ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಕೊಡಗು

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

January 15, 2019

ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ವಿಶಿಷ್ಟ ಮತ್ತು ಅರ್ಥಪೂರ್ಣವಾಗಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಗೆ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿ ಕಾರಿ ಲಕ್ಷ್ಮಿಪ್ರಿಯ, ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿ ಗಣರಾ ಜ್ಯೋತ್ಸವ ಯಶಸ್ವಿಗೆ ಸಹಕರಿಸುವಂತೆ ಕೋರಿದರು.

ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕಳೆದ ಬಾರಿಯಂತೆ ಅರ್ಥ ಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಬೆಳಗಿನ ಹಾಗೂ ಸಂಜೆಯ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಅದೇ ರೀತಿ ಸ್ತಬ್ಧ ಚಿತ್ರಗಳನ್ನು ಸಹ ವಿಷಯಾಧಾರಿತವಾಗಿ ಆಕರ್ಷಣೀ ಯವಾಗಿ ನಿರ್ಮಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಉಪ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಯಿತು. ವಿವಿಧ ಕಾರ್ಯಕ್ರಮದಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳು ತೊಡಗಿಸಿಕೊಳ್ಳು ವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾತ ನಾಡಿ, ಉಪ ಸಮಿತಿಗಳು ತಮಗೆ ವಹಿಸಿರುವ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಐತಿಹಾಸಿಕ ಸಂದೇಶವನ್ನು ಒಳಗೊಂಡ ಸ್ತಬ್ಧಚಿತ್ರ ಗಳನ್ನು ನಿರ್ಮಾಣ ಮಾಡುವಂತೆ ಎಲ್ಲಾ ಅಭಿವೃದ್ಧಿ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಧಿ ಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಯಾರು ಸಹ ಗೈರು ಆಗಬಾ ರದು ಎಂದು ಅವರು ನಿರ್ದೇಶನ ನೀಡಿದರು.

ಮೆರವಣಿಗೆಯನ್ನು ನಗರದ ಕೋಟೆ ಆವರಣ ದಿಂದ ಪ್ರಾರಂಭಿಸಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ಸಾಗುವಂತೆ ನೋಡಿಕೊಳ್ಳಲು ಮೆರವಣಿಗೆ ಸಮಿತಿಗೆ ಸೂಚಿಸಲಾಯಿತು. ತಿಂಡಿ, ಲಘು ಉಪಾಹಾರ ಜವಬ್ದಾರಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೇಲು ಸ್ತುವಾರಿ ಆಹಾರ ಸಮಿತಿಗೆ ವಹಿಸಲಾಯಿತು. ಎಲ್ಲರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಹೇಳಿದರು.

ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವುದು, ಜತೆಗೆ ಸ್ವಚ್ಚತೆ ಸಂಬಂಧ ಅಗತ್ಯವಿರುವ ಕಡೆ ಕಸದಬುಟ್ಟಿ ಇಡುವುದು ಮತ್ತಿತರ ಕ್ರಮಗಳನ್ನು ಕೈಗೊಳ್ಳುವಂತೆ ಪೌರಾ ಯುಕ್ತರಿಗೆ ಸೂಚಿಸಲಾಯಿತು.

ವೇದಿಕೆಯನ್ನು ಲೋಕೋಪಯೋಗಿ ಹಾಗೂ ಜಿ.ಪಂ.ಎಂಜಿನಿಯರ್ ವಿಭಾಗದವರು ಅಚ್ಚು ಕಟ್ಟಾಗಿ ನಿರ್ಮಾಣ ಮಾಡುವಂತೆ ನಿರ್ದೇಶನ ನೀಡಲಾಯಿತು. ಉಪ ವಿಭಾಗಾಧಿಕಾರಿ ಟಿ.ಜವರೇ ಗೌಡ ಅವರು ಗಣರಾಜ್ಯೋತ್ಸವವನ್ನು ಅರ್ಥ ಪೂರ್ಣವಾಗಿ ಆಚರಿಸಲು ಪ್ರತಿಯೊಂದು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತೊಡಗಿಸಿಕೊಳ್ಳ ಬೇಕಿದೆ ಎಂದು ಅವರು ಸಲಹೆ ಮಾಡಿದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿಎಚ್‍ಒ ರಾಜೇಶ್, ಸಹಾಯಕ ಕಾರ್ಯ ದರ್ಶಿ ಬಾಬು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಎಸ್.ಸದಾಶಿವಯ್ಯ, ಡಿಡಿಪಿಐ ಮಚ್ಚಾಡೋ, ಪೌರಾಯುಕ್ತ ರಮೇಶ್, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ಮುದ್ರಾಂಕ ಇಲಾಖೆಯ ಉಪ ನಿರ್ದೇಶಕ ಸಿದ್ದರಾಜು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಜಗನ್ನಾಥ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ರೇಷ್ಮ, ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕಿ ಗೀತಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್, ಕಾರ್ಮಿಕ ಇಲಾಖೆ ಅಧಿಕಾರಿ ಯತ್ನಟಿ, ಪ್ರಾದೇಶಿಕ ಸಾರಿಗೆ ಕಚೇರಿಯ ವ್ಯವಸ್ಥಾಪಕ ಶಿವಣ್ಣ, ಶಿರಸ್ತೆದಾರ ಪ್ರಕಾಶ್, ಅನಿಲ್ ಕುಮಾರ್ ಇತರರು ಇದ್ದರು.

Translate »