ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆ ಸಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್ಎಜುಕೇಶನ್ ಫೌಂಡೇಷನ್ ಮೇಲೆ ದಾಳಿ ನಡೆದಿದೆ. ಸದ್ಯ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿ ಗಾಲದ ಅಧಿವೇಶನದಲ್ಲಿ ಭಾಗವಹಿಸಿದ್ದು, ಇದೇ ಸಂದರ್ಭದಲ್ಲಿ ಇತ್ತ ಬೆಂಗಳೂರಿ ನಲ್ಲಿ ಸಿಬಿಐ ದಾಳಿ ನಡೆಸಿದೆ. ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ. ಈ ಹಿಂದೆ ಕೂಡ ಡಿ.ಕೆ. ಶಿವಕುಮಾರ್ ಅವರ ಮನೆ…
ನಾಳೆಯಿಂದ ಬೆಳಗಾವಿ ಅಧಿವೇಶನ:ಚುನಾವಣೆ ಹೊಸ್ತಿಲಲ್ಲಿ ಬರೀ ಮೇಲಾಟಕ್ಕೆ ವೇದಿಕೆಯಾಗುವ ಸಾಧ್ಯತೆ
December 18, 2022ಬೆಂಗಳೂರು, ಡಿ.17(ಕೆಎಂಶಿ)-ವಿಧಾನ ಸಭಾ ಚುನಾವಣಾ ಹೊಸ್ತಿಲಲ್ಲಿ ಕುಂದಾ ನಗರಿ ಸುವರ್ಣಸೌಧದಲ್ಲಿ ಸೋಮವಾರ ದಿಂದ ಆರಂಭಗೊಳ್ಳುವ ವಿಧಾನಮಂಡ ಲದ ಅಧಿವೇಶನವನ್ನು ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ವೇದಿಕೆಯಾಗಿ ಬಳಸಿಕೊಳ್ಳಲು ಸಿದ್ಧತೆ ನಡೆಸಿವೆ. ಆಡಳಿತ ಮತ್ತು ಅಭಿವೃದ್ಧಿ ಕೆಲಸಗಳಿ ಗಿಂತ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿ, ರಾಜಕೀಯವಾಗಿ ಮೇಲುಗೈ ಸಾಧಿಸಲು ಪ್ರತಿಪಕ್ಷ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ವೋಟರ್ ಐಡಿ, 40 ಪರ್ಸೆಂಟ್ ಕಮಿಷನ್ ಸೇರಿ ದಂತೆ ಹತ್ತು ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಹೊರಟಿದೆ. ಕಾಂಗ್ರೆಸ್ಗೆ…
ನಿಖಿಲ್ ಕುಮಾರಸ್ವಾಮಿ ರಾಮನಗರ ಜೆಡಿಎಸ್ ಅಭ್ಯರ್ಥಿ
December 18, 2022ರಾಮನಗರ, ಡಿ.17- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮ ನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಗರದಲ್ಲಿ ಶನಿವಾರ ನಡೆದ ಪಂಚರತ್ನ ರಥಯಾತ್ರೆ ಸಂದರ್ಭ ಹಾಲಿ ಶಾಸಕಿ ಅನಿತಾ ಕುಮಾರಸ್ವಾಮಿ ಈ ಘೋಷಣೆ ಮಾಡಿ ದರು. ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು. ಇದಕ್ಕೆಲ್ಲ ತೆರೆ ಎಳೆಯಬೇಕು ಎಂದೇ ಇಂದು ಈ ಘೋಷಣೆ ಮಾಡಿದ್ದೇನೆ. 2023ರ ಚುನಾವಣೆಯಲ್ಲಿ ನನ್ನ ಮಗನನ್ನು ಈ ಕ್ಷೇತ್ರದಿಂದ ಅಭ್ಯರ್ಥಿಯಾಗಿಸಲು ತೀರ್ಮಾನಿಸಿದ್ದೇವೆ. ನಮ್ಮ ಕುಟುಂಬಕ್ಕೆ ಆಶೀರ್ವಾದ ನೀಡಿದಂತೆ ಅವನನ್ನೂ…
ಇಂದು ಫಿಫಾ ಫುಟ್ಬಾಲ್ ವಿಶ್ವಕಪ್ ಫೈನಲ್
December 18, 2022ದೋಹಾ, ಡಿ.17- ಫಿಫಾ ವಿಶ್ವಕಪ್ ಪಂದ್ಯಾವಳಿಯ 22ನೇ ಆವೃತ್ತಿಯ ಫೈನಲ್ ಪಂದ್ಯ ಭಾನುವಾರ(ಡಿ.18) ರಾತ್ರಿ ಭಾರತೀಯ ಕಾಲಮಾನ 8.30ಕ್ಕೆ ಇಲ್ಲಿನ ಲುಸೇಲ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ವಿಶ್ವದ 2 ಬಲಿಷ್ಠ ತಂಡಗಳಾದ ಫ್ರಾನ್ಸ್-ಅರ್ಜೆಂಟೀನಾ ಪ್ರಶಸ್ತಿ ಗಾಗಿ ಸೆಣಸಲಿವೆ. ವಿಶ್ವದ ಕೋಟ್ಯಾಂತರ ಫುಟ್ಬಾಲ್ ಅಭಿಮಾನಿಗಳು ಫೈನಲ್ ಪಂದ್ಯಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದು, ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭ ವಾಗಿದೆ. ಫ್ರಾನ್ಸ್ 4ನೇ ಬಾರಿ ಫೈನಲ್ಗೇರಿ 3ನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದು, 60 ವರ್ಷದಲ್ಲೇ ಸತತ 2ನೇ ಬಾರಿ ಪ್ರಶಸ್ತಿ ಗೆದ್ದ ಮೊದಲ…
ನೇಕಾರಿಕೆ ಉದ್ಯಮಿಗಳಿಗೆ ಶೇ.50ರಷ್ಟು ಸಹಾಯಧನ
December 18, 2022ಬೆಂಗಳೂರು, ಡಿ.17- ನೇಕಾರ ಸಮುದಾಯದವರು ನೇಕಾರಿಕೆಗೆ ಸಂಬಂಧಿಸಿದ ಉದ್ಯಮಗಳನ್ನು ಆರಂಭಿಸಲು ನೀಡುವ ಸಹಾಯಧನದ ಮೊತ್ತ ವನ್ನು ಶೇ.30ರಿಂದ ಶೇ 50ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನೇಕಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನೇಕಾರರ ಹಲವು ಬೇಡಿಕೆಗಳನ್ನು ಈಡೇರಿಸುವ ತೀರ್ಮಾ ನವನ್ನು ಸಭೆಯಲ್ಲಿ ಕೈಗೊಂಡಿದ್ದೇವೆ. ವೃತ್ತಿಪರ ನೇಕಾರರಿಗೆ ಸರ್ಕಾರದಿಂದ ಹೆಚ್ಚಿನ ನೆರವು ಒದಗಿಸಲಾಗುವುದು ಎಂದರು. ವಿದ್ಯುತ್ ಮಗ್ಗಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೂ…
ಈ ಸಲ ದೇವೇಗೌಡರ ಕುಟುಂಬದಿಂದ ನಾಲ್ವರ ಸ್ಪರ್ಧೆ
December 17, 2022ಬೆಂಗಳೂರು, ಡಿ.16 (ಕೆಎಂಶಿ)- ಮುಂಬ ರುವ ವಿಧಾನಸಭಾ ಚುನಾವಣೆಯಲ್ಲಿ ದೇವೇ ಗೌಡರ ಕುಟುಂಬದಿಂದ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿ ದಂತೆ ನಾಲ್ಕು ಮಂದಿ ಕಣಕ್ಕಿಳಿಯಲಿದ್ದಾರೆ. ಅನಿತಾ ಕುಮಾರಸ್ವಾಮಿ ಈ ಬಾರಿ ಚುನಾವಣಾ ಕಣಕ್ಕಿಳಿಯಲು ಆಸಕ್ತಿ ತೋರದ ಕಾರಣ ಅವರ ಪುತ್ರ ನಿಖಿಲ್ಕುಮಾರ ಸ್ವಾಮಿ ರಾಮನಗರದಿಂದ, ಹೆಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ದೇವೇಗೌಡರ ಮತ್ತೊಬ್ಬ ಪುತ್ರ ಹೆಚ್.ಡಿ. ರೇವಣ್ಣ ಹೊಳೆನರಸೀಪುರದಿಂದಲೂ, ಅವರ ಪತ್ನಿ ಭವಾನಿ ರೇವಣ್ಣ ಇಲ್ಲವೇ ಡಾ.ಸೂರಜ್ ರೇವಣ್ಣ ಅವರನ್ನು ಹಾಸನ…
ಚುನಾವಣೆಗೆ ಮುನ್ನಒಕ್ಕಲಿಗರ ಮೀಸಲಾತಿ ಹೆಚ್ಚಳ, 2ಎಗೆ ಪಂಚಮಸಾಲಿಗರ ಸೇರ್ಪಡೆ
December 16, 2022ಬೆಂಗಳೂರು, ಡಿ.15(ಕೆಎಂಶಿ)- ವಿಧಾನಸಭಾ ಚುನಾವಣೆಗೂ ಮುನ್ನ ಒಕ್ಕಲಿಗ ಹಾಗೂ ಪಂಚಮ ಸಾಲಿಗಳಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಂಕ್ರಾಂತಿ ಹಬ್ಬದ ಕೊಯ್ಲಿನ ವೇಳೆಗೆ ಈ ಎರಡೂ ಕೃಷಿಕ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಮೂಲಕ ರಾಜ ಕೀಯ ಕೊಯ್ಲಿಗೆ ಬಿಜೆಪಿ ಕೈ ಹಾಕಿದೆ. ಈ ಸಮು ದಾಯ ಸೇರಿದಂತೆ ಕೆಲವು ಸಣ್ಣಪುಟ್ಟ ಜಾತಿಗಳು ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವಂತೆ ಈಗಾಗಲೇ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಅರ್ಜಿ ಸಲ್ಲಿಸಿವೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್…
ನನಗೆ ನನ್ನದೇ ಶಕ್ತಿ ಇದೆ, ನನ್ನ ಯಾರೂ ಮುಗಿಸಲು ಸಾಧ್ಯವಿಲ್ಲ…
December 16, 2022ಬೆಂಗಳೂರು, ಡಿ.15(ಕೆಎಂಶಿ)-ಬಿಜೆಪಿಯಲ್ಲಿ ನನ್ನನ್ನು ಮುಗಿ ಸಲು ಷಡ್ಯಂತ್ರ ನಡೆದಿದೆ ಎಂಬ ವರದಿಗಳಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂ ರಪ್ಪ ಇಂದಿಲ್ಲಿ ಖಡಕ್ಕಾಗಿ ನುಡಿದಿದ್ದಾರೆ. ಪ್ರವಾಸಕ್ಕೆ ತೆರಳುವ ಮುನ್ನ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇದು ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೇ ಮುಂದುವರೆಸುತ್ತೇನೆ ಎಂದರು. ಬಿಜೆಪಿ ನನ್ನನ್ನು ನಿರ್ಲಕ್ಷ್ಯ…
ರಾಜ್ಯದಲ್ಲಿ ಆನೆಗಳ ಸಂಖ್ಯೆ ಹೆಚ್ಚಳ: ಅರಣ್ಯದ ಹೊರಗೆ ಅಡ್ಡಾಡುತ್ತಿವೆ 400 ಆನೆಗಳು!
December 15, 2022ಬೆಂಗಳೂರು, ಡಿ.14-ಆನೆ-ಹುಲಿಗಳು ಹೆಚ್ಚಾಗಿರುವ ರಾಜ್ಯವೆಂಬ ಹೆಗ್ಗಳಿಕೆ ಪಾತ್ರ ವಾಗಿರುವ ಕರ್ನಾಟಕದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಬಳಿಕ ಮಾನವ-ಪ್ರಾಣಿ ಸಂಘರ್ಷ ಪ್ರಕರಣಗಳ ಸಂಖ್ಯೆ ಯಲ್ಲಿ ಹೆಚ್ಚಳ ಕಂಡು ಬಂದಿದೆ. ಈ ಸಂಘರ್ಷಗಳ ನಡುವೆಯೂ ರಾಜ್ಯದಲ್ಲಿ ಆನೆಗಳ ಗಣತಿಯಲ್ಲಿ ಹೆಚ್ಚಳ ಗಳು ಕಂಡು ಬಂದಿದ್ದು, 2017ರ ಸಮೀಕ್ಷಾ ವರದಿ ಪ್ರಕಾರ ರಾಜ್ಯದಲ್ಲಿ 6,049 ಆನೆ ಗಳಿದ್ದವು. ಇದೀಗ ಈ ಸಂಖ್ಯೆ 7,000-7,500ಕ್ಕೆ ಏರಿಕೆಯಾಗಿದೆ. ಇಷ್ಟೇ ಅಲ್ಲ, 400ಕ್ಕೂ ಹೆಚ್ಚು ಆನೆಗಳು ಅರಣ್ಯ ಪ್ರದೇ ಶಗಳ ಹೊರಗೆ ಅಡ್ಡಾಡುತ್ತಿದ್ದು, ಈ ಪ್ರದೇಶವನ್ನು…
ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ಕನ್ನಡ,ಇಂಗ್ಲಿಷ್ ಎರಡರಲ್ಲೂ ಉತ್ತರ ಬರೆಯಲು ಅವಕಾಶ
December 15, 2022ಬೆಂಗಳೂರು: ಪದವಿ ಮತ್ತು ಸ್ನಾತ ಕೋತ್ತರ ಪದವಿ ಹಂತ ದಲ್ಲಿ ವಿದ್ಯಾರ್ಥಿಗಳು ಯಾವುದೇ ವಿಷಯದ ಪರೀಕ್ಷೆ ಯನ್ನು ಕನ್ನಡ ಮತ್ತು ಇಂಗ್ಲಿಷ್ ಎರ ಡರಲ್ಲೂ ಬರೆಯಲು ಅವಕಾಶ ಕಲ್ಪಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ಬುಧ ವಾರ ನಡೆದ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ 23ನೇ ಸಾಮಾನ್ಯ ಸಭೆ ತೀರ್ಮಾನಿಸಿದೆ. ಇದರ ಜೊತೆಗೆ ಪ್ರಾದೇಶಿಕ ಭಾಷೆ ಗಳಲ್ಲಿ ಉನ್ನತ ಶಿಕ್ಷಣವನ್ನು ಪೂರೈಸ ಬೇಕೆಂಬ ಎನ್ಇಪಿ ಆಶಯವನ್ನು ಸಾಧಿ ಸಲು ಯುಜಿಸಿ…