ಹಾಸನ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಫೆ. 15ರಿಂದ 18ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯ ಕ್ರಮಗಳಲ್ಲಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.
ಮುಖ್ಯಮಂತ್ರಿ ಭೇಟಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು ಫೆ. 15 ಮತ್ತು 16ರಂದು ನಡೆಯುವ ಕಾರ್ಯಕ್ರಮಗಳ ವಿವರ ನೀಡಿದರು.
ಫೆ. 15ರಂದು ಮಧ್ಯಾಹ್ನ 2.30ಕ್ಕೆ ಬರ ಗೂರು ಹ್ಯಾಂಡ್ಪೋಸ್ಟ್ ಆಲಗೊಂಡನ ಹಳ್ಳಿ ಏತ ನೀರಾವರಿ ಹಾಗೂ ವಿವಿಧ ಏತ ನೀರಾವರಿ ಯೋಜನೆಗೆ ಚಾಲನೆ ನೀಡುವರು. ನಂತರ 4.30ಕ್ಕೆ ದುದ್ದದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಂತಿ ಗ್ರಾಮ, ದುದ್ದ ಹೋಬಳಿಗಳ ಕೆರೆ ತುಂಬಿ ಸುವ ಯೋಜನೆ ಹಾಗೂ ಕುಡಿಯುವ ನೀರು ಪೂರೈಕೆ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.
ಜಿಲ್ಲಾ ಆಸ್ಪತ್ರೆಯ ಕಟ್ಟಡದ ಕಾಮಗಾರಿ ಗಳ ಶಂಕುಸ್ಥಾಪನೆ ನೆರವೇರಿಸಲಿದ್ದು, ಫೆ. 16 ರಂದು ಸಕಲೇಶಪುರದಲ್ಲಿ ನಡೆಯುವ ವಿವಿಧ ರೀತಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಫೆ. 16ರಂದು ಆರೋಗ್ಯ ಮೇಳ, 17 ರಂದು ಕೃಷಿ ಮೇಳ ಮತ್ತು ಫೆ. 18ರಂದು ಮಹಿಳಾ ಮೇಳ ನಡೆಯಲಿದೆ. ಆರೋಗ್ಯ ಮೇಳಕ್ಕೆ ಪ್ರತಿಯೊಂದು ಗ್ರಾಮ ಪಂಚಾ ಯಿತಿಯಿಂದ ಕನಿಷ್ಠ 100 ಮಂದಿಯನ್ನು ಕರೆ ತರುವ ವ್ಯವಸ್ಥೆ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಒದಗಿಸು ತ್ತಿದ್ದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳು ಗ್ರಾಮ ಲೆಕ್ಕಿಗರು ಆಶಾ ಕಾರ್ಯ ಕರ್ತೆಯರು ಸಾರ್ವಜನಿಕರನ್ನು ಆರೋಗ್ಯ ಮೇಳಕ್ಕೆ ಕರೆ ತರಬೇಕು ಎಂದರು.
500ಕ್ಕೂ ಅಧಿಕ ವೈದ್ಯರು ಆರೋಗ್ಯ ಮೇಳದಲ್ಲಿ ಕಾರ್ಯನಿರ್ವಹಿಸಲಿದ್ದು, ಸಾರ್ವ ಜನಿಕರು ಇದರ ಅನುಕೂಲ ಪಡೆದು ಕೊಳ್ಳಬೇಕು. ಈ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಕೃಷಿ ಮೇಳವನ್ನು ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಗಳು ಜಂಟಿಯಾಗಿ ಸಂಘ ಟಿಸಬೇಕು. ಕೃಷಿಕರಿಗೆ ಅನುಕೂಲವಾ ಗುವ ಮಾಹಿತಿ ಪ್ರಾತ್ಯಕ್ಷಿಕೆಯನ್ನು ಏರ್ಪ ಡಿಸಬೇಕು ಎಂದು ಸೂಚನೆ ನೀಡಿದರು.
ಫೆ.18ರಂದು ಮಹಿಳಾ ಮೇಳ ನಡೆಯ ಲಿದ್ದು ಕೃಷಿ ಸಾಲಮನ್ನಾವಾಗಿರುವ ಫಲಾ ನುಭವಿಗಳಿಗೆ ಸಾಲ ತೀರುವಳಿ ಪತ್ರ ವಿತ ರಣಾ ಸಮಾರಂಭ ನಡೆಯಲಿದ್ದು, ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟಾರೆ ಈ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಶಿಷ್ಟಾಚಾರದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಸಂಘಟಿಸುವಂತೆ ಸಚಿವರು ಸೂಚನೆ ನೀಡಿದರು.
ಫೆ. 15 ರಿಂದ 18ರವರೆಗೆ ಪ್ರತಿ ದಿನ ಸಂಜೆ ಅತ್ಯುತ್ತಮ ಸಾಂಸ್ಕøತಿಕ ಕಾರ್ಯ ಕ್ರಮಗಳನ್ನು ಏರ್ಪಡಿಸುವಂತೆ ಸಚಿವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಟ್ಟಸ್ವಾಮಿ, ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್. ನಾಗರಾಜ್, ಹಿಮ್ಸ್ ನಿರ್ದೇಶಕ ಡಾ.ರವಿ ಕುಮಾರ್, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ. ಶಂಕರ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.
ಸ್ಥಳ ಪರಿಶೀಲನೆ: ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಜಿಲ್ಲಾ ಕ್ರೀಡಾಂ ಗಣ ಮತ್ತು ಕಲಾ ಕಾಲೇಜು ಮೈದಾನಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.