ಕಾಂಗ್ರೆಸ್ ಪ್ರಣಾಳಿಕೆ: ಸಾಲ ಮರುಪಾವತಿಸದ ರೈತರ ಮೇಲೆ ಕೇಸ್ ಹಾಕಲ್ಲ
ಮೈಸೂರು

ಕಾಂಗ್ರೆಸ್ ಪ್ರಣಾಳಿಕೆ: ಸಾಲ ಮರುಪಾವತಿಸದ ರೈತರ ಮೇಲೆ ಕೇಸ್ ಹಾಕಲ್ಲ

April 3, 2019

ನವದೆಹಲಿ: 2019ರ ಸಾರ್ವತ್ರಿಕ ಚುನಾ ವಣೆಗೆ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್ ನವದೆಹಲಿ ಯಲ್ಲಿ ಮಂಗಳವಾರ ಬಿಡುಗಡೆ ಮಾಡಿದೆ.

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಲ ಮರುಪಾವತಿ ಮಾಡದ ರೈತರ ವಿರುದ್ಧ ಕೇಸು ದಾಖಲಿಸುವುದಿಲ್ಲ. ರೈತರಿಗೆ ಪ್ರತ್ಯೇಕ ಕಿಸಾನ್ ಬಜೆಟ್ ಮಂಡಿಸಲಾಗುವುದು ಎಂದು ಹೇಳಿದರು. ಇದುವರೆಗೆ ರೈಲ್ವೆಗೆ ಹೇಗೆ ಪ್ರತ್ಯೇಕ ಬಜೆಟ್ ಇರು ತ್ತಿತ್ತೋ ಅದೇ ರೀತಿ ರೈತರಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಿದ್ದೇವೆ.ಇದು ನಮ್ಮ ಪಕ್ಷದ ಐತಿಹಾಸಿಕ ನಿರ್ಧಾರ. ಮಧ್ಯಪ್ರದೇಶ, ಕರ್ನಾಟಕ, ಛತ್ತೀಸ್‍ಗಢ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಸಾಲ ಮನ್ನಾ ಮಾಡಲಾಗಿದೆ. ನೀರವ್ ಮೋದಿ, ಅನಿಲ್ ಅಂಬಾನಿ, ವಿಜಯ್ ಮಲ್ಯನಂತವರು ಕೋಟ್ಯಾಂತರ ರೂ. ಸಾಲ ಮಾಡಿ ಶಿಕ್ಷೆಯಿಂದ ಬಚಾವಾಗುತ್ತಾರೆ.ಆದರೆ, ನಮ್ಮ ಬಡ ರೈತರು ಬ್ಯಾಂಕಿಂದ ಪಡೆದ ಸಾಲ ಕಟ್ಟಿಲ್ಲವೆಂದರೆ ಅವರನ್ನು ಅಪರಾಧಿಗಳೆಂದು ಘೋಷಿಸಲಾಗುತ್ತದೆ, ಜೈಲಿಗೆ ಹಾಕಲಾಗುತ್ತದೆ. ಇದರಿಂದ ತಪ್ಪಿಸಿ ದೇಶದ ಬಡ, ಮುಗ್ಧ ರೈತರನ್ನು ಕಾಪಾಡಲು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ರಿಮಿನಲ್ ಮೊಕದ್ದಮೆಯನ್ನು ತೆಗೆದುಹಾಕಲಾ ಗುವುದು. ಶಿಕ್ಷಣಕ್ಕೆ ಬಜೆಟ್‍ನಲ್ಲಿ ಶೇಕಡಾ 6 ಮೀಸಲಿ ಡುತ್ತೇವೆ. ಸರ್ಕಾರಿ ಆಸ್ಪತ್ರೆಗಳನ್ನು ಬಲವರ್ಧಿಸಲಾ ಗುವುದು ಎಂದರು. ಲಕ್ಷಾಂತರ ಜನರ ಸಲಹೆ, ಅಭಿಪ್ರಾಯ ಗಳನ್ನು ಪಡೆದು ಕಾಂಗ್ರೆಸ್ ಪ್ರಣಾಳಿಕೆಯನ್ನು ರಚಿಸಿದೆ. ಇದು ದೇಶದ ರೈತರು, ಯುವಜನತೆ, ಮಹಿಳೆಯರು, ಕೈಗಾರಿಕೆ, ಅಲ್ಪಸಂಖ್ಯಾತರು, ಆರೋಗ್ಯ ವಲಯ, ವಿದೇಶಿ ನೀತಿ, ರಾಷ್ಟ್ರೀಯ ಭದ್ರತೆ ಮೊದಲಾದ ವಿಷಯಗಳನ್ನು ಒಳಗೊಂಡ ಕಟ್ಟಕಡೆಯ ಪ್ರಜೆಗಳಿಗೆ ತಲುಪುವ ಮತ್ತು ಪ್ರಯೋಜನವಾಗುವ ಪ್ರಣಾಳಿಕೆಯಾಗಿದೆ.

ಉದ್ಯೋಗ ಸೃಷ್ಟಿ, ಶಿಕ್ಷಣ, ಆರೋಗ್ಯ ವಲಯಕ್ಕೆ ಆದ್ಯತೆ, ಆರ್ಥಿಕ ಬೆಳವಣಿಗೆಯನ್ನು ಪ್ರಣಾಳಿಕೆಯಲ್ಲಿ ಒತ್ತು ನೀಡಲಾಗಿದೆ ಎಂದರು. ಆರೋಗ್ಯ ಮತ್ತು ಅಭಿವೃದ್ಧಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಪ್ರಮುಖ ಧ್ಯೇಯೋದ್ದೇಶ. ವಿಶ್ವವಿದ್ಯಾಲಯಗಳು, ಐಐಟಿ, ಐಐಎಂ ನಂತಹ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಎಲ್ಲ ವರ್ಗ ದವರಿಗೆ ಎಟಕುವಂತಾಗಬೇಕು. ಆ ನಿಟ್ಟಿನಲ್ಲಿ ಬಜೆಟ್ ನಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಿದ್ದೇವೆ. ಬಡತನ ತೊಲಗಿಸಲು ದೇಶದ ಶೇಕಡಾ 20ರಷ್ಟು ಅತೀ ಬಡ ಕುಟುಂಬಗಳಿಗೆ ವರ್ಷಕ್ಕೆ 72 ಸಾವಿರ ರೂಪಾಯಿ ನೀಡುವುದು, ಖಾಲಿ ಇರುವ 22 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಭರ್ತಿ ಮಾಡುವುದು, ಪಂಚಾಯತಿಗಳಲ್ಲಿ 10 ಲಕ್ಷ ಉದ್ಯೋಗಗಳ ಭರ್ತಿ, ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕನಿಷ್ಠ ಕೆಲಸ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಿಸುವುದು, ಜಿಡಿಪಿಯಲ್ಲಿ ಶೇ. 6ರಷ್ಟು ಹಣ ಶಿಕ್ಷಣಕ್ಕೆ ಮೀಸಲು, ಖಾಸಗಿ ಇನ್ಷೂರೆನ್ಸ್ ಕಂಪನಿಗಳಿಗೆ ತಿಲಾಂಜಲಿ, ಜಿಎಸ್‍ಟಿಯನ್ನು ಸರಳಗೊಳಿಸುವುದು; ಜಿಎಸ್‍ಟಿಯಲ್ಲಿ ಎರಡು ಹಂತದ ಜಿಎಸ್‍ಟಿ ತೆರಿಗೆ ಮಾತ್ರ ಇರಲಿದೆ ಎಂದು ರಾಹುಲ್ ಗಾಂಧಿ ಘೋಷಿಸಿದರು.

ರಫೇಲ್ ತನಿಖೆ: ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಧಿಕಾರಕ್ಕೆ ಬಂದ ಮೊದಲ ದಿನವೇ ರಫೇಲ್ ಹಗರಣದ ತನಿಖೆ ಪ್ರಾರಂಭ, ಮಾನಹಾನಿ ಪ್ರಕರಣವನ್ನು ಅಪರಾಧ ಕೃತ್ಯ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್ 499 ಅನ್ನು ಕೈಬಿಡುವುದು; ಈ ಪ್ರಕರಣವನ್ನು ಸಿವಿಲ್ ಅಫೆನ್ಸ್ ಎಂದು ಪರಿಗಣಿಸುವುದು, ರಾಷ್ಟ್ರದ್ರೋಹ ವಿಚಾರದಲ್ಲಿರುವ ಐಪಿಸಿ ಸೆಕ್ಷನ್ 124ಎ ಅನ್ನು ಕೈಬಿಡುವುದು; ಈ ಸೆಕ್ಷನ್ ಸಾಕಷ್ಟು ದುರುಪಯೋಗವಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ನ್ಯಾಯದ ವಿಚಾರದಲ್ಲಿ ಹಲವು ವಿಷಯಗಳ ಕುರಿತು ಮಾತನಾಡುತ್ತಾರೆ. ತಾನು ಜನರ ಚೌಕಿದಾರ ಎಂದು ಸಂಬೋಧಿಸಿ ಕೊಳ್ಳುತ್ತಾರೆ. ಆದರೆ ಈ ಚೌಕಿದಾರ ಕಳ್ಳ. ಚೌಕಿದಾರ ಓಡಿ ಹೋಗಬಹುದು. ಆದರೆ ತಪ್ಪಿಸಿಕೊಂಡು ಅಡಗಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದರು. ಕಾಂಗ್ರೆಸ್‍ಗೆ ಹಿಂದೂ ಮತಗಳು ಸಿಗದೆ ಓಡಿ ಹೋಗುತ್ತದೆ ಎಂದು ಪ್ರಧಾನಿಯವರ ಹೇಳಿಕೆಗೆ ಈ ರೀತಿ ಉತ್ತರಿಸಿದ್ದಾರೆ. ಬಿಜೆಪಿ ದೇಶವನ್ನು ವಿಭಜಿಸಲು ನೋಡುತ್ತಿದೆ. ಅದು ಜಮ್ಮು-ಕಾಶ್ಮೀರದ ಪರಿಸ್ಥಿತಿಯಲ್ಲಿ ಗೊತ್ತಾಗುತ್ತದೆ. ಉಗ್ರವಾದಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ದೇಶದ ಭದ್ರತೆಯನ್ನು ಹೆಚ್ಚಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತದೆ ಎಂದು ಹೇಳಿದರು.

Translate »