ಅಮಾಯಕರ ಮೇಲಿನ ಹಲ್ಲೆಗೆ ಕಡಿವಾಣ ಹಾಕಲು ಕಾನೂನು ರಚಿಸಿ

ನವದೆಹಲಿ:  ಗೋಸಂರಕ್ಷಣೆ ಮತ್ತು ವದಂತಿಗಳಿಗೆ ಕಿವಿಗೊಟ್ಟು ಅಮಾ ಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಈ ಬಗ್ಗೆ ಇಂದು ನಡೆದ ವಿಚಾರಣೆ ಯಲ್ಲಿ ಉದ್ರಿಕ್ತರಿಂದ ಅಮಾಯಕರ ಮೇಲಿನ ದಾಳಿ ಪ್ರಕರಣಗಳು ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು, ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸರ್ಕಾರಗಳ ಹೊಣೆ ಎಂದು ಹೇಳಿದೆ. ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, ಭಯ ಮತ್ತು ಅರಾಜಕತೆ ಹೆಸರಲ್ಲಿ ಅಮಾಯಕರ ಮೇಲಿನ ದಾಳಿಯನ್ನು ಸಹಿಸಲಸಾಧ್ಯ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳನ್ನು ಒಪ್ಪಲು ಸಾಧ್ಯವೇ ಇಲ್ಲ. ಇಂತಹ ಘಟನೆಗಳ ಕುರಿತು ರಾಜ್ಯ ಸರ್ಕಾರಗಳು ಸಕಾರಾತ್ಮಕವಾಗಿ ಪ್ರತಿ ಕ್ರಿಯಿಸಬೇಕು. ಕಾನೂನು ಮತ್ತು ಸುವ್ಯ ವಸ್ಥೆಯ ರಕ್ಷಣೆ ರಾಜ್ಯ ಸರ್ಕಾರಗಳ ಹೊಣೆ. ಹೀಗಾಗಿ ಯಾವುದೇ ಕಾರಣಕ್ಕೂ ಹಿಂಸೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.