ಮಾನಸಿಕ ಅಸ್ವಸ್ಥ ಸಾವು

ಮೈಸೂರು:  ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಮಾನಸಿಕ ಅಸ್ವಸ್ಥನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಜಯಪುರ ಪೊಲೀಸ್ ಠಾಣೆ ಎದುರು ದೇವಸ್ಥಾನವಿದ್ದು, ಮಾನಸಿಕ ಅಸ್ವಸ್ಥನೋರ್ವ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಇದನ್ನು ಕಂಡ ಜಯಪುರ ಠಾಣೆ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಕೃಷ್ಣಮೂರ್ತಿರವರು ಕೂಡಲೇ ಪೆÇಲೀಸ್ ವಾಹನದಲ್ಲಿ ಕರೆದುಕೊಂಡು ಬಂದು ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.