ಬೆಂಗಳೂರು, ಜೂ.30- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನ್ಯೂ ಜೆರ್ಸಿಯ ಸೋಮ ರ್ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿಪೂಜೆ ಸಂಬಂಧ ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡಿದ್ದರು.
ನಂತರ ಮಾತ ನಾಡಿದ ಅವರು, ಆದಿಚುಂಚನಗಿರಿ ಮಹಾಸಂಸ್ಥಾನವು ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ನಿರ್ಮಿಸುತ್ತಿರುವ ಈ ದೇವಾಲಯವು ಭಾರತೀಯರ, ಅದರಲ್ಲೂ ಕನ್ನಡಿಗರಿಗೆ ಪ್ರಮುಖ ಸಾಂಸ್ಕೃತಿಕ ಕೇಂದ್ರ ವಾಗಿ ರೂಪುಗೊಳ್ಳಲಿದೆ. ಹೊರ ನಾಡ ಕನ್ನಡಿಗರು ತಮ್ಮ ಬೇರನ್ನು ಬಲಪಡಿ ಸಲು, ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕೃತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.