ಸಕಲ ಸರ್ಕಾರಿ ಗೌರವದೊಂದಿಗೆ ಚಿದಾನಂದಮೂರ್ತಿ ಅಂತ್ಯಕ್ರಿಯೆ
ಮೈಸೂರು

ಸಕಲ ಸರ್ಕಾರಿ ಗೌರವದೊಂದಿಗೆ ಚಿದಾನಂದಮೂರ್ತಿ ಅಂತ್ಯಕ್ರಿಯೆ

January 13, 2020

ಬೆಂಗಳೂರು,ಜ.12-ಹಿರಿಯ ಸಾಹಿತಿ, ಸಂಶೋಧಕ ಚಿದಾನಂದ ಮೂರ್ತಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ, ಇಂದು ಸುಮನಹಳ್ಳಿಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜರುಗಿತು.

ಬೆಳಿಗ್ಗೆ 11 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆ ದಿದ್ದು, ಅಲ್ಲಿಯವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ದಂತೆ ಅನೇಕ ಗಣ್ಯರು, ಚಿದಾನಂದ ಮೂರ್ತಿಯವರ ಬಂಧುಗಳು, ಅಪಾರ ಅಭಿಮಾನಿಗಳು ಹಾಜರಿದ್ದರು. ಅಂತ್ಯ ಕ್ರಿಯೆ ವೇಳೆ ಅಮರರಾಗಲಿ ಚಿದಾನಂದ ಮೂರ್ತಿ, ಸಿರಿಗನ್ನಡಂ ಗೆಲ್ಗೆ ಎಂಬ ಘೋಷಣೆಗಳು ಕೇಳಿಬಂದವು.

ವೀರ ಶೈವ ಲಿಂಗಾಯತ ಪದ್ಧತಿಯಲ್ಲಿ ದೇಹವನ್ನು ಸಮಾಧಿ ಮಾಡುವ ಸಂಪ್ರದಾಯ ಇದೆ. ಆದರೆ, ಚಿದಾನಂದಮೂರ್ತಿ ಯವರು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸುವಂತೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಸುಮನಹಳ್ಳಿಯ ಚಿತಾ ಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Translate »