ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರ ಗೆಲ್ಲುತ್ತಿತ್ತು
ಮೈಸೂರು

ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರ ಗೆಲ್ಲುತ್ತಿತ್ತು

June 7, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿ ಕೊಳ್ಳದೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಬೇಕಾಗಿತ್ತು ಎಂದು ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಹೀನಾಯ ಸೋಲು ಕಂಡಿದ್ದು, ಈ ಬಗ್ಗೆ ಉಭಯ ಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವಾಗಲೇ ಸುಮಲತಾ ಈ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಏಕಾಂಗಿ ಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಿತ್ತು. ಆದರೆ, ಮೈತ್ರಿಯಿಂದಾಗಿ ಕೇವಲ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟವನ್ನು ಮತದಾರರು ಒಪ್ಪಿಕೊಂಡಿಲ್ಲ ಎಂದರು. ಈ ವಿಚಾರವನ್ನು ತಾವು ಕಾಂಗ್ರೆಸ್ ನಾಯಕರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದೆ. ಒಂದು ವೇಳೆ ಏಕಾಂಗಿಯಾಗಿ ಸ್ಪರ್ಧೆ ಮಾಡದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ನಷ್ಟ ಎಂಬ ಮಾತನ್ನು ಹೇಳಿದ್ದೆ. ಆದರೆ, ಗೆಲ್ಲಬಹುದಾಗಿದ್ದ ಕ್ಷೇತ್ರಗಳನ್ನು ಕಾಂಗ್ರೆಸ್ ಜೆಡಿಎಸ್‍ಗೆ ಬಿಟ್ಟುಕೊಟ್ಟಿತು. ಕಾಂಗ್ರೆಸ್‍ನಲ್ಲಿ ಒಳ್ಳೆಯ ಅಭ್ಯರ್ಥಿಗಳಿದ್ದರೂ ಸೀಟು ಬಿಟ್ಟು ಕೊಟ್ಟಿದ್ದ ರಿಂದ ಬಿಜೆಪಿಗೆ ಲಾಭವಾಯಿತು ಎಂದು ಅವರು ಅಭಿಪ್ರಾಯಪಟ್ಟರು.

Translate »