ಹಾಸನ, ಜು.2- ಇತ್ತೀಚಿನ ಲೋಕ ಸಭೆ ಚುನಾವಣೆಯಲ್ಲಿ ಜಿಲ್ಲೆಯ ಮೈತ್ರಿ (ಜೆಡಿಎಸ್) ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶ್ರಮವೂ ಇದೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ ಹೇಳಿದರು. ನಗರದಲ್ಲಿನ ಕಾಂಗ್ರೆಸ್ ಜಿಲ್ಲಾ ಕಚೇರಿ ಯಲ್ಲಿ ಮಂಗಳವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಯುವ ಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ನವರು ಶ್ರಮಿಸಿದ್ದರೂ ಜೆಡಿಎಸ್ನಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಮೇಲೆ ಆಗುತ್ತಿರುವ ದುಷ್ಪರಿಣಾಮ ಗಳ ಕುರಿತು ದೂರುಗಳು ಕೇಳಿ ಬಂದಿವೆ. ಈ…
ಹೀಗೂ ರಸ್ತೆ ಅಭಿವೃದ್ಧಿಪಡಿಸಬಹುದೇ… ಅಬ್ಬಾ ರಸ್ತೆಯ ಕಾಮಗಾರಿ ಬಗ್ಗೆ ಸಾರ್ವಜನಿಕರ ಆಕ್ರೋಶ
June 26, 2019ಮೈಸೂರು, ಜೂ.25(ಎಸ್ಬಿಡಿ)-ಮೈಸೂರಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವುದರಿಂದ ರಸ್ತೆ ಅಗಲೀಕರಣ ಅಗತ್ಯ. ಆದರೆ ಕೋಟ್ಯಾಂತರ ರೂ. ವೆಚ್ಚದಲ್ಲಿ ನಗರ ಪಾಲಿಕೆ ವತಿಯಿಂದ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯೊಂದರ ಬಗ್ಗೆ ಸಾರ್ವಜನಿಕ ವಲಯ ದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಹಣಕಾಸು ಆಯೋಗ(ಎಸ್ಎಫ್ಸಿ)ದ ಅನುದಾನದಲ್ಲಿ ನಗರ ಪಾಲಿಕೆ ವತಿಯಿಂದ ಫೈವ್ ಲೈಟ್ ವೃತ್ತದಿಂದ ಹೈದರಾಲಿ ರಸ್ತೆವರೆಗಿನ ಅಬ್ಬಾ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಇದಕ್ಕಾಗಿ ಸರ್ಕಾರದ ಅನುಮತಿ ಯೊಂದಿಗೆ ಸರ್ಕಾರಿ ಅತಿಥಿ ಗೃಹದ ಜಾಗವನ್ನೂ ಬಳಸಿಕೊಂಡು ಕಾಮಗಾರಿ…
ಮೈಸೂರು ರೈಲು ನಿಲ್ದಾಣಕ್ಕೆ ಇಂಟಿಗ್ರೇಟೆಡ್ ಐಎಸ್ಒ ಪ್ರಮಾಣಪತ್ರ
June 25, 2019ಮೈಸೂರು ವಿಭಾಗದ 30 ರೈಲು ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ ಕಲ್ಪಿಸಲು ನಿರ್ಧಾರ ಮೈಸೂರು, ಜೂ.24(ಎಂಕೆ)- ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ಹೆಚ್ಚು ವರಿಯಾಗಿ 30 ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ. ಪ್ರಸ್ತುತ ಮೈಸೂರು ವಿಭಾಗವು 55 ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯವನ್ನು ಹೊಂದಿದ್ದು, 2ನೇ ಹಂತದಲ್ಲಿ 30 ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ಸೌಲಭ್ಯ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ರೈಲ್ವೆ ಸಚಿವಾಲಯದ 100 ದಿನಗಳ ಕ್ರಿಯಾ ಯೋಜನೆ ಅಂಗವಾಗಿ ವೈ-ಫೈ ಸೌಲಭ್ಯ ಒದಗಿಸಲಾಗುತ್ತಿದೆ….
ಮಳೆಗಾಗಿ ವಿಶೇಷ ಪೂಜೆ
June 9, 2019ಮೈಸೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ನಾಡಿನಲ್ಲಿ ಉತ್ತಮ ಮಳೆಯಾಗಲಿ ಎಂದು ಮೈಸೂರಿನ ಕೃಷ್ಣಮೂರ್ತಿಪುರಂ ರಾಮಮಂದಿರ ದಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಇದೇ ವೇಳೆ ಮೈಸೂರು ನಗರ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಮಾತ ನಾಡಿ, ರೈತಾಪಿ ವರ್ಗ ಸಾಲ ಮಾಡಿಕೊಳ್ಳದೇ ನೆಮ್ಮದಿಯಿಂದ ಇರಬೇಕಾದರೆ ಸಕಾಲದಲ್ಲಿ ಮಳೆಯಾಗಬೇಕು. ಜೀವನದಿ ಕಾವೇರಿ ಹರಿಯುವ ಪ್ರದೇಶ ಮತ್ತು ಜಲಾಶಯಗಳು ತುಂಬಿ ಹರಿಯಬೇಕು. ಅದಕ್ಕೆ ವರುಣ ಕೃಪೆ ತೋರಬೇಕು. ಹೀಗಾಗಿ ಇಂದು ಕಾವೇರಿ…
ಗ್ಯಾಂಗ್ ರೇಪ್ ಪ್ರಕರಣ: ಮೂವರ ಸೆರೆ, ಐವರ ಪತ್ತೆಗೆ ಮುಂದುವರೆದ ಶೋಧ
June 1, 2019ಮೈಸೂರು: ಮೈಸೂರಿನ ಹೊರ ವಲಯದಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣವನ್ನು ಕಡೆಗೂ ಭೇದಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ನಗರದ ನಿವಾಸಿ ಗಳೆನ್ನಲಾದ ಕಾರ್ತಿಕ್ಕುಮಾರ(25), ಜೀವನ್(25) ಹಾಗೂ ಸೂರ್ಯ ಕುಮಾರ್(23) ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಇನ್ನೂ ಐವರ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಕೆ.ಆರ್. ಉಪ ವಿಭಾಗದ ಎಸಿಪಿ ಜಿ.ಟಿ.ನಾಯಕ್ ಅವರು ಗ್ಯಾಂಗ್ ರೇಪ್ ಪ್ರಕರಣದ ತನಿಖೆಯ ನೇತೃತ್ವ ವಹಿಸಿ ಕುವೆಂಪು ನಗರ ಠಾಣೆ ಇನ್ಸ್ಪೆಕ್ಟರ್ ರಾಜು, ಸಬ್ಇನ್ಸ್ಪೆಕ್ಟ್ಗಳಾದ ಅರುಣ್ ಮತ್ತು ರಘು…
On May 27, the ‘melody vocal’
May 25, 2019ಮೈಸೂರು: ಮೈಸೂರಿನ ನಾದಬ್ರಹ್ಮ ಸಂಗೀತ ಸಭಾದಲ್ಲಿ ಮೇ 27ರಂದು ಹಳೆಯ ಕನ್ನಡ ಮತ್ತು ಹಿಂದಿ ಚಿತ್ರಗೀತೆಗಳ ಗಾಯನ ಕಾರ್ಯಕ್ರಮ `ಮಧುರ ಗಾಯನ’ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಎಲ್.ಚಂದ್ರಶೇಖರ್ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5.30ರಿಂದ 9.30ರವರೆಗೆ ಗಾಯನ ಕಾರ್ಯಕ್ರಮ ನಡೆಯಲಿದ್ದು, ಪ್ರವೇಶ ಉಚಿತ. ಲೇಖಕ ಬಿ.ಬಿ.ಶಿವಣ್ಣ ಶೀತರ್, ವಿಜಯಧ್ವನಿ ಪ್ರತಿಷ್ಠಾನ ಸಾಂಸ್ಕøತಿಕ ಸಂಸ್ಥೆಯ ಆರ್.ಸಿ.ರಾಜ ಲಕ್ಷ್ಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಾನು ವೃತ್ತಿಯಲ್ಲಿ ವಕೀಲನಾಗಿದ್ದರೂ ಪ್ರವೃತ್ತಿಯಲ್ಲಿ ಸಂಗೀತದ ಆರಾಧಕ. ಹೀಗಾಗಿ…
ಉಪ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ: ಸಿಎಸ್ಪಿ
October 26, 2018ಕೆ.ಆರ್.ಪೇಟೆ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕೂಟದ ಅಭ್ಯರ್ಥಿ ಗೆಲ್ಲು ವುದು ಸೂರ್ಯ-ಚಂದ್ರರು ಉದಯಿಸು ವುದು ಎಷ್ಟು ಸತ್ಯವೋ, ಅಷ್ಟೇ ಖಚಿತ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು. ಮಂಡ್ಯ ಲೋಕಸಭೆಯ ಉಪಚುನಾ ವಣೆಯ ಹಿನ್ನೆಲೆಯಲ್ಲಿ ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನ ದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯ ಕರ್ತರು ಹಾಗೂ ಮುಖಂಡರ ಪೂರ್ವ ಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು. ಮುಖ್ಯ…
ಕೆಲಸ ಮಾಡಲು ಇರಿಸು ಮುರಿಸು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
October 25, 2018ಮೈಸೂರು: ಬಹಳ ವರ್ಷಗಳಿಂದ ಎದುರಾಳಿಯಾಗಿ ಹೋರಾಟ ಮಾಡಿಕೊಂಡು ಬಂದು, ಈಗ ಏಕಾಏಕಿ ಜೊತೆಯಲ್ಲಿ ಕೆಲಸ ಮಾಡಲು ಇರಿಸು ಮುರಿಸು ಉಂಟಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಮಂಡ್ಯ ಜಿಲ್ಲೆಯಲ್ಲಿ ಉಪ ಚುನಾವಣಾ ಪ್ರಚಾರ ಕೈಗೊಳ್ಳುವ ಸಲುವಾಗಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಚುನಾವಣಾ ಪ್ರಚಾರದಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವಿನ ಭಿನ್ನಮತದ ಬಗ್ಗೆ ತಿಳಿಸಿದರು. ಬಿಜೆಪಿಯವರೇ ಅಸ್ಥಿರರಾಗುತ್ತಿದ್ದಾರೆ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯವರೇ ಅಸ್ಥಿರರಾಗುತ್ತಿದ್ದಾರೆ. ಎಲ್ಲಾ ಐದು ಕ್ಷೇತ್ರಗಳಲ್ಲೂ…
ಶಿಕ್ಷಣಕ್ಕೆ ಆದ್ಯತೆ ನೀಡಿ, ಮೂಢನಂಬಿಕೆ ಬಿಡಿ ಉಪ್ಪಾರ ಸಮುದಾಯಕ್ಕೆ ಸಚಿವ ಸಿ.ಪುಟ್ಟರಂಗಶೆಟ್ಟಿ ಕರೆ
October 24, 2018ಚಾಮರಾಜನಗರ: ನನ್ನ ಉಪ್ಪಾರ ಸಮಾಜದ ಬಂಧುಗಳೇ, ಶಿಕ್ಷಣಕ್ಕೆ ಆದ್ಯತೆ ನೀಡಿ.., ಮೂಢನಂಬಿಕೆ, ಕಂದಾಚಾರ ಬಿಡಿ.., ಬಾಲ್ಯ ವಿವಾಹ ಪದ್ಧತಿಯನ್ನು ಹೋಗಲಾಡಿಸಿ… ಹೀಗೆ ಉಪ್ಪಾರ ಸಮಾಜಕ್ಕೆ ಕರೆ ಮತ್ತು ಸಲಹೆ ನೀಡಿದವರು ಜಿಲ್ಲಾ ಉಸ್ತುವಾರಿ ಸಚಿ ವರೂ ಆದ ಉಪ್ಪಾರ ಸಮಾಜದ ಗಡಿ ಯಜ ಮಾನರಾದ ಸಿ.ಪುಟ್ಟರಂಗಶೆಟ್ಟಿ. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ನಗ ರದ ಸರ್ಕಾರಿ ಪೇಟೆ ಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು….
ಮುಕ್ತ ವಿವಿ ಕೋರ್ಸ್ಗಳಿಗೆ ಪ್ರವೇಶಾತಿ ಅವಧಿ ವಿಸ್ತರಣೆ
October 2, 2018ಮೈಸೂರು: ವಿಶ್ವವಿದ್ಯಾನಿಲಯವು 2018- 19ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಯುಜಿಸಿಯಿಂದ ಮಾನ್ಯತೆ ದೊರೆತಿರುವ ಎಲ್ಲಾ ಕೋರ್ಸ್ ಗಳಿಗೆ ಈಗಾಗಲೇ ಪ್ರವೇಶಾತಿಯನ್ನು ಪ್ರಾರಂಭಿಸಿದ್ದು, ವಿವಿ ಕೇಂದ್ರ ಕಚೇರಿ ಹಾಗೂ ತನ್ನ ಎಲ್ಲಾ ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿ ಪ್ರಕ್ರಿಯೆಗಳು ನಡೆಯುತ್ತಿದೆ. ಪ್ರವೇಶಾತಿಯ ಅಂತಿಮ ದಿನಾಂಕವನ್ನು ದಂಡ ಶುಲ್ಕದೊಂದಿಗೆ ಅ.20ರವರೆಗೆ ವಿಸ್ತರಿಸಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ. ವಿವಿಗೆ ವಿದ್ಯಾರ್ಥಿಗಳು ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಕೋರಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸುವಂತೆ ಕುಲಪತಿಯವರು ಯುಜಿಸಿಗೆ ಪತ್ರ ಬರೆದು ಕೋರಿದ್ದರು. ಈ…