ಮನೆಗೆಲಸದವರು, ಸಹಾಯಕರು, ವಾಹನ  ಚಾಲಕರಿಗೆ ಮಾಲೀಕರು ವೇತನ ಕಡಿತ ಮಾಡಬೇಡಿ
ಮೈಸೂರು

ಮನೆಗೆಲಸದವರು, ಸಹಾಯಕರು, ವಾಹನ  ಚಾಲಕರಿಗೆ ಮಾಲೀಕರು ವೇತನ ಕಡಿತ ಮಾಡಬೇಡಿ

April 5, 2020

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ

ಬೆಂಗಳೂರು, ಏ. 4- ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಲಸಕ್ಕೆ ಬಾರಲು ಸಾಧ್ಯವಾಗದ ಕಾರ್ಮಿಕರ ವೇತನ ವನ್ನು ಅವರ ಮಾಲೀಕರು ಸದ್ಯದ ಪರಿಸ್ಥಿತಿಯಲ್ಲಿ ಕಡಿತ ಮಾಡ ಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗದ ಮನೆಗೆಲಸದವರು, ಸಹಾಯಕರು ಮತ್ತು ವಾಹನ ಚಾಲಕರಿಗೆ ಮಾಲೀಕರು ವೇತನ ಕಡಿತ ಮಾಡಬೇಡಿ. ಆರ್ಥಿಕ ಸಂಕಷ್ಟದ ಈ ಸಮಯದಲ್ಲಿ ಕಾರ್ಮಿಕರಿಗೆ, ಕೂಲಿ ಕೆಲಸದವರು, ಬಡವರಿಗೆ ಸಹಾನುಭೂತಿಯಿಂದ ನೆರವಾಗಿ ಎಂದು ಮಾಲೀಕರನ್ನು ಮುಖ್ಯಮಂತ್ರಿಗಳು ಕೋರಿಕೊಂಡಿದ್ದಾರೆ.

 

 

Translate »