2023ರ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಸಮೀಕ್ಷೆ
ಮೈಸೂರು

2023ರ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಸಮೀಕ್ಷೆ

March 28, 2022

 ಖಾಸಗಿ ಏಜೆನ್ಸಿ ಮೂಲಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರತ್ಯೇಕ ಸಮೀಕ್ಷೆ

 ೧೩೦-೧೪೦ ಸ್ಥಾನ ಪಡೆಯಲು ಕಸರತ್ತು

ಬೆಂಗಳೂರು, ಮಾ. ೨೭- ಪಂಚರಾಜ್ಯ ಚುನಾವಣೆ ಬಳಿಕ ಬಿಜೆಪಿ ರಾಷ್ಟಿçÃಯ ನಾಯಕರು ೨೦೨೩ರಲ್ಲಿ ಎದುರಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ದೃಷ್ಟಿ ಹಾಯಿಸಿದ್ದು, ಈ ನಡುವಲ್ಲೇ ಕಾಂಗ್ರೆಸ್ ಕೂಡ ತನ್ನ ಸಿದ್ಧತೆಗಳನ್ನು ಆರಂಭಿಸಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ಖಾಸಗಿ ಏಜೆನ್ಸಿಗಳ ಮೂಲಕ ಪ್ರತ್ಯೇಕವಾಗಿ ಸ್ಥಳೀಯ ಸಮೀಕ್ಷೆ ನಡೆಸಲು ಸಜ್ಜಾಗಿದ್ದಾರೆ. ಕರ್ನಾಟಕ ವಿಧಾನಸಭೆ ಯಲ್ಲಿ ೬೯ ಕಾಂಗ್ರೆಸ್ ಶಾಸಕರಿದ್ದು, ೨೦೨೩ರ ಚುನಾವಣೆ ವೇಳೆ ೧೩೦-೧೪೦ ಸ್ಥಾನಗಳ ಗೆಲ್ಲುವ ನಿರೀಕ್ಷೆಯನ್ನು ಕಾಂಗ್ರೆಸ್ ಇಟ್ಟು ಕೊಂಡಿದೆ. ಆಕಾಂಕ್ಷಿಗಳಿರುವ ಕಾಂಗ್ರೆಸ್ಸೇತರ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ ಎಂದು ಕೆಪಿಸಿಸಿ ಮೂಲಗಳು ಮಾಹಿತಿ ನೀಡಿದೆ.

ಹಲವು ಆಕಾಂಕ್ಷಿಗಳಿದ್ದರೆ, ಅವರಲ್ಲಿ ಉತ್ತಮ ರನ್ನು ಹುಡುಕಲು ಮತ್ತು ಜನರೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿರುವವರು ಅಂತಿಮವಾಗಿ ಆಯ್ಕೆಯಾಗಲಿದ್ದಾರೆ. ಹೆಚ್ಚಿನ ಮತಗಳನ್ನು ಗಳಿಸಲು ಈ ಸಮೀಕ್ಷೆಯು ನಮಗೆ ಸಹಾಯ ಮಾಡುತ್ತದೆ. ಸಮೀಕ್ಷೆಯು ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತದೆ. ಡಿ.ಕೆ.ಶಿವಕುಮಾರ್ ಕೂಡ ಏಪ್ರಿಲ್‌ನಲ್ಲಿ ಖಾಸಗಿ ಏಜೆನ್ಸಿ ಮೂಲಕ ಸಮೀಕ್ಷೆ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕರ ಪ್ರಕಾರ, ಚುನಾವಣೆಗೆ ಕನಿಷ್ಠ ಆರು ತಿಂಗಳ ಮೊದಲು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವುದು ಅಗತ್ಯವಿದೆ, ಇದ ರಿಂದ ಈ ಅಭ್ಯರ್ಥಿಗಳು ತಳಮಟ್ಟದಲ್ಲಿ ಕೆಲಸ ಮಾಡಲು ಮತ್ತು ಮತಗಳನ್ನು ಪಡೆಯಲು ಸಾಕಷ್ಟು ಸಮಯ ಸಿಗುತ್ತದೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ಕೇಂದ್ರ ಸಚಿವರ ಹೊರ ತಾಗಿ, ರಾಜ್ಯದಲ್ಲಿ ಚುನಾವಣೆ ನಡೆಯುತ್ತಿ ರುವುದರಿಂದ
ಪ್ರಧಾನಿ ಕೂಡ ಕರ್ನಾಟಕದತ್ತ ತೀವ್ರ ಗಮನ ಹರಿಸುವ ಸಾಧ್ಯತೆಯಿದೆ. ಈ ಬಾರಿ ಕಠಿಣ ಸ್ಪರ್ಧೆಯಿದ್ದರೂ, ರಾಜ್ಯದಲ್ಲಿ ಮರಳಿ ಅಧಿಕಾರಕ್ಕೆ ತರಲು ಬಿಜೆಪಿ ಮುಖಂಡರು ಕಾರ್ಯತಂತ್ರ ರೂಪಿಸುತ್ತಾರೆ. ಹೀಗಾಗಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಗೆಲ್ಲಬಲ್ಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಸರಣ ಸಮೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಡಿಜಿಟಲ್ ಸದಸ್ಯತ್ವ ಅಭಿಯಾನ ವನ್ನು ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್ ಮಾರ್ಚ್ ಅಂತ್ಯದೊಳಗೆ ೫೦ ಲಕ್ಷ ಸದಸ್ಯರನ್ನು ಸೇರ್ಪಡೆಗೊಳಿಸಲು ಗುರಿ ಇಟ್ಟುಕೊಂಡಿದೆ.
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಡಿಜಿಟಲ್ ಸದಸ್ಯತ್ವ ಅಭಿಯಾನದ ಮೇಲೆ ಕಣ್ಗಾವಲಿರಿಸಲಿದ್ದಾರೆ. ಆದರೆ, ಇದರಿಂದ ಅಂತಹ ದೊಡ್ಡ ಪರಿಣಾಮಗಳು ಕಂಡು ಬರುವುದಿಲ್ಲ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಈಗಾಗಲೇ ಹೆಚ್ಚೆಚ್ಚು ಸದಸ್ಯರನ್ನು ಸೇರ್ಪಡೆಗೊಳಿಸುವ ಪಕ್ಷದ ಕಾರ್ಯಕರ್ತರಿಗೆ ಭರ್ಜರಿ ಉಡುಗೊರೆಗಳನ್ನೂ ನೀಡಲಾಗುತ್ತಿದೆ. ಡಿಜಿಟಲ್ ಸದಸ್ಯತ್ವ ಅಭಿಯಾನದ ಮೂಲಕ ೧೦ಕ್ಕಿಂತ ಹೆಚ್ಚು ಸದಸ್ಯರನ್ನು ಸೇರ್ಪಡೆಗೊಳಿಸುವ ಕಾರ್ಯಕರ್ತರು ದ್ವಿತೀಯ ಸದಸ್ಯತ್ವಕ್ಕೆ ಅರ್ಹರಾಗಿದ್ದಾರೆ ಮತ್ತು ಮತ ಚಲಾಯಿಸಲು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲು ಅವರಿಗೆ ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪಕ್ಷವು ಮೊಬೈಲ್ ಅಪ್ಲಿಕೇಶನ್ ಅನ್ನೂ ಕೂಡ ಅಭಿವೃದ್ಧಿಪಡಿಸುತ್ತಿದೆ, ಅದರ ಮೂಲಕ ದ್ವಿತೀಯ ಸದಸ್ಯತ್ವವನ್ನು ಪಡೆದವರು ಪ್ರತಿಕ್ರಿಯೆಯನ್ನು ನೀಡಬಹುದು ಮತ್ತು ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳಿಗೆ ಮತ ಹಾಕಬಹುದು ಎಂದು ತಿಳಿದು ಬಂದಿದೆ.

Translate »