ಕೈಯ್ಯಿಂದಲೇ ಚರಂಡಿ ಸ್ವಚ್ಛಗೊಳಿಸುವ ಅಮಾನವೀಯ ಕಾರ್ಯಕ್ಕೆ ಅಂತ್ಯ: ಶಾಸಕ ಹರ್ಷವರ್ಧನ್ ಬಗ್ಗೆ ಸಿಎಂ ಬೊಮ್ಮಾಯಿ ಮೆಚ್ಚುಗೆ
News

ಕೈಯ್ಯಿಂದಲೇ ಚರಂಡಿ ಸ್ವಚ್ಛಗೊಳಿಸುವ ಅಮಾನವೀಯ ಕಾರ್ಯಕ್ಕೆ ಅಂತ್ಯ: ಶಾಸಕ ಹರ್ಷವರ್ಧನ್ ಬಗ್ಗೆ ಸಿಎಂ ಬೊಮ್ಮಾಯಿ ಮೆಚ್ಚುಗೆ

August 19, 2021

ಬೆಂಗಳೂರು,ಆ.18-ನಂಜನಗೂಡು ಕ್ಷೇತ್ರದ ಶಾಸಕ ರಾದ ಹರ್ಷವರ್ಧನ, ತಮ್ಮ ಕ್ಷೇತ್ರದಲ್ಲಿ ಕೈಗೊಂಡಿ ರುವ ಮಾನವೀಯ ಕಾರ್ಯಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಹರ್ಷವರ್ಧನ್, ತಮ್ಮ ಕ್ಷೇತ್ರದ ಕೆಆರ್ ಪುರದಲ್ಲಿ ಜನರು ಕೈಯ್ಯಿಂದಲೇ ಚರಂಡಿಗಳ ಸ್ವಚ್ಛಗೊಳಿಸುವ, ಹೊಲಸು ಹೊತ್ತು ಹಾಕುವ ಅಮಾನ ವೀಯ ಪದ್ಧತಿ ಕೊನೆಗೊಂಡಿರುವ ಕುರಿತು ಮುಖ್ಯ ಮಂತ್ರಿಗಳಿಗೆ ವಿವರಣೆ ನೀಡಿ, ಈ ಕುರಿತು ಮಾಹಿತಿ ಫಲಕವನ್ನು ಅವರಿಗೆ ನೀಡಿದರು. ಈ ವೇಳೆ ಶಾಸಕ ಬಿ.ಹರ್ಷವರ್ಧನ್ ಅವರ ಈ ಮಾನವೀಯ ಕಾರ್ಯಕ್ಕೆ ಸಿಎಂ ಬೊಮ್ಮಾಯಿ ಪ್ರಶಂಸಿಸಿದ್ದಾರೆ.

ತಮ್ಮ ಅಜ್ಜ, ಮಾಜಿ ಸಚಿವ ಬಿ ಬಸವಲಿಂಗಪ್ಪ ಅವರು 50 ವರ್ಷಗಳ ಹಿಂದೆ ಮಲ ಹೊರುವ ಪದ್ಧತಿಯನ್ನು ಅಂತ್ಯಗೊಳಿಸುವ ಕುರಿತು ವಿಧಾನಸೌಧದಲ್ಲಿ ಘೋಷಣೆ ಮಾಡಿದ್ದರು. ಈಗ ತಾವು ಶಾಸಕರಾಗಿ ಆದ್ಯತೆ ಮೇರೆಗೆ ತಮ್ಮ ಕ್ಷೇತ್ರ ವ್ಯಾಪ್ತಿಯ ಕೆ.ಆರ್.ಪುರದಲ್ಲಿ ಇಂದಿಗೂ ನಡೆದುಕೊಂಡು ಬಂದಿರುವ ಅಮಾನವೀಯ ಪದ್ಧತಿಗೆ ತಿಲಾಂಜಲಿ ನೀಡಿರುವ ಕುರಿತು ಮುಖ್ಯಮಂತ್ರಿಗಳಿಗೆ ಹರ್ಷವರ್ಧನ್ ಮಾಹಿತಿ ನೀಡಿದರು. ಸಮಸ್ಯೆಗಳನ್ನು ನಿವಾರಿಸಿ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದರಿಂದಾಗಿ ಗ್ರಾಮದ ಜನರು ಈಗ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣ ವಾಗಿದೆ. ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗಿದ್ದು, ಗ್ರಾಮದ ಜನರಲ್ಲಿ ಸಂತಸ ಮೂಡಿದೆ ಎಂದು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಹರ್ಷವರ್ಧನ ಅವರ ಕಾರ್ಯಕ್ಕೆ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಮ್ಮ ಕಾರ್ಯ ಶ್ಲಾಘನೀಯ. ಇಡೀ ಕ್ಷೇತ್ರದಲ್ಲಿ ಇಂತಹ ಮಾದರಿ ಕೆಲಸಗಳನ್ನು ಕೈಗೊಳ್ಳುವಂತೆ ಸಲಹೆ ನೀಡಿ, ಪೆÇ್ರೀತ್ಸಾಹಿಸಿದ್ದಾರೆ.

Translate »