ಮಾಧ್ಯಮಗಳ ವಿರುದ್ಧ ಸಿಎಂ ಕುಮಾರಸ್ವಾಮಿ ಮುನಿಸು
ಹಾಸನ

ಮಾಧ್ಯಮಗಳ ವಿರುದ್ಧ ಸಿಎಂ ಕುಮಾರಸ್ವಾಮಿ ಮುನಿಸು

May 6, 2019

ಹಾಸನ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಮುನಿಸು ಮುಂದುವರಿಸಿದ್ದಾರೆ.

ಚಿಕ್ಕಮಗಳೂರಿನ ಉಮಾ ಮಹೇಶ್ವರಿ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಬೆಂಗ ಳೂರಿಗೆ ತೆರಳುವ ಮಾರ್ಗ ಮಧ್ಯೆ ಶನಿವಾರ ಸಂಜೆ ಹಾಸನ ಹೊರವಲಯದಲ್ಲಿರುವ ಹೊಯ್ಸಳ ರೆಸಾರ್ಟ್‍ಗೆ ಭೇಟಿ ನೀಡಿದ್ದರು.
ತಂದೆ, ಸಂಸದ ಎಚ್.ಡಿ.ದೇವೇಗೌಡರು, ತಾಯಿ ಚೆನ್ನಮ್ಮ, ಸೋದರ ಸಚಿವ ರೇವಣ್ಣ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗಿದ್ದರು.

ಸುಮಾರು ಅರ್ಧ ಗಂಟೆಗೂ ಹೆಚ್ಚು ಹೋಟೆಲ್‍ನಲ್ಲಿ ಇದ್ದು ಚಹಾ ಕುಡಿದು ಲಘು ವಿಶ್ರಾಂತಿ ಪಡೆದ ಕುಮಾರಸ್ವಾಮಿ, ನಂತರ ಕುಟುಂಬ ಸಮೇತರಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಲು ಅವರು ನಿರಾಕರಿಸಿದರು. ಇದರಿಂದಾಗಿ ಕೆಲ ದಿನಗಳಿಂದ `ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ’ ಎನ್ನುವ ಮುನಿಸನ್ನು ಕುಮಾರಸ್ವಾಮಿ ಮುಂದುವರಿಸಿದ್ದಾರೆ.

Translate »