ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಪ್ರತಿಭಟನೆ ಸರಿ, ಶಾಂತಿ ಭಂಗ ಸರಿಯಲ್ಲ
ಮೈಸೂರು

ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಪ್ರತಿಭಟನೆ ಸರಿ, ಶಾಂತಿ ಭಂಗ ಸರಿಯಲ್ಲ

December 21, 2019

ಮೈಸೂರು, ಡಿ.20(ಆರ್‍ಕೆಬಿ)- ಪೌರತ್ವ ಕಾಯ್ದೆ ಜಾರಿಯನ್ನು ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಸಮರ್ಥಿಸಿಕೊಂಡಿ ದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸುದೀರ್ಘ ವಾಗಿ ಚರ್ಚೆ ನಡೆದಿದೆ. ಯಾವುದೋ ಒಂದು ಧರ್ಮದ ವಿರುದ್ಧವಾಗಿ ತಿದ್ದುಪಡಿ ಮಾಡಿಲ್ಲ. ಮುಸ್ಲಿಂ ಸಮು ದಾಯದವರು ಅತೀ ಹೆಚ್ಚು ಸಂಖ್ಯೆಯಲ್ಲಿರುವ ದೇಶ ಗಳಲ್ಲಿ ಭಾರತವು ಒಂದು. ನಮ್ಮಲ್ಲಿರುವ ಎಲ್ಲ ಮುಸ ಲ್ಮಾನರೂ ಭಾರತೀಯರು ಎಂಬುದು ಸ್ಪಷ್ಟವಾಗಿದೆ ಎಂದರು. ಮೈಸೂರಿನಲ್ಲಿ ಮಾಧ್ಯಮ ಗಳೊಂದಿಗೆ ಮಾತನಾಡಿದ ಅವರು, ಪೌರತ್ವ ಕಾಯ್ದೆ ಕುರಿತು ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದೆ. ಕಾಂಗ್ರೆಸ್ ಸತತ ವೈಫಲ್ಯಗಳಿಂದ ಹತಾಶ ಸ್ಥಿತಿಗೆ ತಲುಪಿದೆ. ರಾಹುಲ್ ಗಾಂಧಿ ಸೇರಿದಂತೆ ರಾಷ್ಟಮಟ್ಟದಲ್ಲಿ ಪಕ್ಷ ಮುನ್ನಡೆಸುವ ನಾಯಕರೇ ಕಾಣಿಸುತ್ತಿಲ್ಲ. ಸಿಎಎಗೆ ವಿರೋಧ ಅಥವಾ ಪ್ರತಿಭಟನೆ ಮಾಡುವುದಕ್ಕೆ ನನ್ನ ವಿರೋಧವಿಲ್ಲ. ಆದರೆ ಶಾಂತಿ ಸುವ್ಯವಸ್ಥೆಯನ್ನು ಯಾರೂ ಹಾಳು ಮಾಡಬಾರದು ಎಂದು ಮನವಿ ಮಾಡಿದರು.

ಜಿಟಿಡಿ ನಿಲುವು ಸರಿಯಲ್ಲ: ಹುಣಸೂರು ಉಪ ಚುನಾವಣೆಯಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡರ ನಿಲುವು ಸರಿಯಲ್ಲ. ಒಂದು ಪಕ್ಷದಲ್ಲಿ ಶಾಸಕರಾಗಿ, ಸಚಿವರಾಗಿದ್ದ ಅವರು ಹೀಗೆ ಮಾಡಬಾರದಿತ್ತು. ಜೆಡಿಎಸ್‍ನಲ್ಲಿಯೇ ಇದ್ದುಕೊಂಡು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಬೇಕಿತ್ತು. ಆದರೆ ಅವರು ತೆಗೆದುಕೊಂಡ ರಾಜಕೀಯ ನಿಲುವು ಸರಿಯಲ್ಲ ಎಂದು ಶ್ರೀನಿವಾಸಪ್ರಸಾದ್ ಹೇಳಿದರು.

ಪೇಜಾವರ ಶ್ರೀ ಶೀಘ್ರ ಗುಣಮುಖರಾಗಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ರುವ ಪೇಜಾವರ ಸ್ವಾಮೀಜಿ ಶೀಘ್ರ ಗುಣಮುಖರಾಗಲಿ ಎಂದು ಪ್ರಸಾದ್ ಪ್ರಾರ್ಥಿಸಿದ್ದಾರೆ.

Translate »