ನವದೆಹಲಿ: ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿ ಕಾಂಗ್ರೆಸ್ ಸೆ.10ಕ್ಕೆ ಬಾರತ್ ಬಂದ್ಗೆ ಕರೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಈ ನಿಲುವು ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಲಿದೆ. ಹೀಗಾಗಿ ಎನ್ಡಿಎ ಸರ್ಕಾರದ ಈ ವರ್ತನೆ ಯನ್ನು ಖಂಡಿಸಿ ಸೆ.10ಕ್ಕೆ ಭಾರತ್ ಬಂದ್ಗೆ ಕರೆ ನೀಡಿರುವುದಾಗಿ ಎಐಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. ತೈಲ ದರ ಹೆಚ್ಚಳದ ಮೂಲಕ ಸುಮಾರು 11 ಲಕ್ಷ ಕೋಟಿಯಷ್ಟು ಲೂಟಿ ಮಾಡುತ್ತಿರುವ ಬಿಜೆಪಿಯ ವರ್ತನೆ ಹಾಗೂ ರಾಜ್ಯದಲ್ಲಿ ಅಬಕಾರಿ ಇಲಾಖೆ ಹೇರಿರುವ ಹೆಚ್ಚುವರಿ ತೆರಿಗೆ ನೀತಿ ವಿರೋಧಿಸಿ ಬಂದ್ಗೆ ಕರೆ ನೀಡಿರುವುದಾಗಿ ಹೇಳಿದರು.