ಭತ್ತದ ಖರೀದಿ ಕೇಂದ್ರ ತೆರೆಯಲು ಡಿಸಿ ಸೂಚನೆ
ಹಾಸನ

ಭತ್ತದ ಖರೀದಿ ಕೇಂದ್ರ ತೆರೆಯಲು ಡಿಸಿ ಸೂಚನೆ

July 6, 2018

ಹಾಸನ: ‘ರಾಜ್ಯ ಸರ್ಕಾರದ ಸೂಚನೆಯಂತೆ ಕೂಡಲೇ ಕನಿಷ್ಠ ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿಗೆ ಅಗತ್ಯವಿರುವ ಕಡೆಗಳಲ್ಲಿ ಖರೀದಿ ಕೇಂದ್ರ ತೆರೆಯಲು ಅಧಿಕಾರಿಗಳು ಕ್ರಮಕೈಗೊಳ್ಳ ಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಭತ್ತ ಖರೀದಿ ಕೇಂದ್ರ ತೆರೆಯುವ ಕುರಿ ತಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಹೊಳೆನರಸೀಪುರದಲ್ಲಿ ಈ ಬಾರಿ ಹೆಚ್ಚಾಗಿ ಹಿಂಗಾರು ಋತುವಿನಲ್ಲಿ (ಬೇಸಿಗೆ ಬೆಳೆ) ಭತ್ತ ಬೆಳೆದಿದ್ದು ಪ್ರಾರಂಭ ದಲ್ಲಿ ಅಲ್ಲಿ ಬೆಂಬಲ ಬೆಲೆಯೊಂದಿಗೆ ಖರೀದಿ ಕೇಂದ್ರ ತೆರೆಯಬೇಕು. ಮೈಸೂರು, ಮಂಡ್ಯ, ಹಾಸನ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಬೇಸಿಗೆ ಬೆಳೆಯಾಗಿ ಭತ್ತವನ್ನು ಬೆಳೆಯ ಲಾಗಿದೆ. ಆದರೆ ಮಾರುಕಟ್ಟೆ ದರ ಕ್ವಿಂಟಾಲ್ ಗೆ ರೂ. 1,200 ರೂಪಾಯಿಗಳಿಗೆ ಕುಸಿದಿ ರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ದರ ಕುಸಿತ ತಪ್ಪಿಸಿ ರೈತರನ್ನು ಸಂಕಷ್ಟ ದಿಂದ ಪಾರು ಮಾಡಲು ಪ್ರತಿ ಕ್ವಿಂಟಾಲ್‍ಗೆ 1,550 ರೂಪಾಯಿ ದರದಲ್ಲಿ ಭತ್ತ ಖರೀ ದಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅದರಂತೆ ಜಿಲ್ಲೆಯಲ್ಲಿ ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರವನ್ನು ತೆರೆಯಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯಲ್ಲಿ ಬೆಳೆಯಾಗಿರುವ ಭತ್ತದ ಪ್ರಮಾಣ ಕುರಿತು ಮಾಹಿತಿ ನೀಡಿದ ಕೃಷಿ ಇಲಾಖೆ ಹಾಗೂ ಕೃಷಿ ಮಾರುಕಟ್ಟೆ ಇಲಾಖೆ ಅಧಿಕಾರಿಗಳು ಪ್ರಸಕ್ತ ವರ್ಷ ಬೇಸಿಗೆ ಋತುವಿನಲ್ಲಿ ಹೊಳೆನರಸೀ ಪುರ ತಾಲೂಕಿನಲ್ಲಿ 600 ಹೆಕ್ಟೇರ್ ಹಾಗೂ ಸಕಲೇಶಪುರ ತಾಲೂಕಿನಲ್ಲಿ 10 ಹೆಕ್ಟೇರ್ ಸೇರಿದಂತೆ ಒಟ್ಟಾರೆ 610 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಕೃಷಿ ಮಾಡಲಾಗಿದೆ. ಹಾಗಾಗಿ, ಹೊಳೆನರಸೀಪುರದಲ್ಲಿ ಮಾತ್ರ ಖರೀದಿ ಕೇಂದ್ರ ತೆರೆದರೆ ಸಾಕಾಗಬಹುದು ಎಂದರು.

ಸರ್ಕಾರದ ಸೂಚನೆಯಂತೆ ನಿಯ ಮಾನುಸಾರ ಗ್ರೇಡಿಂಗ್ ಮಾಡಿ ಗುಣಮಟ್ಟ ದೃಢೀಕರಿಸಿ ಭತ್ತ ಖರೀದಿಸಲು ಕೃಷಿ ಇಲಾಖೆ ಅಧಿಕಾರಿಗಳು ನೆರವು ನೀಡಬೇಕು. ಬೇಡಿಕೆ ಪರಿಶೀಲಿಸಿ ಅಗತ್ಯವಿದ್ದರೆ ಖರೀದಿ ಕೇಂದ್ರ ಹೆಚ್ಚಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Translate »