ಎಚ್1ಎನ್1 ಜ್ವರದಿಂದ ವ್ಯಕ್ತಿ ಸಾವು
ಚಾಮರಾಜನಗರ

ಎಚ್1ಎನ್1 ಜ್ವರದಿಂದ ವ್ಯಕ್ತಿ ಸಾವು

December 26, 2018

ಯಳಂದೂರು: ತಾಲೂಕಿನ ವೈ.ಕೆ.ಮೋಳೆ ಗ್ರಾಮದ ನಿವಾಸಿ ಕೆ.ಶಂಕರ್ (40) ತೀವ್ರ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪತ್ನಿ ಶೋಭಾ ಸೇರಿದಂತೆ ಎರಡು ಹೆಣ್ಣು ಮಕ್ಕಳು, ಒಂದು ಗಂಡು ಮಗು ಆಗಲಿದ್ದಾರೆ. ಕಳೆದ  ಒಂದು ವಾರದಿಂದ ಜ್ವರ ಕಾಣಿಸಿಕೊಂಡಿತ್ತು. ಇದು ಎಚ್1ಎನ್1 ಎಂದು ಶಂಕಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ತೋರಿಸಿದರು ಕೂಡಾ ಗುಣ ಮುಖ ರಾಗಿದರಲಿಲ್ಲವಾದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಮೃತನ ಅಂತ್ಯ ಸಂಸ್ಕಾರ ಬುಧವಾರ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮದ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ನೇಸರ ಸಂಘದ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಮತ್ತು ಸ್ನೇಹಿತರು, ವೈ.ಕೆ.ಮೋಳೆ ಗ್ರಾಮದ ಸಂಘಸಂಸ್ಥೆಗಳು ಯಜಮಾನರು, ಕುಲಸ್ಥರು ಸಂತಾಪ ಸೂಚಿಸಿದ್ದಾರೆ.

Translate »