ಕೋವಿಡ್: ವಿದೇಶಿಗಳಲ್ಲಿನ ಕನ್ನಡಿಗರ ರಕ್ಷಣೆಗೆ ಮನವಿ
ಮೈಸೂರು

ಕೋವಿಡ್: ವಿದೇಶಿಗಳಲ್ಲಿನ ಕನ್ನಡಿಗರ ರಕ್ಷಣೆಗೆ ಮನವಿ

March 12, 2020

ಬೆಂಗಳೂರು,ಮಾ.11-ಇಟಲಿ ಸೇರಿದಂತೆ ಜಗತ್ತಿನ ವಿವಿಧ ದೇಶಗಳಲ್ಲಿ ಸಿಲುಕಿ ಕೊಂಡಿರುವ ಕನ್ನಡಿಗರನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷಿತ ವಾಗಿ ರಾಜ್ಯಕ್ಕೆ ವಾಪಸ್ ಕರೆ ತರಲು ರಾಜ್ಯ ಸರಕಾರ, ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದೆ. ಕೇಂದ್ರ ಸರಕಾರವು ಈಗಾಗಲೇ ವಿವಿಧ ದೇಶಗಳಲ್ಲಿರುವ ಭಾರತಿಯರನ್ನು ಏರ್ ಲಿಫ್ಟ್ ಮಾಡುತ್ತಿರುವ ಬೆನ್ನಲ್ಲಿಯೇ ರಾಜ್ಯ ಸರಕಾರವೂ ಕನ್ನಡಿಗರನ್ನು ವಾಪಸ್ ಕರೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

ಡಿಸಿಎಂ ಡಾ.ಅಶ್ವತ್ಥನಾರಾಯಣ, ಈ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ಜತೆ ಮಾತನಾಡಿದ್ದಾರೆ. ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕೂಡ ಉಳಿದವರ ಜತೆ ವಾಪಸ್ ಕರೆ ತರಲಾಗುವುದು. ಭಾರತದಿಂದಲೇ ವಿವಿಧ ದೇಶಗಳಿಗೆ ತಜ್ಞ ವೈದ್ಯರನ್ನು ಕಳಿಸಿ ಅಲ್ಲಿಯೇ ಪ್ರತಿಯೊಬ್ಬರನ್ನು ತೀವ್ರವಾಗಿ ತಪಾ ಸಣೆಗೆ ಒಳಪಡಿಸಿ ವಾಪಸ್ ಕರೆತರಲಾಗುವುದು ಎಂದು ಕೇಂದ್ರವು ರಾಜ್ಯಕ್ಕೆ ಭರವಸೆ ನೀಡಿದೆ.

ಕಚೇರಿ ಬಂದ್ ಇಲ್ಲ: ಸರ್ಕಾರಿ ಸೇರಿದಂತೆ ಯಾವುದೇ ಕಚೇರಿಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿಲ್ಲ ಎಂದು ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದರು. ಚಿಕನ್ ತಿಂದರೆ ಕೋವಿಡ್ ಬರುತ್ತದೆ ಎನ್ನುವುದು ಸುಳ್ಳು. ಈ ಕುರಿತ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

Translate »