ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಡಾ.ಕಾವೇರಿ ಪ್ರಕಾಶ್ ಆಯ್ಕೆ

ಮೈಸೂರು: ಕೊಡವರ ಆಚಾರ-ವಿಚಾರ, ಜನಪದ ಕಲೆ, ಸಂಸ್ಕಾರ ಸಂಸ್ಕøತಿಗಳ ಸಂಶೋಧನೆಗಾಗಿ ಕೊಡಗು ಜಿಲ್ಲೆಯ ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶು ಪಾಲರಾದ ಡಾ.ಕಾವೇರಿ ಪ್ರಕಾಶ್ ಅವರನ್ನು ಆಯ್ಕೆ ಮಾಡಲಾ ಗಿದೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಬೆಂಗಳೂರು ಹಾಗೂ ಮುದ್ದೆಬಿಹಾಳ ತಾಲೂಕು ಯುವ ಸಂಘಗಳ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದ ವಿಬಿಸಿ ಮೈದಾನದಲ್ಲಿ ಫೆ.1ರಂದು ಸಂಜೆ 5 ಗಂಟೆಗೆ ನಡೆಯುವ ಸ್ವಾಮಿ ವಿವೇಕಾನಂದರ 157ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಾನಪದ ಗಾಯಕ ಅಮ್ಮ ರಾಮಚಂದ್ರ ತಿಳಿಸಿದ್ದಾರೆ.