ಶ್ರೀರಂಗಪಟ್ಟಣ, ಮಾ.3(ವಿನಯ್ ಕಾರೇಕುರ)- ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಪಟ್ಟಣದ ಮೈಸೂರು- ಬೆಂಗಳೂರು ಹೆದ್ದಾರಿ ಸಮೀಪದ ಅಗ್ನಿಶಾಮಕ ಠಾಣೆಯ ಪಕ್ಕದ ನೀರಿನ ಟ್ಯಾಂಕ್ ಹಿಂಭಾಗದಲ್ಲಿ ನಡೆದಿದೆ. ಸುಮಾರು 30 ರಿಂದ 35 ವಯೋಮಾನದ ಮಹಿಳೆ ಎಂದು ಅಂದಾಜಿಸಲಾ ಗಿದ್ದು, ಮುಖ ಛಿದ್ರವಾಗಿದ್ದರಿಂದ ಈಕೆಯ ಗುರುತು ಪತ್ತೆಯಾಗಿಲ್ಲ. ಮಂಗಳವಾರ ಬೆಳಿಗ್ಗೆ ಸ್ಥಳೀಯರೊಬ್ಬರು ಬಹಿರ್ದೆಸೆಗೆ ಹೋಗಿದ್ದಾಗ ಮಹಿಳೆಯ ಶವ ಪತ್ತೆಯಾ ಗಿದ್ದು, ಕೂಡಲೇ ಅವರು ಪೊಲೀಸ್ ಹೈವೇ ಪೆಟ್ರೋಲ್ ವಾಹನಕ್ಕೆ ಮಾಹಿತಿ ನೀಡಿದ್ದಾರೆ….
ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ
January 23, 2020ನಂಜನಗೂಡು, ಜ.22(ರವಿ)-ಅಕ್ರಮ ವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ನಗರ ಠಾಣೆ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ನೆರವಾದರು. ಮೈಸೂರಿನ ಶಾಂತಿ ನಗರ ನಿವಾಸಿ ನಸ್ರುಲ್ಲಾ, ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದ ನಿವಾಸಿ ಸಿದ್ದೇಗೌಡ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರದ ಸಿದ್ದಯ್ಯ ರಾಜು ಬಂಧಿತರು. ಕರ್ನಾಟಕದಿಂದ ಕೇರಳ ರಾಜ್ಯದ ಕಸಾಯಿಖಾನೆಗೆ ನಂಜನಗೂಡು ಮಾರ್ಗದಲ್ಲಿ ಟ್ರಕ್(ಕೆಎಲ್19, 6894)ನಲ್ಲಿ ಅಕ್ರಮವಾಗಿ 30ಕ್ಕೂ ಹೆಚ್ಚು ಜಾನುವಾರು ಗಳನ್ನು ಸಾಗಿಸಲಾಗುತ್ತಿತ್ತು….
ಬಯಲು ರಂಗಮಂದಿರದಲ್ಲಿ ನಾಳೆಯಿಂದ ಸೆ.26ರವರೆಗೆ ಯುವ ಸಂಭ್ರಮ
September 16, 2019ಮೈಸೂರು: ಪ್ರಸಕ್ತ ಸಾಲಿನ ನಾಡ ಹಬ್ಬ ದಸರಾ ಮಹೋತ್ಸವದ ಮೊಟ್ಟ ಮೊದಲ ಕಾರ್ಯ ಕ್ರಮ ಯುವ ಸಂಭ್ರಮ ಸೆ.17ರಿಂದ ಆರಂಭವಾಗಿ ಸೆ.26ರವರೆಗೆ ನಡೆಯಲಿದ್ದು, ಮೈಸೂರು ವಿಶ್ವವಿದ್ಯಾ ನಿಲಯದ ಬಯಲು ರಂಗ ಮಂದಿರದಲ್ಲಿ ಹಲವು ಕಾಲೇಜುಗಳ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ. ದಸರಾ ಮಹೋತ್ಸವದ ಸಂಭ್ರಮಕ್ಕೆ ಕಳೆಗಟ್ಟಲಿ ರುವ ಯುವ ಸಂಭ್ರಮ-2019ರಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ 250ಕ್ಕೂ ಹೆಚ್ಚು ಕಾಲೇಜು ಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕಲಾ ಪ್ರಾಕಾರಗಳನ್ನು ಅನಾವರಣಗೊಳಿಸಲಿದ್ದಾರೆ. ಸೆ.17 ರಂದು 20…
ನಾಲ್ಕೂಕಾಲು ಕಟ್ಟಿ ರಸ್ತೆಯಲ್ಲಿ ಸಾಯಲು ಬಿಟ್ಟಿದ್ದನಾಯಿಯನ್ನು ರಕ್ಷಿಸಿದ ಹೃದಯವಂತರು
August 30, 2019ಮೈಸೂರು,ಆ.29-ನಾಲ್ಕೂಕಾಲುಗಳನ್ನು ಬಿಗಿಯಾಗಿ ಕಟ್ಟಿ ಸಾಯಲು ರಸ್ತೆಯಲ್ಲಿ ಬಿಟ್ಟಿದ್ದ ನಾಯಿಯೊಂದನ್ನು ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿ ರಕ್ಷಿಸಲಾಗಿದೆ. ಅದೃಷ್ಟವಶಾತ್ ಈ ನಾಯಿಯನ್ನು ಹೃದಯವಂತ ವ್ಯಕ್ತಿಯೊಬ್ಬರು ದತ್ತು ಪಡೆದುಕೊಂಡಿದ್ದಾರೆ. ಚಿಕಿತ್ಸೆ ಯನ್ನೂ ಕೊಡಿಸಿದ್ದಾರೆ. ಮೈಸೂರಿನ ಅಜಿತ್ ತಂಡೂರ್ ಬುಧವಾರ ಚಾಮುಂಡಿಬೆಟ್ಟದ ರಸ್ತೆಯಲ್ಲಿ ವಾಯುವಿಹಾರ ನಡೆಸುತ್ತಿದ್ದಾಗ ಸಂಕಷ್ಟಕ್ಕೆ ಸಿಲುಕಿದ್ದ ನಾಯಿಯನ್ನು ಕಂಡು ರಕ್ಷಿಸಿದ್ದಾರೆ. `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಜನನಿಬಿಡ ಸ್ಥಳದಲ್ಲಿ ನಾಲ್ಕೂಕಾಲು ಕಟ್ಟಿ ಹಾಕಿದ್ದ ನಾಯಿ ಯನ್ನು ನೋಡಿ ಆಶ್ಚರ್ಯವಾಯಿತು. ಕಾಲುಗಳನ್ನು ಬಿಗಿಯಾಗಿ ಕಟ್ಟಿದ್ದರಿಂದ ನಾಯಿಗೆ ಮುಂದೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ತಕ್ಷಣ…
ಮೈಸೂರಿನ ರಂಗಕರ್ಮಿ ಮುದ್ದುಕೃಷ್ಣ, ಪತ್ನಿ CFTRI ವಿಜ್ಞಾನಿ ಡಾ.ಡಿ.ಇಂದ್ರಾಣಿ ದಾರುಣ ಸಾವು
July 9, 2019ಮೈಸೂರು, ಜು. 8(ಆರ್ಕೆ)- ಉತ್ತರ ಪ್ರದೇಶದ ಲಕ್ನೋ ದಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೈಸೂರಿನ ಖ್ಯಾತ ಹಿರಿಯ ರಂಗಕರ್ಮಿ ಮುದ್ದುಕೃಷ್ಣ(68) ಹಾಗೂ ಪತ್ನಿ, ಸಿಎಫ್ಟಿಆರ್ಐ ವಿಜ್ಞಾನಿ ಡಾ.ಡಿ.ಇಂದ್ರಾಣಿ ಅವರು ಸಾವನ್ನಪ್ಪಿದ್ದಾರೆ. ಲಕ್ನೋ ನಗರದ ಕಿನ್ಜಾರ್ಜ್ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ದಂಪತಿಯ ದೇಹ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷಾ ಪಕ್ರಿಯೆ ಪೂರ್ಣಗೊಂಡ ನಂತರ ನಾಳೆ(ಜು.9) ಮಧ್ಯಾಹ್ನದೊಳಗಾಗಿ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗುವುದು ಎಂದು ಮುದ್ದು ಕೃಷ್ಣ ಅವರ ಆಪ್ತ ವಲಯ `ಮೈಸೂರು ಮಿತ್ರ’ನಿಗೆ ತಿಳಿಸಿದೆ. ಲಕ್ನೋದಲ್ಲಿರುವ…
ಕೃಷಿ ಕ್ಷೇತ್ರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರ್ಯಾಲಿ
July 9, 2019ಹಾಸನ,ಜು.8- ಜಿಲ್ಲೆಯ ಸಮಗ್ರ ನೀರಾವರಿ ಅಭಿವೃದ್ಧಿಗೆ ಹಾಗೂ ಕೃಷಿ ಕ್ಷೇತ್ರದ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾ ಯಿತು. ಬಳಿಕ ಜಿಲ್ಲಾಡಳಿತಕ್ಕೆ ಮನವಿಪತ್ರ ಸಲ್ಲಿಸಲಾಯಿತು. ಸೋಮವಾರ ಬೆಳಿಗ್ಗೆ ನಗರದ ಹೇಮಾ ವತಿ ಪ್ರತಿಮೆ ಬಳಿಯಿಂದ ಹೊರಟ ರೈತರ ಪ್ರತಿಭಟನಾ ಮೆರವಣಿಗೆ ಡಿಸಿ ಕಚೇರಿ ಆವರಣ ತಲುಪಿತು. ಅಲ್ಲಿ ಮಾತನಾಡಿದ ರೈತ ಮುಖಂಡರು, ಕೃಷಿ, ಹೈನುಗಾರಿಕೆ ಅಭಿವೃದ್ಧಿ…
ಪಟ್ಟು ಸಡಿಲಿಸದ ರಾಮಲಿಂಗಾ ರೆಡ್ಡಿ
July 8, 2019ಬೆಂಗಳೂರು: ರಾಜೀನಾಮೆ ಹಿಂಪಡೆಯುವಂತೆ ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿ ಸಲು ಮಲ್ಲಿಕಾರ್ಜುನ ಖರ್ಗೆ ನಡೆಸಿದ ಸಂಧಾನ ವಿಫಲವಾಗಿದೆ. ರಾಮಲಿಂಗಾ ರೆಡ್ಡಿ ಅವರ ಜೊತೆ ಮಲ್ಲಿಕಾರ್ಜುನ ಖರ್ಗೆ ದೂರವಾಣಿ ಮೂಲಕ ಮಾತನಾಡಿ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ರೆಡ್ಡಿ ಅವರು ನಾನು ಈಗಾಗಲೇ ರಾಜೀ ನಾಮೆ ಕೊಟ್ಟಾಗಿದೆ. ಅದರಿಂದ ನಾನಾಗಲೀ, ನನ್ನ ಪುತ್ರಿಯಾಗಲೀ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನಗೆ ನಿಮ್ಮ ಅಧಿಕಾರವೂ ಬೇಡ, ಸಹವಾಸವೂ ಬೇಡ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಎಂದು ಹೇಳಲಾಗಿದೆ. ಇದಾದ ನಂತರ ಡಿ.ಕೆ.ಶಿವಕುಮಾರ್…
`ಮೈತ್ರಿ’ ಉಳಿವಿಗೆ ಸಂಪುಟ ಪುನರ್ರಚನೆ
July 4, 2019ಬೆಂಗಳೂರು, ಜು. 3(ಕೆಎಂಶಿ)-ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲ ವನ್ನು ಮತ್ತೊಮ್ಮೆ ಪುನರ್ ರಚಿಸಲು ಮುಂದಾಗಿದ್ದಾರೆ. ಅಮೆರಿಕಾ ಪ್ರವಾಸದಿಂದ ಹಿಂತಿರುಗು ತ್ತಿದ್ದಂತೆ ಆರು ಹೊಸ ಮುಖಗಳಿಗೆ ಸಂಪುಟ ದಲ್ಲಿ ಅವಕಾಶ ಮಾಡಿಕೊಡಲು ತೀರ್ಮಾ ನಿಸಿದ್ದಾರೆ. ಆಪರೇಷನ್ ಕಮಲದ ಮೂಲಕ ಸರ್ಕಾರ ಉರುಳಿಸಲು ಬಿಜೆಪಿ ವರಿ ಷ್ಠರೇ ಮುಂದಾಗಿರುವ ಹಿನ್ನೆಲೆಯಲ್ಲಿ ತಂತ್ರಕ್ಕೆ ಪ್ರತಿತಂತ್ರದ ಮೊದಲ ಭಾಗ ಇದಾಗಿದೆ. ಸರ್ಕಾರ ಉಳಿಸಲು ಕಾಂಗ್ರೆಸ್-ಜೆಡಿಎಸ್ನ ಐವರು ಸಚಿವರು ಸ್ವಯಂ ಪ್ರೇರಿತರಾಗಿ ತಮ್ಮ ಸ್ಥಾನ ತ್ಯಜಿಸುವ ಇಂಗಿತ…
ದಳ ಸಂಸದರ ಗೆಲುವಿನಲ್ಲಿ ಕೈ ಶ್ರಮವಿದೆ: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ ಪ್ರತಿಪಾದನೆ
July 3, 2019ಹಾಸನ, ಜು.2- ಇತ್ತೀಚಿನ ಲೋಕ ಸಭೆ ಚುನಾವಣೆಯಲ್ಲಿ ಜಿಲ್ಲೆಯ ಮೈತ್ರಿ (ಜೆಡಿಎಸ್) ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶ್ರಮವೂ ಇದೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ ಹೇಳಿದರು. ನಗರದಲ್ಲಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಯಲ್ಲಿ ಮಂಗಳವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಯುವ ಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ನವರು ಶ್ರಮಿಸಿದ್ದರೂ ಜೆಡಿಎಸ್ನಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಮೇಲೆ ಆಗುತ್ತಿರುವ ದುಷ್ಪರಿಣಾಮ ಗಳ ಕುರಿತು ದೂರುಗಳು ಕೇಳಿ ಬಂದಿವೆ. ಈ…
ಹೀಗೂ ರಸ್ತೆ ಅಭಿವೃದ್ಧಿಪಡಿಸಬಹುದೇ… ಅಬ್ಬಾ ರಸ್ತೆಯ ಕಾಮಗಾರಿ ಬಗ್ಗೆ ಸಾರ್ವಜನಿಕರ ಆಕ್ರೋಶ
June 26, 2019ಮೈಸೂರು, ಜೂ.25(ಎಸ್ಬಿಡಿ)-ಮೈಸೂರಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವುದರಿಂದ ರಸ್ತೆ ಅಗಲೀಕರಣ ಅಗತ್ಯ. ಆದರೆ ಕೋಟ್ಯಾಂತರ ರೂ. ವೆಚ್ಚದಲ್ಲಿ ನಗರ ಪಾಲಿಕೆ ವತಿಯಿಂದ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯೊಂದರ ಬಗ್ಗೆ ಸಾರ್ವಜನಿಕ ವಲಯ ದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಹಣಕಾಸು ಆಯೋಗ(ಎಸ್ಎಫ್ಸಿ)ದ ಅನುದಾನದಲ್ಲಿ ನಗರ ಪಾಲಿಕೆ ವತಿಯಿಂದ ಫೈವ್ ಲೈಟ್ ವೃತ್ತದಿಂದ ಹೈದರಾಲಿ ರಸ್ತೆವರೆಗಿನ ಅಬ್ಬಾ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಇದಕ್ಕಾಗಿ ಸರ್ಕಾರದ ಅನುಮತಿ ಯೊಂದಿಗೆ ಸರ್ಕಾರಿ ಅತಿಥಿ ಗೃಹದ ಜಾಗವನ್ನೂ ಬಳಸಿಕೊಂಡು ಕಾಮಗಾರಿ…