲೆಯ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸು ತ್ತಿದೆ. ಕೊರೊನಾ ಸೋಂಕು ಹರಡುವಿಕೆ ಶರವೇಗ ವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ದೊಡ್ಡ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಕೊರೊನಾ ಸೋಂಕಿ ತರಿಗೆ ಆಮ್ಲಜನಕ ಸೇರಿದಂತೆ ಸೂಕ್ತ ಸೌಲಭ್ಯವನ್ನು ನೀಡುವುದು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾವು ಭಾರತದ ಸ್ನೇಹಿತರ ನೆರವಿಗೆ ನಿಲ್ಲುತ್ತೇವೆ ಎಂದು ಹೇಳುವ ಮೂಲಕ ಅಮೆರಿಕ ಭಾರತಕ್ಕೆ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಸಹಾಯ ಹಸ್ತ ಚಾಚಲು ಮುಂದಾಗಿದೆ. ಚೆನ್ನೈನಲ್ಲಿರುವ ಅಮೆರಿಕ ರಾಯಭಾರಿ…
ಇದೊಂದು ರಾಷ್ಟ್ರೀಯ ವಿಪತ್ತು ಅಂತ ಘೋಷಣೆ ಮಾಡಿ ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಸಲಹೆ
April 21, 2021ಬೆಂಗಳೂರು,ಏ.20-ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದ ರಾಮಯ್ಯ ಮಾತನಾಡಿ, ಕೊರೊನಾ ಸೋಂಕಿಗೆ ಒಳಗಾಗಿರುವ ಸಿಎಂ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಬೇಗ ಗುಣ ವಾಗಲಿ ಎಂದು ಹಾರೈಸಿದರು. ಅಲ್ಲದೆ, ರಾಜ್ಯಪಾಲರು ಈ ಸಭೆ ಕರೆದಿದ್ದು ಸಂವಿಧಾನಬಾಹಿರ. ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ. ರಾಜ್ಯಪಾಲರು ಈ ಸಭೆ ಕರೆದಿದ್ದು ಸರಿಯಲ್ಲ ಅನ್ನುವ ಭಾವನೆ ನನ್ನದು ಎಂದು ಹೇಳಿದರು. ತಾಂತ್ರಿಕ ಸಲಹಾ ಸಮಿತಿ ಕೊಟ್ಟ ಶಿಫಾರಸ್ಸನ್ನು ಸರ್ಕಾರ ಪರಿಗಣಿಸಿಲ್ಲ. ತಜ್ಞರು ಸಲಹೆ ಕೊಟ್ಟ ಮೇಲೆ ಸರ್ವಪಕ್ಷ ಸಭೆ…
ಸಾರಿಗೆ ನೌಕರರು ಮುಷ್ಕರ ನಡೆಸುವ ಸಮಯ ಇದಲ್ಲ: ಹೈಕೋರ್ಟ್
April 21, 2021ಬೆಂಗಳೂರು, ಏ.20- ರಾಜ್ಯದಲ್ಲಿ ಕೋವಿಡ್ ಉಲ್ಬಣ ಆಗಿರುವಾಗ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಸರಿಯಲ್ಲ. ಮುಷ್ಕರಕ್ಕೆ ಇದು ಸಮಯವಲ್ಲ ಎಂದು ಪ್ರತಿಭಟನಾಕಾರರ ಕಿವಿ ಹಿಂಡಿರುವ ರಾಜ್ಯದ ಹೈಕೋರ್ಟ್, ಸಾರಿಗೆ ನೌಕರರು ತಮ್ಮ ಬೇಡಿಕೆ ಗಳನ್ನು ಕಾಯ್ದಿರಿಸಿಕೊಂಡು ಕರ್ತ ವ್ಯಕ್ಕೆ ಹಾಜರಾಗುತ್ತಾರೆಂಬ ವಿಶ್ವಾಸವಿದೆ ಎಂದು ಮಂಗಳವಾರ ಹೇಳಿದೆ. ರಸ್ತೆ ಸಾರಿಗೆ ಸಂಸ್ಥೆ ನೌಕರರ ಕೂಟ, ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಸೇರಿ ಪ್ರತಿವಾದಿಗಳಿಗೆ ನೋಟಿಸ್ ನೀಡಲು ಆದೇಶಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ,…