ಸುಮಲತಾರಿಗೆ ಡಿಸಿ ನೋಟೀಸ್
ಮಂಡ್ಯ

ಸುಮಲತಾರಿಗೆ ಡಿಸಿ ನೋಟೀಸ್

March 30, 2019

ಮಂಡ್ಯ: ಮುಖ್ಯಮಂತ್ರಿಗಳಿಂದ ಆಡಳಿತ ದುರುಪಯೋಗವಾಗುತ್ತಿದೆ ಎಂದು ಹೇಳಿಕೆ ನೀಡಿದ ಸುಮಲತಾ ಅಂಬರೀಶ್ ಅವರಿಗೆ ಜಿಲ್ಲಾಧಿಕಾರಿ ಮಂಜುಶ್ರೀ ನೋಟೀಸ್ ಜಾರಿ ಮಾಡಿದ್ದಾರೆ.

ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಯಾಗಿರುವ ನನ್ನ ವ್ಯಕ್ತಿತ್ವವನ್ನು ಘಾಸಿಗೊಳಿಸುವ ಉದ್ದೇಶದಿಂದ ಊಹಾ ಪೋಹದ ಮಾಹಿತಿಯನ್ನು ಅಧಿಕೃತವೆಂಬಂತೆ ಹೇಳಿಕೆ ನೀಡಿದ್ದೀರಿ. ನಿಮ್ಮ ಹೇಳಿಕೆಯಿಂದ ನನ್ನ ಇಡೀ ವೃತ್ತಿ ಜೀವನದಲ್ಲಿ ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ನಡೆಸಿರುವ ಆಡಳಿತಕ್ಕೆ ಹಾಗೂ ನನ್ನ ವ್ಯಕ್ತಿತ್ವಕ್ಕೆ ಸಾಮಾಜಿವಾಗಿ ಧಕ್ಕೆ ಉಂಟಾಗುತ್ತಿದೆ. ಜಿಲ್ಲೆಯ ಆಡಳಿತ ಯಂತ್ರವನ್ನು ಮುಖ್ಯಮಂತ್ರಿ ಗಳು ಬಳಸಿಕೊಳ್ಳುತ್ತಿದ್ದಾರೆ ಎಂಬ ಹೇಳಿಕೆಯಿಂದ ಇಡೀ ಜಿಲ್ಲೆಯ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿ ಮಾನಸಿಕ ಸ್ಥೈರ್ಯ ಕಳೆದುಕೊಳ್ಳುವಂತೆ ಮಾಡಿ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದೀರಿ. ಸಮಾಜದ ದೃಷ್ಟಿಯಲ್ಲಿ ಅಧಿಕಾರಿಗಳು ತಪ್ಪಿತಸ್ಥರು ಎಂದು ಬಿಂಬಿಸಿ ಜಿಲ್ಲೆಯ ಎಲ್ಲಾ ಅಧಿಕಾರಿ ವೃಂದಕ್ಕೆ ಅವಮಾನ ಮಾಡಿದ್ದೀರಿ. ಆದ್ದರಿಂದ ನಿಮ್ಮ ವಿರುದ್ಧ ಐಪಿಸಿ ಸೆಕ್ಷನ್ 189 ರಡಿ ಏಕೆ ಕ್ರಮ ಕೈಗೊಳ್ಳಬಾರದು? ಎಂದು ನೋಟೀಸ್ ತಲುಪಿದ ಒಂದು ದಿನದೊಳಗಾಗಿ ಸಮಜಾಯಿಷಿ ನೀಡುವುದು. ಇಲ್ಲದಿದ್ದರೆ ನಿಮ್ಮ ಹೇಳಿಕೆ ಏನೂ ಇಲ್ಲ ಎಂದು ಭಾವಿಸಿ ಕಾನೂನು ಕ್ರಮ ಕೈಗೊಳ್ಳಲಾಗು ವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ನೋಟೀಸ್‍ನಲ್ಲಿ ತಿಳಿಸಿದ್ದಾರೆ.

Translate »