ಬೆಂಗಳೂರು, ಸೆ.23-ಮುಂದಿನ ಆರು ತಿಂಗಳ ಅವಧಿಯಲ್ಲಿ ಸಮರೋಪಾದಿಯಲ್ಲಿ ಕೋವಿಡ್ ನಿಯಂತ್ರಣ ಮಾಡಬೇಕಿದೆ ಎಂದು ಹೇಳುವ ಮೂಲಕ ಸದ್ಯಕ್ಕೆ ಈ ಮಹಾಮಾರಿಯಿಂದ ಜನರಿಗೆ ವಿಮುಕ್ತಿ ಇಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚ್ಯವಾಗಿ ತಿಳಿಸಿದ್ದಾರೆ.
ಅವರು ಇಂದು ಕರ್ನಾಟಕ, ಮಹಾ ರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ನವ ದೆಹಲಿ, ಉತ್ತರಪ್ರದೇಶ, ಪಂಜಾಬ್ ಸೇರಿ ದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳೊಂ ದಿಗೆ ವೀಡಿಯೋ ಸಂವಾದ ನಡೆಸಿದರು.
ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದಲ್ಲಿ ಅವರಿಗೆ ಪುನಃ ಆರ್ಟಿ ಪಿಸಿಆರ್ ಪರೀಕ್ಷೆಯನ್ನು ಮಾಡಬೇಕು. ಕೋವಿಡ್ ವಿಚಾರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಮಾಡಬೇಕು. ಇದೊಂದು ರೀತಿ ಜನಾಂದೋಲನವಾಗಬೇಕು ಎಂದು ಪ್ರಧಾನಿ ಸಲಹೆ ನೀಡಿದರು. ಕೋವಿಡ್ ಸೋಂಕಿತರಿಗೆ ಸಕಾಲದಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡುವುದರ ಜೊತೆಗೆ ನಿರ್ಬಂಧಿತ ಪ್ರದೇಶ ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಬೇಕು. ಜೀವ ಹಾಗೂ ಜೀವನವನ್ನು ಉಳಿಸುವ ನಿಟ್ಟಿನಲ್ಲಿ ಆರ್ಥಿಕ ಚಟುವಟಿಕೆಗಳನ್ನು ಸೂಕ್ತ ಪರೀಕ್ಷೆ ಹಾಗೂ ಆಸ್ಪತ್ರೆ ಸೌಕರ್ಯಗಳನ್ನು ಖಾತರಿಪಡಿಸಿಕೊಂಡು ಹಂತಹಂತವಾಗಿ ಆರಂಭಿಸಬೇಕು. ಮನೆ ಆರೈಕೆಯಲ್ಲಿರುವ ಸೋಂಕಿತರ ಮೇಲ್ವಿಚಾರಣೆಯನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಹಾಗಾಗಿ ಪ್ರತೀ ಜೀವವನ್ನು ಉಳಿಸುವುದು ನಮ್ಮೆಲ್ಲರ ಹೊಣೆ ಗಾರಿಕೆ. ಹಾಗೆಯೇ ಕೊರೊನಾವನ್ನು ನಿಯಂ ತ್ರಿಸುವುದೂ ಕೂಡ ನಮ್ಮ ಪ್ರಮುಖ ಉದ್ದೇಶ ವಾಗಿರಬೇಕು, ಆರ್ಟಿಪಿಸಿಆರ್ ಪರೀಕ್ಷೆ ಗಳನ್ನು ಹೆಚ್ಚಿಸುವುದು ಅತೀ ಮುಖ್ಯವಾದುದ್ದು. ಮೈಕ್ರೋ ಕಂಟೇನ್ಮೆಂಟ್ ಜೋನ್ಗಳನ್ನು ರೂಪಿಸುವುದು, ಈಗ ಕರ್ನಾಟಕದಲ್ಲಿ ಹೆಚ್ಚಿನ ಪರೀಕ್ಷೆಗಳಾಗುತ್ತಿವೆ. ವೈಜ್ಞಾನಿಕ ಕ್ರಮ ಗಳನ್ನು ಕೈಗೊಳ್ಳಲಾಗುತ್ತಿದೆ. ಹಾಗೆಯೇ ಕೊರೊನಾದಿಂದ ಮರಣ ಹೊಂದು ವವರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮ ಗಳ ಬಗ್ಗೆ ವಿವರಿಸಿದರು.
ಸಭೆಯ ಪ್ರಮುಖ ಅಂಶಗಳು: ಸೋಂಕಿ ತರು ಆಸ್ಪತ್ರೆಗೆ ದಾಖಲಾದ ನಂತರ ಅವ ರಿಗೆ ಅಗತ್ಯವಿರುವ ಚಿಕಿತ್ಸೆ, ಔಷಧಿಗಳು ಮತ್ತು ಆಕ್ಸಿಜನ್ ಲಭ್ಯತೆಯನ್ನು ಖಾತ್ರಿಪಡಿ ಸಲಾಗುತ್ತಿದೆ. ರಾಜ್ಯದಲ್ಲಿ ಪರೀಕ್ಷಾ ಸೌಲಭ್ಯ ಗಳನ್ನು ಸಾಕಷ್ಟು ಹೆಚ್ಚಿಸಲಾಗಿದೆ. ಪ್ರಸ್ತುತ ನಮ್ಮಲ್ಲಿ 136 ಪರೀಕ್ಷಾ ಪ್ರಯೋಗಾಲಯ ಗಳಿದ್ದು, ಪ್ರತಿ ದಿನದ ಪರೀಕ್ಷಾ ಸಾಮಥ್ರ್ಯ ವನ್ನು 70 ಸಾವಿರ ಮಾದರಿಗಳಿಗೆ ಹೆಚ್ಚಿಸ ಲಾಗಿದೆ. ಈವರೆಗೆ 43 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ವಿವರಿಸಿದರು.
ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ sಥಿmಠಿಣomಚಿಣiಛಿ ಪ್ರಕರಣಗಳನ್ನು ಕೂಡಲೇ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿಯೇ ಆಂಬುಲೆನ್ಸ್ಗಳ ಸಂಖ್ಯೆ ಯನ್ನು 800ರಿಂದ 2000ಕ್ಕೆ ಹೆಚ್ಚಿಸಲಾಗಿದೆ. 4.24 ಗಂಟೆಗಳೊಳಗಾಗಿ ಎಲ್ಲಾ ಪಾಸಿಟಿವ್ ಪ್ರಕರಣಗಳ ಸಂಪರ್ಕಿತರನ್ನು ಗುರುತಿಸಲು ಹಾಗೂ 48 ಗಂಟೆಗಳೊಳಗಾಗಿ ಅವರೆಲ್ಲ ರನ್ನು ಕ್ವಾರಂಟೈನ್ ಮಾಡುವಂತೆ ಗುರಿ ನಿಗದಿ ಮಾಡಲಾಗಿದೆ. ಪರೀಕ್ಷೆಗಳನ್ನು ಹೆಚ್ಚು ಮಾಡುತ್ತಿರುವುದರಿಂದ ಪಾಸಿಟಿವ್ ಪ್ರಕರಣ ಗಳು, ಮರಣ ಪ್ರಮಾಣ ಕ್ರಮೇಣವಾಗಿ ಕಡಿಮೆ ಮಾಡಲು ಸಾಧ್ಯವಾಗಿದೆ. 2020ರ ಜುಲೈ 13 ಮತ್ತು ಜುಲೈ 19ರ ನಡುವೆ ರಾಜ್ಯದಲ್ಲಿ ಅತೀ ಹೆಚ್ಚಿನ ಮರಣ ಪ್ರಮಾಣ ಅಂದರೆ ಶೇ.2.6ರಷ್ಟಿತ್ತು. ಪ್ರಸ್ತುತ, ಕರ್ನಾಟಕದ ಮರಣ ಪ್ರಮಾಣವು ಶೇ.1.54ರಷ್ಟಿದೆ. ಕಳೆದ ವಾರದಲ್ಲಿ ಇದು ಕೇವಲ 1.3ರಷ್ಟಿತ್ತು. ಬಹಳ ಬೇಗ ಮರಣಪ್ರಮಾಣವನ್ನು ಶೇ.1ಕ್ಕಿಂತ ಕಡಿಮೆ ಮಾಡಲಾಗುವುದು ಎಂದರು.
ಕ್ಲಿನಿಕಲ್ ನಿರ್ವಹಣೆಯ ಕುರಿತು ಶಿಷ್ಟಾಚಾರವನ್ನು ನೀಡಲು ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿಯು ಭಾರತ ಸರ್ಕಾರ ಮತ್ತು ಐ.ಸಿ.ಎಂ.ಆರ್ ಶಿಫಾರಸ್ಸುಗಳನ್ನು ಕಾಲಕಾಲಕ್ಕೆ ಪರಿಶೀಲಿಸಿ ರಾಜ್ಯಕ್ಕೆ ಚಿಕಿತ್ಸಾ ಶಿಷ್ಟಾಚಾರವನ್ನು ಶಿಫಾರಸ್ಸು ಮಾಡುತ್ತದೆ. ಪ್ರಸ್ತುತ, ಶಿಫಾರಸ್ಸಿನ 3ನೇ ಆವೃತ್ತಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ನಾವೆಲ್ ಔಷಧಗಳನ್ನು ಸೋಂಕಿತರಿಗೆ ಉಚಿತವಾಗಿ ನೀಡಲಾಗುತ್ತಿದೆ. ರೆಮಿಡಿಸ್ವಿರ್ ಸೇರಿದಂತೆ ಎಲ್ಲಾ ಔಷಧಗಳು ನಿರಂತರವಾಗಿ ಸರಬರಾಜು ಆಗುವಂತೆ ವ್ಯವಸ್ಥೆಯನ್ನು ಮಾಡಲಾಗಿದೆ.
ಕೋವಿಡ್-19ರ ಗಂಭೀರ ಪ್ರಕರಣಗಳ ಚಿಕಿತ್ಸೆಗೆ ಆಕ್ಸಿಜನ್ ಬೆಡ್ಗಳು, ಐ.ಸಿ.ಯು ಗಳು ಹಾಗೂ ವೆಂಟಿಲೇಟರ್ಗಳು ಅತ್ಯಗತ್ಯವಾಗಿವೆ. ಸೋಂಕು ಪ್ರಾರಂಭವಾದ ಸಂದರ್ಭ ದಲ್ಲಿ 7 ಸಾವಿರ ಆಕ್ಸಿಜನ್ ಬೆಡ್ಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿತ್ತು. ಈ ಸಂಖ್ಯೆಯನ್ನು ಈಗ 18 ಸಾವಿರಕ್ಕೆ ಹೆಚ್ಚಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಲಾಗಿದೆ. ಇದಲ್ಲದೆ, 4250 ಆಕ್ಸಿಜನೇಟೆಡ್ ಹಾಸಿಗೆಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಮೀಸಲಿಡಲಾಗಿದೆ. 1811 ಐ.ಸಿಯು ಹಾಸಿಗೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು 1269 ಹಾಸಿಗೆಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಮೀಸಲಿಡಲಾಗಿದೆ. ಹಾಸಿಗೆಗಳನ್ನು ಆಕ್ಸಿಜನೇಟ್ ಮಾಡುವ ಕಾರ್ಯ ಪೂರ್ಣವಾದ ಕೂಡಲೇ ಸರ್ಕಾರಿ ಆಸ್ಪತ್ರೆಗಳಲ್ಲಿಯೇ 31 ಸಾವಿರ ಹಾಸಿಗೆಗಳು ಲಭ್ಯವಿರಲಿದೆ. ರಾಜ್ಯದಲ್ಲಿ ಅಗತ್ಯವಿರುವ ಆಸ್ಪತ್ರೆಗಳಿಗೆ ಸಕಾಲದಲ್ಲಿ ಆಕ್ಸಿಜನ್ ರವಾನೆಯಾಗುವುದನ್ನು ಖಾತ್ರಿಪಡಿಸಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಹಿರಿಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಕೈಗಾರಿಕಾ ಆಕ್ಸಿಜನ್ ಸಿಲಿಂಡರ್ ಗಳನ್ನು ವೈದ್ಯಕೀಯ ಸಿಲಿಂಡರ್ಗಳನ್ನಾಗಿ ಪರಿವರ್ತಿಸಲು ಅನುಮತಿಯನ್ನು ನೀಡ ಲಾಗಿದೆ. ಸಂಗ್ರಹಣಾ ವ್ಯವಸ್ಥೆ ಕಡಿಮೆಯಿರುವ ಆಸ್ಪತ್ರೆಗಳಲ್ಲಿ ಸಂಗ್ರಹಣಾ ಸಾಮಥ್ರ್ಯ ವನ್ನು ಹೆಚ್ಚಿಸುವ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಲಾಗಿದೆ.
ಆಕ್ಸಿಜನೇಟೆಡ್ ಹಾಸಿಗೆಗಳು ಮತ್ತು ಐ.ಸಿ.ಯುಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಆಕ್ಸಿಜನ್ ಬಳಕೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ವೈದ್ಯಕೀಯ ಉದ್ದೇಶಗಳಿಗಾಗಿ ಲಿಕ್ವಿಡ್ ಆಕ್ಸಿಜನ್ನಿನ ಲಭ್ಯತೆಯು ಪ್ರಸ್ತುತ ದಿನಂಪ್ರತಿ 375 ಮೆಟ್ರಿಕ್ ಟನ್ನಷ್ಟಿದ್ದು, ಸದ್ಯಕ್ಕೆ ಸಾಕಾಗುತ್ತಿದೆ. ಆದರೆ, ಆಕ್ಸಿಜನೇಟೆಡ್ ಬೆಡ್ಗಳನ್ನು ಹೆಚ್ಚಿಸುವ ಯೋಜನೆ ಪೂರ್ಣಗೊಂಡ ನಂತರ ಹಾಗೂ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳವಾದಲ್ಲಿ, ನಾವು ಕೈಗಾರಿಕೆಗಳಿಂದ ಸಾಕಷ್ಟು ವೈದ್ಯಕೀಯ ಆಕ್ಸಿಜನ್ನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಪ್ರಕರಣಗಳು ಗರಿಷ್ಠ ಮಟ್ಟ ತಲುಪಿದ ಸಂದರ್ಭದಲ್ಲಿ ಆಕ್ಸಿಜನ್ ಬೇಡಿಕೆಯು ದಿನವೊಂದಕ್ಕೆ 870 ಮೆಟ್ರಿಕ್ ಟನ್ ಎಂದು ಅಂದಾಜಿಸಲಾಗಿದೆ. ಕೇಂದ್ರ ಸರ್ಕಾರದ ಕೈಗಾರಿಕಾ ನೀತಿ ಮತ್ತು ಉತ್ತೇಜನ ಇಲಾಖೆಯು, ಕೈಗಾರಿಕೆಗಳು ನೂತನ ಆಕ್ಸಿಜನ್ ಘಟಕಗಳನ್ನು ಸ್ಥಾಪಿಸುವಂತೆ ಉತ್ತೇಜಿ ಸಲು ಪೆÇ್ರೀತ್ಸಾಹಕಗಳನ್ನು ನೀಡಲು ಮನವಿ ಮಾಡಲಾಯಿತು. ಉತ್ಪಾದನಾ ಸಾಮಥ್ರ್ಯ ವನ್ನು ಹೆಚ್ಚಿಸಲು ಆಸ್ಪತ್ರೆಗಳ ಮಟ್ಟದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಪೆÇ್ರೀತ್ಸಾಹ ನೀಡಬೇಕು ಎಂದು ಪ್ರಧಾನಿಗಳಲ್ಲಿ ಮನವಿ ಮಾಡಿದರು. ಸಭೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.