ಹೋಮ ಹವನ ಮುಗಿಸಿ ಬರುವಾಗ ಸಿಎಂ ಬೆಂಗಾವಲು ವಾಹನ ಪಲ್ಟಿ
ಮೈಸೂರು

ಹೋಮ ಹವನ ಮುಗಿಸಿ ಬರುವಾಗ ಸಿಎಂ ಬೆಂಗಾವಲು ವಾಹನ ಪಲ್ಟಿ

May 5, 2019

ಚಿಕ್ಕಮಗಳೂರು: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದೇವಾಲಯಕ್ಕೆ ಭೇಟಿ ನೀಡಿ, ಹಾಸನದತ್ತ ಬರುತ್ತಿದ್ದಾಗ ಅವರ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ಶನಿವಾರ ನಡೆದಿದೆ.

ಕೊಪ್ಪ ತಾಲೂಕಿನ ಕಮ್ಮರಡಿ ಬಳಿ, ಕುಡಿನಲ್ಲಿಯ ಸಮೀಪ ದಲ್ಲಿರುವ ಉಮಾ ಮಹೇಶ್ವರ ದೇವಾ ಲಯದಲ್ಲಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ನಡೆದ ಹೋಮ, ಹವನ ಕೈಂಕರ್ಯ ದಲ್ಲಿ ಭಾಗಿಯಾದ ಬಳಿಕ ಹಾಸನಕ್ಕೆ ಪ್ರಯಾಣಿಸುತ್ತಿದ್ದಾಗ ಆಲ್ದೂರು ಬಳಿಯ ಶಂಕರ್ ಫಾಲ್ಸ್ ಸಮೀಪ ಈ ಘಟನೆ ನಡೆದಿದ್ದು, ಬೆಂಗಾವಲು ವಾಹನದಲ್ಲಿದ್ದ ಇನ್ಸ್‍ಪೆಕ್ಟರ್ ಪ್ರದೀಪ್ ಹಾಗೂ ಚಾಲಕ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ಅಪಾಯ ಸಂಭವಿಸಿಲ್ಲ.

Translate »