ದಿನೇಶ್ ಗುಂಡೂರಾವ್ ಭೇಟಿ ಮಾಡಿದ ಪಪಂ ಸದಸ್ಯರು
ಕೊಡಗು

ದಿನೇಶ್ ಗುಂಡೂರಾವ್ ಭೇಟಿ ಮಾಡಿದ ಪಪಂ ಸದಸ್ಯರು

November 17, 2018

ಕುಶಾಲನಗರ: ಇಲ್ಲಿನ ಪ.ಪಂ, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಸದಸ್ಯರ ನಿಯೋಗವು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಪಟ್ಟಣದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಪ.ಪಂ. ಸದಸ್ಯರಾದ ಪ್ರಮೋದ್ ಮುತ್ತಪ್ಪ, ಸುಂದರೇಶ್, ಜಯಲಕ್ಷ್ಮಿ, ಜಯಲಕ್ಷಮ್ಮ, ಹಾಗೂ ಕಾಂಗ್ರೆಸ್ ಮುಖಂಡರು ಬೆಂಗ ಳೂರಿಗೆ ತೆರಳಿದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

ಕುಶಾಲನಗರ ಪಟ್ಟಣ ಪಂಚಾಯಿತಿ ಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸ ಬೇಕು, ಕಾವೇರಿ ತಾಲ್ಲೂಕು ರಚನೆಗೆ ಒತ್ತು ನೀಡಬೇಕು. ಪಟ್ಟಣದಲ್ಲಿ ಸ್ಥಗಿತಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ವಾಗಿ ಪೂರ್ಣಗೊಳಿಸಬೇಕು ಎಂಬಿತ್ಯಾದಿ ಮನವಿಯನ್ನು ಸಲ್ಲಿಸಲಾಗಿದೆ ಎಂದು ಶಶಿಧರ್ ತಿಳಿಸಿದರು. ಈ ಸಂದರ್ಭ ಜಿ.ಪಂ.ಸದಸ್ಯೆ ಕೆ.ಪಿ.ಚಂದ್ರ ಕಲಾ, ಕಾಂಗ್ರೆಸ್ ಮುಖಂಡರಾದ ಕೆ.ಕೆ.ಮಂಜುನಾಥ್ ಕುಮಾರ್, ಮಹಾದೇವ್, ಆನಂದ್, ನಂಜುಂಡಸ್ವಾಮಿ, ಜಯಪ್ರಕಾಶ್ ಇದ್ದರು.
ನೂತನ ಸದಸ್ಯರಿಗೆ ಅಭಿನಂದನೆ: ಪಪಂ ಚುನಾವಣೆಯಲ್ಲಿ ಗೆಲವು ಸಾಧಿಸಿದ ಸದಸ್ಯರಿಗೆ ಹೂಗುಚ್ಛ ನೀಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗೂಂಡೂರಾವ್ ಅಭಿನಂದಿಸಿ, ಜೊತೆಗೆ ಪರಾಜಿತಗೊಂಡ ಅಭ್ಯರ್ಥಿಗಳಿಗೂ ಬೆನ್ನುತಟ್ಟಿ ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು ಎನ್ನಲಾಗಿದೆ.

Translate »