ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಮೈಸೂರು ಗ್ರಾಮಾಂತರ

ಕೆರೆಯಲ್ಲಿ ಮುಳುಗಿ ಬಾಲಕ ಸಾವು

January 19, 2020

ಹುಣಸೂರು, ಜ.18(ಹೆಚ್‍ಎಸ್‍ಎಂ)- ಅಜ್ಜಿ ಮನೆಗೆ ಬಂದಿದ್ದ ಬಾಲಕನೋರ್ವ ಸ್ನೇಹಿತರೊಂದಿಗೆ ಕೆರೆಯಲ್ಲಿ ಆಟವಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೆಮ್ಮಿಗೆ ಕಾಲೋನಿಯಲ್ಲಿ ನಡೆದಿದೆ.

ತಾಲೂಕಿನ ಹನಗೋಡು ಹೋಬಳಿಯ ಪಂಚವಳ್ಳಿ ಗ್ರಾಮದ ಪರಮೇಶ್-ರೇಷ್ಮಾ ದಂಪತಿ ಪುತ್ರ ಅಖಿಲ್(9) ಸಾವನ್ನಪ್ಪಿದ ಬಾಲಕ. ಈತ ಪಂಚವಳ್ಳಿ ಶಾಲೆಯ 3ನೇ ತರಗತಿ ವಿದ್ಯಾರ್ಥಿ. ಸಂಕ್ರಾಂತಿ ಹಬ್ಬಕ್ಕೆ ಅಜ್ಜಿ ಮನೆಗೆ ಬಂದಿದ್ದ. ಶನಿವಾರ ಮಧ್ಯಾಹ್ನ ಸಹಪಾಠಿ ಗಳೊಂದಿಗೆ ಆಟವಾಡಲು ತೆರಳಿದ್ದ ವೇಳೆ ಗ್ರಾಮದ ಕೆರೆಯಲ್ಲಿ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದ ತಕ್ಷಣ ಕುಟುಂಬಸ್ಥರು, ಗ್ರಾಮಸ್ಥರು ಕೆರೆಯತ್ತ ದೌಡಾಯಿಸಿದರು. ಕೆರೆಯಲ್ಲಿ ಶೋಧ ಕಾರ್ಯ ನಡೆಸಿ, ಬಾಲಕನನ್ನು ಹೊರ ತೆಗೆದರೂ ಅಷ್ಟರಲ್ಲಾಗಲೇ ಅಸುನೀಗಿದ್ದ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »