ಪೌರತ್ವ ಕಾಯ್ದೆ ಹೆಸರಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ನರೇಂದ್ರ ಮೋದಿ

ನವದೆಹಲಿ, ಡಿ.15-ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪೌರತ್ವ ಮಸೂದೆ ಮೇಲೆ ವೃಥಾ ದೋಷಾರೋಪ ಮಾಡುತ್ತಿದೆ. ಅಲ್ಲದೆ ದೇಶದ ಕೆಲವು ಭಾಗಗಳಲ್ಲಿನ ಅಶಾಂತಿ ಮತ್ತು ಅಗ್ನಿ ಸ್ಪರ್ಶದ ಹಿಂದೆ ವಿರೋಧ ಪಕ್ಷಗಳ ಕೈವಾಡವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಆರೋಪಿಸಿದ್ದಾರೆ.

ಜಾರ್ಖಂಡ್‍ನ ಡುಮ್ಕಾದಲ್ಲಿ ಭಾನುವಾರ ನಡೆದ ಚುನಾ ವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಭಾರತದ ಅಭಿವೃದ್ಧಿಗೆ ಯಾವ ಮಾರ್ಗಸೂಚಿಗಳನ್ನು ಹೊಂದಿಲ್ಲ. “ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪೌರತ್ವ ಕಾಯ್ದೆಯ ಹೆಸರಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿವೆ. ಆದರೆ ಈಶಾ ನ್ಯದ ಜನ ಹಿಂಸಾಚಾರವನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ತಾವು ಸಂಸತ್ತಿನಲ್ಲಿ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳು ಸರಿಯಾಗಿವೆ ಎಂದು ಸುಳ್ಳು ಪ್ರಚಾರ ವನ್ನು ಕೈಗೊಂಡಿದೆ” ಎಂದು ಹೇಳಿದರು.

ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸದೆ ವಿರೋಧ ಪಕ್ಷಗಳ ನಾಯಕರು ತಮಗಾಗಿ ಮಾತ್ರ ಅರಮನೆಗಳನ್ನು ನಿರ್ಮಿಸಿದ್ದಾರೆ ಎಂದು ಮೋದಿ ದೂಷಿಸಿ ದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರಗಳ ಸಾಧನೆಗಳನ್ನು ಪಟ್ಟಿ ಮಾಡಿದ ಅವರು, “ನಮ್ಮ ಪಕ್ಷವು ರಾಜ್ಯದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಲು ನಾನು ಇಲ್ಲಿಗೆ ಬಂದಿದ್ದೇನೆ” ಎಂದು ಹೇಳಿದರು.