ವ್ಯವಸ್ಥಿತವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
ಕೊಡಗು

ವ್ಯವಸ್ಥಿತವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

March 14, 2019

ಮಡಿಕೇರಿ: ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವ್ಯವ ಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಸಂಬಂಧ ಬುಧವಾರ ನಡೆದ ಸಭೆ ಯಲ್ಲಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರದಲ್ಲಿ ಸಿಸಿ ಟಿವಿ ಅಳವಡಿಸುವುದು, ಕುಡಿಯುವ ನೀರು ವ್ಯವಸ್ಥೆ ಮಾಡು ವುದು, ಸೂಕ್ತ ಭದ್ರತೆ ಕಲ್ಪಿಸುವುದು ಮತ್ತಿ ತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳು ವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಎಸ್‍ಎಸ್‍ಎಲ್‍ಸಿ ಪ್ರಶ್ನೆ ಪತ್ರಿಕೆ ಸಂಬಂ ಧಿಸಿದಂತೆ ತಹಶೀಲ್ದಾರರು, ಕ್ಷೇತ್ರ ಶಿಕ್ಷ ಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಖಜಾನಾಧಿಕಾರಿಗಳು ಅಗತ್ಯ ಕ್ರಮವಹಿಸ ಬೇಕು. ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ನಡೆಸು ವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಪಂ ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವ ಕಾಶ ನೀಡಬಾರದು ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ ಈ ಬಾರಿ ಜಿಲ್ಲೆ ಯಲ್ಲಿ 6,832 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಪರೀಕ್ಷೆಯು ಬೆಳಗ್ಗೆ 9.30 ಗಂಟೆಗೆ ಆರಂಭವಾಗಲಿದ್ದು, 9.45ರ ನಂತರ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪ್ರವೇಶ ವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆ ಸಲು ಎಲ್ಲರೂ ಸಹಕರಿಸುವಂತೆ ಕೋರಿ ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಾಯತ್ರಿ (ಮಡಿಕೇರಿ), ನಾಗರಾಜಯ್ಯ (ಸೋಮ ವಾರಪೇಟೆ), ಶ್ರೀಶೈಲ ಬೀಳಗಿ(ವಿರಾಜ ಪೇಟೆ), ಮುಖ್ಯ ಶಿಕ್ಷಕರು ಇತರರು ಇದ್ದರು.

Translate »