ಮತಾಂತರ ಕಾಯಿದೆ ಜಾರಿಯಾದರೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರದ್ದು

ಬೆಂಗಳೂರು, ಡಿ. ೧೭ (ಕೆಎಂಶಿ)- ಮತಾಂತರ ನಿಷೇಧ ಕಾಯಿದೆ ಜಾರಿಗೆ ಬಂದರೆ ಅದನ್ನು ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ಬಂದಾಗ ರದ್ದುಗೊಳಿಸುವುದಾಗಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೆöÊಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯ್ದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿ ಸುವುದಾಗಿ ತಿಳಿಸಿದರು.

ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ ಕೋಮು ಸೌಹಾರ್ದ ಹಾಳು ಮಾಡುವುದೇ ಇದರ ಉದ್ದೇಶ. ಕಾಂಗ್ರೆಸ್ ಪಕ್ಷ ಸದಾ ಕ್ರಿಶ್ಚಿಯನ್ ಸಮುದಾಯದ ಜೊತೆಗಿರುತ್ತದೆ. ಈ ಸಮುದಾಯದವರಿಗೆ ತೊಂದರೆ ಯಾಗಲು ಅವಕಾಶ ನೀಡುವುದಿಲ್ಲ ಎಂದರು. ಸಂವಿಧಾನದ ಪ್ರಕಾರ ದೇಶದ ಪ್ರಜೆ ತನ್ನ ಆಸಕ್ತಿ ಹಾಗೂ ಇಚ್ಛೆಗೆ ಸೂಕ್ತವಾದ ಧರ್ಮವನ್ನು ಆರಿಸಿಕೊಳ್ಳುವ, ಪಾಲಿಸುವ ಮತ್ತು ಸಂಭ್ರಮಿಸುವ ಹಕ್ಕು ಇದೆ. ಇದಕ್ಕೆ ವಿರುದ್ಧವಾಗಿ ಸರ್ಕಾರ ಕಾನೂನು, ಕಾಯಿದೆ ತರುವುದು ಸಂವಿಧಾನ ಬಾಹಿರ ತಮಗೆ ಬಹುಮತ ಇದೆ ಎನ್ನುವ ಕಾರಣಕ್ಕೆ ಸಂವಿಧಾನದ ಮೇಲೆ ಸವಾರಿ ಮಾಡುವ ಹಾಗೂ ತನಗೆಬೇಕಾದ ಕಾಯಿದೆಗಳನ್ನು ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಬಾರದು. ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮಾನ ಅವಕಾಶ ನೀಡಲಾಗಿದೆ. ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಈ ಸಮು ದಾಯದವರು ನಡೆಸುವ ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ಒಂದು ಸಮುದಾಯದವರು ಮಾತ್ರ ಹೋಗುವುದಿಲ್ಲ. ಹೋಗುವ ಎಲ್ಲರೂ ಮತಾಂತರ ಆಗಿಲ್ಲ. ಅದಕ್ಕಾಗಿ ಬಲ ವಂತವೂ ನಡೆಯುತ್ತಿಲ್ಲ. ತಮಗೆ ಇಷ್ಟವಾದ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ದೇಶದ ಪ್ರಜೆಗಳಿಗೆ ಇದೆ. ಯಾವುದೋ ಒಂದು ಧರ್ಮವನ್ನು ಆಧಾರವಾಗಿಟ್ಟುಕೊಂಡು ಸಂವಿಧಾನ ರಚನೆ ಮಾಡಿಲ್ಲ. ಸಂವಿಧಾನದಿAದ ಒಳ್ಳೆಯದು ಆಗಬೇಕು ಎಂದಾದರೆ ಆಡಳಿತ ಒಳ್ಳೆಯವರ ಕೈಯ್ಯಲ್ಲೇ ಇರಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ್ದರು. ಬಿಜೆಪಿಯವರಿಗೆ ಚರ್ತುವರ್ಣ ವ್ಯವಸ್ಥೆಯಲ್ಲಿ ನಂಬಿಕೆ ಹೆಚ್ಚು. ಹೀಗಾಗಿಯೇ ಇಂಥ ಕಾಯಿದೆ ಗಳ ಜಾರಿಗೆ ಮುಂದಾಗಿದೆ ಎಂದರು.