ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಬದಲಾವಣೆಗೆ ಆಗ್ರಹ
ಮೈಸೂರು

ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಬದಲಾವಣೆಗೆ ಆಗ್ರಹ

June 7, 2019

ಬೆಂಗಳೂರು, ಜೂ.6-ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಬದಲಾಯಿಸಬೇಕೆಂಬ ಆಗ್ರಹ ಹಿರಿಯ ಕಾಂಗ್ರೆಸ್ ನಾಯಕರಿಂದ ಕೇಳಿಬರುತ್ತಿದೆ. ಪಕ್ಷದ ಆಂತರಿಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವೇಣುಗೋಪಾಲ್ ವಿಫಲರಾಗಿದ್ದಾರೆ. ಅವರಿಗೆ ಕರ್ನಾಟಕ ರಾಜಕಾರಣದ ಗ್ರೌಂಡ್ ರಿಯಾಲಿಟಿಯೇ ಗೊತ್ತಿಲ್ಲ. ಪ್ರತೀ ಹಂತದಲ್ಲೂ ಒರಟು ತನ ಪ್ರದರ್ಶಿಸುತ್ತಾರೆ. ಪಕ್ಷ ಸಂಘಟನೆಗೆ ಪರಿಣಾಮಕಾರಿಯಾದ ಯಾವುದೇ ಯೋಜನೆ ರೂಪಿಸಿಲ್ಲ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಹಿರಿಯ ನಾಯಕರುಗಳು ವೇಣು ಗೋಪಾಲ್ ಅವರನ್ನು ಕರ್ನಾಟಕ ಉಸ್ತುವಾರಿಯಿಂದ ಬದಲಾಯಿಸಬೇಕೆಂದು ಆಗ್ರಹಿಸಿದ್ದಾರೆ.

Translate »