ತೊಪ್ಪನಹಳ್ಳಿಯಲ್ಲಿ ಡಿಸಿ ಶಾಂತಿ ಸಭೆ

ಮದ್ದೂರು: ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಕೊಲೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ತೊಪ್ಪನಹಳ್ಳಿಯ ಮುತ್ತರಾಯಸ್ವಾಮಿ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಮಂಜುಶ್ರೀ ಅವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗ್ರಾಮದಲ್ಲಿ ಶಾಂತಿಯುತವಾಗಿ ಮತದಾನ ನಡೆಯಲು ಗ್ರಾಮಸ್ಥರು ಸಹಕಾರ ನೀಡಬೇಕು. ಯಾವುದೇ ಗಲಭೆಗೆ ಅವಕಾಶ ಮಾಡಿಕೊಡಬಾರದು. ಗ್ರಾಮಸ್ಥರು ಶಾಂತಿಯುತವಾಗಿ ಹಾಗೂ ಪ್ರೀತಿ ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ್‍ನಾರಾಯಣ್ ಮಾತನಾಡಿ, ಗ್ರಾಮದಲ್ಲಿ ಜೋಡಿ ಕೊಲೆ ಮತ್ತು 2018 ರಲ್ಲಿ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಗ್ರಾಮದ ಪ್ರಕಾಶ್ ಕೊಲೆಯಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ಉದ್ದೇಶದಿಂದ ಶಾಂತಿ ಸಭೆ ಹಮ್ಮಿಕೊಳ್ಳ ಲಾಗಿದೆ ಹಾಗೂ ಗ್ರಾಮಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಎಎಸ್ಪಿ ಬಲರಾಮೇಗೌಡ, ಡಿವೈಎಸ್ಪಿ ಶೈಲೇಂದ್ರ, ಸಿಪಿಐ ಮಹೇಶ್, ತಹಸೀಲ್ದಾರ್ ಗೀತಾ, ಚುನಾವಣಾಧಿಕಾರಿ ಚಂದ್ರಶೇಖರ್ ಇನ್ನಿತರರು ಹಾಜರಿದ್ದರು.