ಪರಿಷತ್ ಚುನಾವಣೆ: ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ
ಮೈಸೂರು

ಪರಿಷತ್ ಚುನಾವಣೆ: ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ

December 3, 2021

ಮೈಸೂರು, ಡಿ.2(ಆರ್‍ಕೆಬಿ)- ವಿಧಾನಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾ ವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಪರವಾದ ವಾತಾವರಣ ಇದೆ. ಮೈಸೂರಿನಲ್ಲಿ ನಮ್ಮ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ ಎಂದು ಬಿಜೆಪಿ ರಾಜ್ಯ ಉಪಾ ಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆ ಗಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರ ಪ್ರಚಾರ ಕೈಗೊಂಡಿರುವ ಅವರು ಗುರುವಾರ ಮೈಸೂರಲ್ಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಡ್ಯ ದಲ್ಲಿಯೂ ನಮ್ಮ ಅಭ್ಯರ್ಥಿಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಅಲ್ಲಿ ತ್ರಿಕೋನ ಸ್ಪರ್ಧೆ ಏರ್ಪ ಟ್ಟಿದೆ. ಡಿ.5ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು.

ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಈಗಾಗಲೇ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಎಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲವೋ ಅಂಥ ಕಡೆಗಳಲ್ಲಿ ಬೆಂಬಲ ನೀಡಿ, ಅಭ್ಯರ್ಥಿ ಕಣ ದಲ್ಲಿರುವ ಕ್ಷೇತ್ರದಲ್ಲಿ ಯಾವುದೇ ಹೊಂದಾ ಣಿಕೆ ಇಲ್ಲ. ಅಂತೆಯೇ ಮೈಸೂರು-ಚಾಮರಾಜನಗರ, ಮಂಡ್ಯದಲ್ಲಿ ಹೊಂದಾ ಣಿಕೆ ಇಲ್ಲ ಎಂದು ಸ್ಪಷ್ಪಪಡಿಸಿದರು.
ಭಯ ಸೃಷ್ಟಿಸುವ ಘಟನೆ: ಶಾಸಕ ಎಸ್.ಆರ್. ವಿಶ್ವನಾಥ್ ಮೇಲೆ ಹಲ್ಲೆಗೆ ಸ್ಕೆಚ್ ವಿಚಾರ ಕುರಿತು ಪ್ರಸ್ತಾಪಿಸಿದ ಅವರು, ಒಬ್ಬ ಜನಪ್ರತಿನಿಧಿ ಬಗ್ಗೆ ಈ ರೀತಿ ಕೊಲೆ ಹಂತಕ್ಕೆ ಇಳಿದಿದ್ದು ಭಯ ತರಿಸಿದೆ. ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು. ಅಕ್ಕಪಕ್ಕದ ರಾಜ್ಯ ದಲ್ಲಿ ಈ ರೀತಿ ವಾತಾವರಣ ಇತ್ತು ಎಂದರು.

ವಿಶ್ವನಾಥ್ ಒಬ್ಬ ಪ್ರಭಾವಿ ರಾಜಕಾರಣಿ, ಸಾಕಷ್ಟು ಬಾರಿ ಗೆಲವು ಸಾಧಿಸಿದ್ದಾರೆ. ಇದು ಭಯ ಸೃಷ್ಟಿ ಮಾಡುವಂತಹ ಘಟನೆ. ಬಿಜೆಪಿ ಪಕ್ಷ ಇದನ್ನು ಗಂಭೀರವಾಗಿ ತೆಗೆದು ಕೊಳ್ಳುತ್ತದೆ ಎಂದು ಹೇಳಿದರು.

ಈ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು, ಡಿ.ಕೆ. ಶಿವಕುಮಾರ್ ಅವರದ್ದು ಉಡಾಫೆ ಹೇಳಿಕೆ. ಆ ಕ್ಷೇತ್ರದಲ್ಲಿ ಯಾರ ಜೊತೆ ರೌಡಿಗಳಿದ್ದಾರೆ ಎಂಬುದು ಆ ಕ್ಷೇತ್ರದ ಜನರಿಗೆ ಗೊತ್ತಿದೆ. ಘಟನೆ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ಇದೆ. ಇಂತಹದನ್ನು ಯಾರೂ ಸಮರ್ಥನೆ ಮಾಡಬಾರದು. ಇಂತಹ ಸಂಸ್ಕೃತಿ ಇಲ್ಲಿಗೆ ಕೊನೆಯಾಗಬೇಕೆ ಹೊರತು, ಮುಂದುವರಿಯಬಾರದು. ಈ ಬಗ್ಗೆ ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕು. ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ ಎಂದರು.

Translate »