ಕೃಷಿ ಚಟುವಟಿಕೆಗೆ ಕಫ್ರ್ಯೂ ಅನ್ವಯಿಸಲ್ಲ
ಮೈಸೂರು

ಕೃಷಿ ಚಟುವಟಿಕೆಗೆ ಕಫ್ರ್ಯೂ ಅನ್ವಯಿಸಲ್ಲ

April 24, 2021

 ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ  ರೈತರಿಗೆ ತಡೆಯೊಡ್ಡದಂತೆ ಸೂಚನೆ
ಬೆಂಗಳೂರು, ಏ.23(ಕೆಎಂಶಿ)- ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕಫ್ರ್ಯೂ, ವೀಕೆಂಡ್ ಕಫ್ರ್ಯೂ, ಜನತಾ ಕಫ್ರ್ಯೂ ಅನ್ವಯಿಸುವು ದಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪÀಷ್ಟಪಡಿಸಿದ್ದಾರೆ.

ಇಂದಿಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಾವುದೇ ಅಧಿಕಾರಿ ಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ, ತೊಂದರೆ ಯನ್ನಾಗಲೀ ನೀಡಬಾರದು ಎಂದಿದ್ದಾರೆ. ಹೂವು-ಹಣ್ಣು, ದವಸ-ಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್‍ಟಿಓ ಸೇರಿದಂತೆ ಯಾರೂ ತೊಂದರೆ ಮಾಡಬಾರದು. ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆ ಯಾಗಲಿ ತೊಂದರೆ ಮಾಡಬಾರದು. ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು, ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು. ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಿಳಿದುಬಂದಿದೆ. ಹೀಗೆ ಮಾಡಿರುವುದು ತಪ್ಪು. ಎಲ್ಲಾ ಇಲಾಖೆಗಳು, ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಕೊರೊನಾ ಸುರಕ್ಷತೆ ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದು ಹೇಳಿದ್ದಾರೆ.

 

Translate »