ಬೆಳಗಾವಿ: ಕೋವಿಡ್ ಪಾಸಿಟಿವ್ ರೋಗಿಗೆ ಸರಿಯಾದ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಮೃತನ ಸಂಬಂಧಿಕರು ಜಿಲ್ಲಾಸ್ಪತ್ರೆ ಮೇಲಡಕಲ್ಲು ತೂರಾಟ ನಡೆಸಿ, ಆಂಬುಲೆನ್ಸ್ಗೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಘೀ ಗಲ್ಲಿಯಿಂದ 59 ವರ್ಷದ ವ್ಯಕ್ತಿಯನ್ನು ಜುಲೈ 19ರಂದು ಆಸ್ಪತ್ರೆಗೆ ಕರೆ ತರಲಾಗಿತ್ತು. ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಸೂಕ್ತ ಚಿಕಿತ್ಸೆ ಸಿಗದೇ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾನೆ. ಸೋಂಕಿತ ವ್ಯಕ್ತಿ ಮೃತಪಡುತ್ತಿದ್ದಂತೆ ಏಕಾಏಕಿ ಆಸ್ಪತ್ರೆಗೆ ಬಂದ ಗುಂಪು ಆಸ್ಪತ್ರೆ ಮುಂಭಾಗದಲ್ಲಿ ನಿಂತಿದ್ದ ಆಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ.
ಆಸ್ಪತ್ರೆಯ ಮುಂದೆ ನಿಂತಿದ್ದ ವೈದ್ಯರ ಕಾರು ಮತ್ತು ಖಾಸಗಿ ಕಾರು ಸೇರಿದಂತೆ 5 ಕಾರುಗಳ ಮೇಲೆ ರೊಚ್ಚಿಗೆದ್ದು ಕಲ್ಲು ತೂರಾಟ ನಡೆಸಿದ್ದಾರೆ. ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಎಸ್.ಪಿ ಲಕ್ಷಣ ನಿಂಬ ರಗಿ, ನಗರ ಪೆÇಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೆಎಲ್ ಇ ಮಾರ್ಗದ ಜಿಲ್ಲಾಸ್ಪತ್ರೆ ಗೇಟ್ ಎದುರು ಈ ಗಲಾಟೆ ನಡೆದಿದ್ದು, ಕಲ್ಲು ತೂರಾಟ ನಡೆಸಿ ಆಂಬುಲೆನ್ಸ್ಗೆ ಬೆಂಕಿ ಹಚ್ಚಲಾಗಿದೆ. ಆಂಬುಲೆನ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಐಸಿಯು ವಾರ್ಡ್ಗೆ ನುಗ್ಗಿ ಸಿಬ್ಬಂದಿ ಮೇಲೂ ಹಲ್ಲೆಗೂ ಯತ್ನಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ