ಡಿ.4, 5ರಂದು ಬೆಂಗಳೂರಲ್ಲಿ  ಸಿರಿಧಾನ್ಯ, ಸಾವಯವ ಮೇಳ
News

ಡಿ.4, 5ರಂದು ಬೆಂಗಳೂರಲ್ಲಿ ಸಿರಿಧಾನ್ಯ, ಸಾವಯವ ಮೇಳ

December 3, 2021

ಬೆಂಗಳೂರು, ಡಿ.2(ಕೆಎಂಶಿ)- ಸಾವಯವ ಮತ್ತು ಸಿರಿಧಾನ್ಯ ಉತ್ಪಾದನೆಯೊಂ ದಿಗೆ ಜನರಿಗೆ ಆರೋಗ್ಯದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಲವು ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಅದರ ಮುಂದುವರೆದ ಭಾಗವಾಗಿ ರೈತೋತ್ಪಾದಕರು ಹಾಗೂ ಗ್ರಾಹಕರ ನಡುವೆ ಸಂಪರ್ಕ ಏರ್ಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ, ಪ್ರದೇಶ ಕೃಷಿಕ ಸಮಾಜ ಹಾಗೂ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಸಹಯೋಗದೊಂದಿಗೆ ಸಾವಯವ ಹಾಗೂ ಸಿರಿಧಾನ್ಯ ಮೇಳ ಹಮ್ಮಿಕೊಳ್ಳಲಾಗಿದೆ.

ಇದೇ ಡಿ.4 ಮತ್ತು 5ರಂದು ಎರಡು ದಿನಗಳ ಕಾಲ ಬೆಂಗಳೂರಿನ ಕೆಎಎಸ್ ಅಧಿಕಾರಿಗಳ ಸಂಘ ಇಲ್ಲಿ ಮೇಳ ಆಯೋಜನೆಗೊಂಡಿದೆ. ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಮೇಳದಲ್ಲಿ ಸಾವಯವ ಹಾಗೂ ಸಿರಿಧಾನ್ಯ ಬೆಳೆಯಲ್ಲಿ ಸಾಧನೆಗೈದ ಪ್ರಗತಿಪರ ರೈತರಿಂದ ವಿಚಾರ ವಿನಿಮಯ, ಸಾವಯವ ಸಿರಿಧಾನ್ಯ ಕೃಷಿಯ ಮಹತ್ವವನ್ನು ಸಾರಲಾಗುತ್ತಿದೆ. ಇದ ರೊಂದಿಗೆ ಮೇಳದಲ್ಲಿ ಈ ಉತ್ಪನ್ನಗಳ ವಸ್ತುಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದರು.

ಸಾವಯವ ಪದಾರ್ಥಗಳನ್ನು ಉಪಯೋಗಿಸುವುದರಿಂದ ಆಗುವ ಪ್ರಯೋಜನ ಗಳ ಬಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಮತ್ತು ಈ ಸಾವಯವ ಕೃಷಿಯಿಂದ ಸಿಗುವ ಪದಾರ್ಥಗಳು ನಮ್ಮ ಸದೃಢ ಮತ್ತು ಆರೋಗ್ಯ ಯುತ ಬದುಕು ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುತ್ತದೆ ಎನ್ನುವ ಬಯಕೆ ನಮ್ಮದು. ಆ ದಿಸೆಯಲ್ಲಿ ಆರೋಗ್ಯ ಔಷಧಿಗಾಗಿ ಮತ್ತು ದೇಹಕ್ಕೆ ಅತೀ ಉಪಯುಕ್ತ ಸಿರಿಧಾನ್ಯ ಮತ್ತು ದವಸ ಧಾನ್ಯ ಬೆಳೆಗಳ ಉಪಯೋಗದ ಬಗೆ ಮಾಹಿತಿ ನೀಡಲಾಗು ತ್ತಿದೆ. ಅಲ್ಲದೆ ಕೃಷಿ ಬಳಕೆಯಿಂದ ಆಗುವ ಲಾಭಾಂಶದ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲು ಮೇಳ ಉಪಯುಕ್ತವಾಗಲಿದೆ ಎಂದು ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

Translate »