ರಾಜ್ಯದಲ್ಲಿ ಕೊರೊನಾ ಇಳಿಮುಖ; 815 ಸೋಂಕಿತರು ಗುಣಮುಖ

ಮೈಸೂರು,ಜ.21(ವೈಡಿಎಸ್)-ರಾಜ್ಯದಲ್ಲಿ ಕೊರೊನಾ ಸೋಂಕಿ ತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಸಾವಿನ ಸಂಖ್ಯೆಯೂ ಕಡಿಮೆ ಯಾಗುತ್ತಿದೆ. ಗುರುವಾರ ಇಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 35 ಜನರಿಗೆ ಸೋಂಕು ದೃಢಪಟ್ಟಿದ್ದು, 31 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಸಾವು ಪ್ರಕರಣ ವರದಿಯಾಗಿಲ್ಲ.

ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 53,132ಕ್ಕೆ ಏರಿಕೆಯಾಗಿದ್ದು, ಈವರೆಗೆ 51,883 ಮಂದಿ ಗುಣಮುಖರಾದಂತಾ ಗಿದೆ. ಇದುವರೆಗೆ 1,022 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 227 ಸಕ್ರಿಯ ಪ್ರಕರಣಗಳಿವೆ. ಇವರಲ್ಲಿ 64 ಮಂದಿ ಸೋಂಕಿತರು ಮನೆ ಯಲ್ಲೇ ಶುಶ್ರೂಷೆ ಪಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆ ಹಾಗೂ ನಿಗಾ ಕೇಂದ್ರಗಳಲ್ಲಿ 35, ಖಾಸಗಿ ಆಸ್ಪತ್ರೆಗಳು ಹಾಗೂ ನಿಗಾ ಕೇಂದ್ರಗಳಲ್ಲಿ 128 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಲ್ಯಾಬ್‍ಗಳಲ್ಲಿ ಪರೀಕ್ಷೆ ಮಾಡಿಸಿಕೊಂಡಿರುವ 57,430 ಮಂದಿ ಸೇರಿ, ಈವರೆಗೆ ಒಟ್ಟು 7,69,590 ಜನರಿಗೆ ಕೋವಿಡ್ ಪರೀಕ್ಷೆ ನಡೆಸಿದಂತಾಗಿದೆ.

ರಾಜ್ಯದ ವಿವರ: ಬಾಗಲಕೋಟೆ ಜಿಲ್ಲೆಯಲ್ಲಿ ಒಂದೂ ಪ್ರಕರಣ ಪತ್ತೆಯಾಗಿಲ್ಲ. ಇನ್ನು ಬಳ್ಳಾರಿ 7, ಬೆಳಗಾವಿ 13, ಬೆಂ. ಗ್ರಾಮಾಂ ತರ 13, ಬೆಂ.ನಗರ 371, ಬೀದರ್ 2, ಚಾ.ನಗರ 1, ಚಿಕ್ಕಬಳ್ಳಾಪುರ 18, ಚಿಕ್ಕಮಗಳೂರು 5, ಚಿತ್ರದುರ್ಗ 6, ದಕ್ಷಿಣ ಕನ್ನಡ 39, ದಾವಣಗೆರೆ 7, ಧಾರವಾಡ 9, ಗದಗ್ 1, ಹಾಸನ 16, ಹಾವೇರಿ 3, ಕಲಬುರಗಿ 40, ಕೊಡಗು 5, ಕೋಲಾರ 10, ಕೊಪ್ಪಳ 1, ಮಂಡ್ಯ 6, ಮೈಸೂರು 35, ರಾಯಚೂರು 1, ರಾಮ ನಗರ 2, ಶಿವಮೊಗ್ಗ 17, ತುಮಕೂರು 26, ಉಡುಪಿ 7, ಉತ್ತರ ಕನ್ನಡ 8, ವಿಜಯಪುರ 2, ಯಾದಗಿರಿ 3 ಮಂದಿಗೆ ಸೇರಿ ರಾಜ್ಯದಲ್ಲಿ 674 ಮಂದಿಗೆ ಸೋಂಕು ದೃಢಪಟ್ಟಿದ್ದು, 815 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,34,252ಕ್ಕೆ ಏರಿಕೆ ಯಾಗಿದ್ದು, 9,14,492 ಸೋಂಕಿತರು ಗುಣಮುಖರಾದಂತಾಗಿದೆ. ಇಂದು ವರದಿಯಾದ 2 ಸಾವಿನ ಪ್ರಕರಣ ಸೇರಿ ಇದುವರೆಗೆ 12,187 ಮಂದಿ ಮೃತಪಟ್ಟಂತಾಗಿದೆ. 7,554 ಸಕ್ರಿಯ ಪ್ರಕರಣಗಳಿವೆ.