ದಸರಾ ಸಾಂಸ್ಕøತಿಕ ಕಾರ್ಯಕ್ರಮ: ಕಲಾವಿದರಿಂದ ಅರ್ಜಿ ಆಹ್ವಾನ

ಮೈಸೂರು:  ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನೀಡಲು ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರಿನ ಜಗನ್ಮೋಹನ ಅರಮನೆ, ಪುರಭವನ, ಚಿಕ್ಕ ಗಡಿಯಾರ, ಗಾನಭಾರತಿ, ಕಲಾಮಂದಿರ ಹಾಗೂ ಕಿರು ರಂಗಮಂದಿರಗಳಲ್ಲಿ ಸಂಗೀತ, ನೃತ್ಯ, ನಾಟಕ, ಜಾನಪದ, ಹರಿಕತೆ ಇನ್ನಿತರ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲು ಉದ್ದೇಶಿಸಲಾಗಿದ್ದು, ಆಸಕ್ತ ಕಲಾವಿದರು ಸ್ವ-ವಿವರವುಳ್ಳ ಅರ್ಜಿಯನ್ನು ಸೆ.28ರೊಳಗೆ ಕಲಾಮಂದಿರದಲ್ಲಿ ರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸ ಬೇಕೆಂದು ದಸರಾ ಸಾಂಸ್ಕøತಿಕ ಉಪಸಮಿತಿ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 0821-2513225 ಸಂಪರ್ಕಿಸಬಹುದು.