ಹಾಸನ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಾಕಿ ಉಳಿದಿರುವ ಕಾಮ ಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿ ಸುವುದರ ಜೊತೆಗೆ ಶೇ. 100ರಷ್ಟು ತೆರಿಗೆ ಸಂಗ್ರಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ವಿವಿಧ ಹಣಕಾಸು ಯೋಜನೆಗಳು ಮತ್ತು ನಗರಾಭಿ ವೃದ್ಧಿ ನಿಧಿಯಿಂದ ಬಿಡುಗಡೆಯಾದ ಹಣ ವನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿ ಕೊಳ್ಳಬೇಕು ಎಂದು ಸೂಚನೆ ನೀಡಿದರು.
ಪ್ರತಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡ ಬೇಕು. ಎಲ್ಲಾ ಮನೆಗಳಿಗೂ ಪ್ರತಿದಿನ ನೀರು ಪೂರೈಕೆಯಾಗುವಂತಾಗಬೇಕು ಹಾಗೆ ವಿವಿಧ ರೀತಿಯ ತೆರಿಗೆಗಳನ್ನು ವಸೂಲಿ ಮಾಡಬೇಕು ಎಂದರು.
ಪ್ರತಿ ನಗರ ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಪೂರೈಕೆಗೆ ತಲಾ 20 ಲಕ್ಷದಂತೆ ಜಿಲ್ಲೆಗೆ ಒಟ್ಟು 1.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾ ಗಿದ್ದು ಚುನಾವಣೆ ಇದ್ದರೂ ಸಹ ಅದನ್ನು ಖರ್ಚು ಮಾಡಬಹುದಾಗಿದ್ದು ಯಾವುದೇ ಲೋಪವಿಲ್ಲದಂತೆ ಯೋಜನೆಯನ್ನು ಅನುಷ್ಠಾನಗೊಳಿಸಿ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಬಿಡುಗಡೆಯಾದ ಅನುದಾನ ಕಾಲಮಿತಿಯೊಳಗೆ ಸಮರ್ಪಕವಾಗಿ ಬಳಕೆ ಯಾಗಬೇಕು. ಅಭಿವೃದ್ಧಿ ಕಾರ್ಯಗಳಾದ ನೀರು, ರಸ್ತೆ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ ಶೌಚಾಲಯಗಳ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವುದರ ಜೊತೆಗೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯ ಒದಗಿಸಿ ಎಂದು ಹೇಳಿದರು.
ಅಲ್ಪಸಂಖ್ಯಾತರು ವಾಸಿಸುವ ಪ್ರದೇಶ ಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಕೇಂದ್ರಕ್ಕೆ 2 ಕೋಟಿ ರೂಪಾಯಿ ಹಾಗೂ ತಾಲೂಕು ಕೇಂದ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ದೊರೆಯಲಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.
ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಪ್ರತಿ ದಿನ ಕ್ಷೇತ್ರ ವೀಕ್ಷಣೆ ಮಾಡಬೇಕು. ನೈಜತೆ ಬಗ್ಗೆ ನಿರಂತರ ನಿಗಾವಹಿಸಬೇಕು. ನಗರದಲ್ಲಿ ಸೌಂದರ್ಯಾ ಭಿವೃದ್ಧಿಗೆ ಸಾರ್ವಜನಿಕರಿಂದ ಸಹಭಾ ಗಿತ್ವ ಪಡೆಯಬೇಕು ಎಂದು ಹೇಳಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೇಂದ್ರ ಯೋಜನಾ ನಿರ್ದೇಶಕ ಕೃಷ್ಣ ಮೂರ್ತಿ, ನಗರಸಭೆ ಆಯುಕ್ತ ಪರಮೇಶ್ ಹಾಗೂ ವಿವಿಧ ನಗರ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು ಹಾಜರಿದ್ದರು.