ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ 9 ಮಂದಿಯ ಮೇಲೆ ಸಿಬಿಐ ದಾಳಿ
ಮೈಸೂರು

ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ 9 ಮಂದಿಯ ಮೇಲೆ ಸಿಬಿಐ ದಾಳಿ

November 9, 2019

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿದಂತೆ 9 ಮಂದಿ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ಇಂದು ಬೆಳಿಗ್ಗೆಯೇ ಬೆಂಗಳೂರಿನ 11 ಕಡೆ, ಮಂಡ್ಯ, ರಾಮನಗರ ಮತ್ತು ಉತ್ತರ ಪ್ರದೇಶದ ಮೀರತ್ ನಗರದ ಒಂದೊಂದು ಕಡೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ.

ಯಾರ ಮೇಲೆ ದಾಳಿ: ಸಿಐಡಿ ಆರ್ಥಿಕ ಅಪರಾಧ ವಿಭಾಗದ ಐಜಿ ಹೇಮಂತ್ ನಿಂಬಾಳ್ಕರ್, ಸಿಐಡಿ ಪೆÇಲೀಸ್ ಉಪ ವರಿಷ್ಠಾಧಿಕಾರಿ ಇ.ಬಿ. ಶ್ರೀಧರ್, ಪೂರ್ವ ವಲಯ ಡಿಸಿಪಿ ಅಜಯ್ ಹಿಲೋರಿ, ಕಮರ್ಷಿಯಲ್ ಸ್ಟ್ರೀಟ್ ಪೆÇಲೀಸ್ ಠಾಣಾಧಿಕಾರಿ ಎಂ. ರಮೇಶ್, ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಉಪನಿರೀಕ್ಷಕ ಗೌರಿ ಶಂಕರ್, ಬೆಂಗಳೂರು ಉತ್ತರ ಉಪವಿಭಾಗದ ಎಸಿಪಿ ಹಾಗೂ ಕೆಪಿಐಡಿ ಕಾಯ್ದೆಯ ಅಧಿಕಾರಿ ಎಲ್.ಸಿ. ನಾಗರಾಜ್, ಬೆಂಗಳೂರು ನಗರ ಜಿಲ್ಲೆಯ ಡಿಸಿ ವಿಜಯ್ ಶಂಕರ್, ಉತ್ತರ ಉಪವಿಭಾಗದ ಲೆಕ್ಕಿಗ ಮಂಜುನಾಥ್, ಬಿಡಿಎ ಮುಖ್ಯ ಎಂಜಿನಿಯರ್ ಪಿಡಿ ಕುಮಾರ್, ಬೆಂಗಳೂರು ಉತ್ತರ ವಿಭಾಗದ ಲೆಕ್ಕಿಗ ಮಂಜುನಾಥ್ ನಿವಾಸದ ಮೇಲೆ ದಾಳಿ ನಡೆದಿದೆ. ಅಜಯ ಹಿಲೋರಿ ಮೀರತ್‍ನವ ರಾಗಿದ್ದು ಅವರ ಅಲ್ಲಿನ ನಿವಾಸದ ಮೇಲೆ ದಾಳಿ ನಡೆದಿದೆ. ದಾಳಿ ಮುಗಿಸಿ ಪಂಚನಾಮೆ ಮಾಡಿ ಸಿಬಿಐ ಅಧಿಕಾರಿಗಳು ತೆರಳಿದ್ದಾರೆ. ಸಿಬಿಐ ವಿಚಾರಣೆ ಸಮಯದಲ್ಲಿ ಐಎಂಐ ಮುಖ್ಯಸ್ಥ ಮನ್ಸೂರ್ ಖಾನ್ ಹೇಳಿಕೆಯ ಆಧಾರದ ಮೇಲೆ ಈ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆದಿದೆ. ಸರ್ಕಾರಿ ಅಧಿಕಾರಿಗಳು ತನಿಖೆಯ ಸಂದರ್ಭದಲ್ಲಿ ಐಎಂಎ ಪರವಾಗಿ ವರದಿ ನೀಡಲು ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಸಿಬಿಐ ಹೇಳಿದೆ.

Translate »